Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
(ರಾಜ್ಯ ) ಜಿಲ್ಲೆ

ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ತಾಲೂಕಿನ ಅವಿಮುಕ್ತ ಕ್ಷೇತ್ರ ಯರನಾಳ ಗ್ರಾಮದ ವಿರಕ್ತಮಠದ ಕರ್ತೃ ಜಗದ್ಗುರು ಪಂಪಾಪತಿ ಶಿವಯೋಗಿಗಲ ಜಾತ್ರಾಮಹೋತ್ಸವ, ಜ್ಞಾನ ದಾಸೋಹಿ ಬಂಥನಾಳದ ಸಂಗನಬಸವ ಶಿವಯೋಗಿಗಳ 125 ನೇ ಜಯಂತಿ, ನೂತನ ಮಹಾದ್ವಾರ ಲೋಕಾರ್ಪಣೆ ಮತ್ತು ದ್ವಿಸಹಸ್ರ ಮಾತೆಯರ ಉಡಿತುಂಬುವ ಕಾರ್ಯಕ್ರಮ ಹಾಗೂ ಮಹಾರಥೋತ್ಸವದಂಗವಾಗಿ ಭಾನುವಾರ ಶ್ರೀಮಠದಲ್ಲಿ ಉತ್ತರ ಕರ್ನಾಟಕ ಸಾಂಸ್ಕ್ರತಿಕ ಬಿಂಬಿಸುವಂತಹ ವಿಶೇಷ ಸದ್ಭಾವನ ಬುತ್ತಿ ಊಟ ಕಾರ್ಯಕ್ರಮದಲ್ಲಿ ಸದ್ಭಕ್ತರು ವಿವಿಧ ಭಕ್ಷ್ಯಗಳ ಸವಿಯನ್ನು ಸವಿದು ಸಂಭ್ರಮಿಸಿದರು.
ಜಾತ್ರಾಮಹೋತ್ಸವದಂಗವಾಗಿ ಸದ್ಭಾವನ ಬುತ್ತಿ ಊಟದಂಗವಾಗಿ ಗ್ರಾಮದ ಮಹಿಳೆಯರು ತಮ್ಮ ತಮ್ಮ ಮನೆಗಳಲ್ಲಿ ರೊಟ್ಟಿ, ಚಪಾತಿ, ಹಿಟ್ಟಿನ ಪಲ್ಲ್ಯೆ, ಬದನೇಕಾಯಿ ಪಲ್ಯ್ಲೆ, ಪುಂಡಿ ಪಲ್ಯ್ಲೆ, ಕಾಳು ಪಲ್ಲ್ಯೆ, ಹಿಂಡಿ, ಮೆಣಸಿಕಾಯಿ ಚಟ್ನಿ, ಮೊಸರು, ರವೆ ಉಂಡಿ, ಶೇಂಗಾದ ಹೊಳಿಗೆ, ಮಾದಲಿ, ಉಳಿಬಾನ, ಅನ್ನ ಸಾರು ಸೇರಿದಂತೆ ವಿವಿಧ ಭಕ್ಷ್ಯಗಳನ್ನು ತಯಾರಿ ಮಾಡಿಕೊಂಡು ಬುತ್ತಿ ಕಟ್ಟಿಕೊಂಡು ಗ್ರಾಮದ ಗೌರಿಶಂಕರ ದೇವಸ್ಥಾನದಿಂದ ಮೆರವಣಿಗೆ ಮೂಲಕ ಶ್ರೀಮಠಕ್ಕೆ ಆಗಮಿಸಿದರು. ಶ್ರೀಮಠಕ್ಕೆ ತಲುಪಿದ ನಂತರ ಮಹಿಳೆಯರು ತಾವು ತಯಾರಿಸಿದ ವಿವಿಧ ಅಡುಗೆ ಪದಾರ್ಥಗಳನ್ನು ಒಪ್ಪಿಸಿದ ನಂತರ ಎಲ್ಲ ಅಡುಗೆ ಪದಾರ್ಥಗಳನ್ನು ಜಾತ್ರಾಮಹೋತ್ಸವಕ್ಕೆ ಆಗಮಿಸಿದ ಎಲ್ಲ ಸದ್ಭಕ್ತರಿಗೆ ಬುತ್ತಿ ಊಟ ಬಡಿಸಲಾಯಿತು.
ವಿವಿಧ ಭಕ್ಷ್ಯಗಳನ್ನು ಸವಿದ ಸದ್ಭಕ್ತರು ಸಂಭ್ರಮಿಸಿ ಎಳ್ಳ ಅಮವಾಸ್ಯೆ ದಿನವನ್ನು ಸ್ಮರಿಸಿಕೊಂಡರು.
ಗ್ರಾಮದ ನಾಗಮ್ಮ ಹಿರೇಮಠ, ಶಾಂತಾ ನರಗುಂದ, ಅನ್ನಕ್ಕ ಗುಳೇದ, ಶಾಂತಾ ಪಾಟೀಲ ಅವರನ್ನು ಮಾತನಾಡಿಸಿದಾಗ ಪ್ರತಿ ವರ್ಷದ ಶ್ರೀಮಠದ ಜಾತ್ರೆಯಂಗವಾಗಿ ಶ್ರೀಗಳು ಒಂದು ತರಹದ ಅಡುಗೆ ಮಾಡಲು ಎಲ್ಲ ಮಹಿಳೆಯರಿಗೆ ಹೇಳುತ್ತಾರೆ. ಕಳೆದ ವರ್ಷ ಕರಿಕಡಬು ಮಾಡಲು ಹೇಳಿದ್ದರು.
ಈ ವರ್ಷ ನಮಗೆ ವಿವಿಧ ತರಹದ ಉತ್ತರ ಕರ್ನಾಟಕದ ಪದಾರ್ಥಗಳನ್ನು ಮಾಡಿಕೊಂಡು ಬರಲು ತಿಳಿಸಿದ್ದರು. ಅದರಂತೆ ನಾವು ವಿವಿಧ ಅಡುಗೆ ಪದಾರ್ಥಗಳನ್ನು ಮಾಡಿಕೊಂಡು ಬಂದು ದಾಸೋಹ ಸೇವೆ ಗೈದು ಸಂತೃಪ್ತಿ ಹೊಂದಿರುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಸಂಗೀತಗಾರರಾದ ವಿರೇಶ ವಾಲಿ, ಸಿದ್ದಾರ್ಥ ಬೈಚಬಾಳ ಅವರು ಸಂಗೀತ ಸುಧೆ ಹರಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸದ್ದಿಲ್ಲದೆ ಜಲಯೋಗದ ಸಾಧನೆ ಗೈದ ಪತ್ರಕರ್ತ ಸುನೀಲ ಗೋಡೆನ್ನವರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ
    In ವಿಶೇಷ ಲೇಖನ
  • ನೆನಪಿನ ಗೂಡಲಿ ಒಲವಿನ ಬೆಳಕು
    In ವಿಶೇಷ ಲೇಖನ
  • ಅಪ್ಪನೆಂದರೆ ಆಲದ ಮರ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026
    In ದಿನಪತ್ರಿಕೆ
  • ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.