Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಲೂಕಿನಲ್ಲಿ ಗಾರ್ಮೆಂಟ್ಸ್ ಮತ್ತು ಮಾರುಕಟ್ಟೆ ಸ್ಥಾಪನೆಗೆ ಮಮತ ಮನವಿ
(ರಾಜ್ಯ ) ಜಿಲ್ಲೆ

ತಾಲೂಕಿನಲ್ಲಿ ಗಾರ್ಮೆಂಟ್ಸ್ ಮತ್ತು ಮಾರುಕಟ್ಟೆ ಸ್ಥಾಪನೆಗೆ ಮಮತ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಹೆಚ್ ಡಿ ಕೋಟೆ: ಎರಡು ಬಾರಿ ಗೆದ್ದು ಇತಿಹಾಸ ನಿರ್ಮಿಸಿರುವ ಶಾಸಕ ಅನಿಲ್ ಚಿಕ್ಕಮಾದು ಅವರು ಅವಳಿ ತಾಲೂಕಿನ ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ಹೆಚ್ ಡಿ ಕೋಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿ ತೆರೆದು ಉದೋಗ್ಯ ನೀಡಬೇಕೆಂದು ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಸಹಕಾರ ವಿಭಾಗದ ಹೆಚ್ ಡಿ ಕೋಟೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾದ ಮಮತ ನವೀನ್ ಕುಮಾರ್ ಮನವಿ ಮಾಡಿದ್ದಾರೆ.
ತಾಲೂಕಿನ ಯರಹಳ್ಳಿಯಲ್ಲಿ ಮಾತನಾಡಿದ ಮಮತ ನವೀನ್ ಕುಮಾರ್, ಶಾಸಕ ಅನಿಲ್ ಚಿಕ್ಕಮಾದು ಅವರು ಅನೇಕ ಅಭಿವೃದ್ಧಿ ಕೆಲಸ ಕಾರ್ಯ ಮಾಡುತ್ತಾ ಬರುತ್ತಿದ್ದಾರೆ. ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಕಳಚಲು ಸರ್ಕಾರದಿಂದ ಅನುದಾನ ತಂದು ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸ ಕೈಗೆತ್ತಿಕೊಂಡಿದ್ದಾರೆ. ಆದರೆ ಹೆಚ್ ಡಿ ಕೋಟೆ, ಸರಗೂರು ತಾಲೂಕಿನಲ್ಲಿ ಯಾವುದೇ ಗಾರ್ಮೆಂಟ್ಸ್ ಫ್ಯಾಕ್ಟರಿ ಇಲ್ಲದ ಹಿನ್ನೆಲೆ ಅವಳಿ ತಾಲೂಕಿನ ಮಹಿಳೆಯರು ಕೆಲಸಕ್ಕಾಗಿ ಮೈಸೂರಿಗೇ ಹೋಗಬೇಕಾಗಿದೆ. ಇದರಿಂದ ಸಾಕಷ್ಟು ಕಾಲಹರಣ ಆಗುತ್ತಿದ್ದು, ಕುಟುಂಬ ನಿರ್ವಹಣೆಗೂ ಅನಾನುಕೂಲವಾಗಿದೆ. ಹೀಗಾಗಿ ಶಾಸಕರು ಮುಂಬರುವ ವಿಧಾನಸಭಾ ಚುನಾವಣೆಯೊಳಗೆ ಹೆಚ್ ಡಿ ಕೋಟೆ ಅಥವಾ ಸುತ್ತಮುತ್ತಲಿನ ಪ್ರದೇಶದಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿ ತೆರೆದು, ಮಹಿಳೆಯರಿಗೆ ಇಲ್ಲೇ ಕೆಲಸ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹಳ್ಳಿಗಳಿಂದ ಆವೃತ್ತವಾಗಿರುವ ಅವಳಿ ತಾಲೂಕಿನ ಬಹುತೇಕ ಮಂದಿಗೆ ವ್ಯವಸಾಯ ಬಿಟ್ಟು ಬೇರೆ ಉದ್ಯೋಗ ಗೊತ್ತಿಲ್ಲ. ವ್ಯವಸಾಯವನ್ನೇ ನಂಬಿ ಜೀವನ ನಡೆಸುತ್ತಿರುವ ರೈತರಿಗೆ ಬೆಳೆಗೆ ಉತ್ತಮ ಬೆಲೆ ಕೂಡ ಸಿಗುತ್ತಿಲ್ಲ. ಅತಿವೃಷ್ಟಿ, ಅನಾವೃಷ್ಟಿ ನಡುವೆ ಮಧ್ಯವರ್ತಿಗಳ ಹಾವಳಿ ಕೂಡ ಜೋರಾಗಿದೆ. ಹೀಗಾಗಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಸಿಗಬೇಕಾದರೆ, ಹ್ಯಾಂಡ್ ಪೋಸ್ಟ್ ಅಕ್ಕಪಕ್ಕ ಮಾರುಕಟ್ಟೆ ತೆರೆಯಬೇಕು. ಈ ಮೂಲಕ ಮಾರುಕಟ್ಟೆಯ ಬೆಲೆ ನೇರವಾಗಿ ರೈತರಿಗೆ ಸಿಗುವಂತೆ ಶಾಸಕರು ಮಾಡಬೇಕೆಂದು ಮಮತ ನವೀನ್ ಕುಮಾರ್ ಮನವಿ ಮಾಡಿದ್ದಾರೆ.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.