Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
(ರಾಜ್ಯ ) ಜಿಲ್ಲೆ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಎಸ್ ಆರ್ ಎಸ್ ಎಸಿ, ಡಿಪಿಎಆರ್ ನಿರ್ದೇಶಕ ರಾಜೇಶ ಎನ್. ಎಲ್. ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೆಜಿಐಎಸ್ ೨.೦ ವ್ಯವಸ್ಥೆಯ ಬಳಕೆ, ಅನುಷ್ಠಾನ ಕುರಿತು ಕಾರ್ಯಾಗಾರದ ಮೂಲಕ ವಿವಿಧ ಮಟ್ಟಗಳಲ್ಲಿ ಸಮನ್ವಯವನ್ನು ಬಲಪಡಿಸಿ, ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡುವುದು ಮುಖ್ಯ ಉದ್ದೇಶವಾಗಿದೆ ಎಂದು ಕೆಎಸ್ ಆರ್ ಎಸ್ ಎಸಿ, ಡಿಪಿಎಆರ್ ನಿರ್ದೇಶಕ ರಾಜೇಶ ಎನ್. ಎಲ್. ಹೇಳಿದರು.
ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಕೆಜಿಐಎಸ್ ೨.೦ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಈ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮನ್ವಯತೆ ಮುಖ್ಯವಾಗಿದ್ದು, ಎಲ್ಲರೂ ಪರಸ್ಪರ ಸಹಕಾರ ನೀಡಬೇಕು ಎಂದರು.
ಸಿಬ್ಬAದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ-ಆಡಳಿತ) ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರವು, ಕರ್ನಾಟಕ ಭೌಗೋಳಿಕ ಮಾಹಿತಿ ವ್ಯವಸ್ಥೆ ಆವೃತ್ತಿ ಯೋಜನೆಯನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಈ ಯೋಜನೆಯ ಆವೃತ್ತಿ ೨.೦ ಅನ್ನು ಅನುಷ್ಠಾನ ಹಾಗೂ ಯಶಸ್ವಿಗೆ ಎಲ್ಲ ಇಲಾಖೆಗಳ ಭಾಗವಹಿಸುವಿಕೆ ಅಗತ್ಯವಾಗಿದೆ ಎಂದವರು ಹೇಳಿದರು.
ಇದು ಜಿಐಎಸ್ ಆಧಾರಿತ ನೈಜ-ಸಮಯದ ದತ್ತಾಂಶ, ಆಧುನಿಕ ವಿಶ್ಲೇಷಣೆ ಮತ್ತು ತಾಂತ್ರಿಕ ಸಾಮರ್ಥ್ಯಗಳನ್ನು ಸಂಯೋಜಿಸುವ ಗುರಿಯೊಂದಿಗೆ ತ್ವರಿತವಾಗಿ ನಾಗರಿಕರು ಮತ್ತು ಇಲಾಖಾ -ಅಧಿಕಾರಿಗಳು, ಭೂಶಿಕ ಮಾಹಿತಿಯೊಂದಿಗೆ ವ್ಯವಹಾರ ನಡೆಸಲು ಹಾಗೂ ಓoಅ ಗಳನ್ನು ನೀಡಲು, ಸುಧಾರಿತ ಆSS ಅನ್ವಯಿಕೆಗಳನ್ನು ಅಭಿವೃದ್ಧಿಪಡಿಸುವ ಉದ್ದೇಶ ಹೊಂದಿದೆ ಎಂದರು.
ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿಗಳ ಸ್ಥಳೀಯ ಸಮಸ್ಯೆಗಳಿಗೆ ಜಿಐಎಸ್ ಮೂಲಕ ಒದಗಿಸಬಹುದಾದ ತಾಂತ್ರಿಕ ಪರಿಹಾರಗಳನ್ನು ಅಳವಡಿಸಲು, ಜಿಲ್ಲಾ ಮಟ್ಟದ ಇಲಾಖೆಗಳಿಗೆ ಅವಶ್ಯವಿರುವ ಜಿಐಎಸ್ ತಂತ್ರಾAಶ ಮತ್ತು ದತ್ತಾಂಶಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದರು.
ಏಪ್ರಿಲ್ ೦೨ ರಂದು ಚಾಮರಾಜನಗರದಲ್ಲಿ ಅದರಂತೆ ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೆಜಿಐಎಸ್ ಕುರಿತು ಕಾರ್ಯಗಾರ ಮಾಡುತ್ತೇವೆ, ಇದರಿಂದ ಆ ಜಿಲ್ಲೆಯ ಸಮಸ್ಯೆಗಳನ್ನು ಕಡಿಮೆಗೊಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸದ್ಯದಲ್ಲಿ ಒಟ್ಟು ೨೫೧ ಆಪ್ಲಿಕೇಶನ್ ಇದ್ದು ಅದರಲ್ಲಿ ೧೦೧ ಆಪ್ಲಿಕೇಶನ್ ಗಳು ಚಾಲತಿಯಲ್ಲಿವೆ ಅದರಲ್ಲಿ ೪೧ ಆಪ್ಲಿಕೇಶನ್ ಗಳು ಮೊಬೈಲ್ ಬಳಕೆಗೆ ಮತ್ತು ೬೧ ಆಪ್ಲಿಕೇಶನ್ ವೆಬ್ ಸೈಟ್ ಗಳು ಉಪಯೋಗ ಮಾಡಬಹುದು.
ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಮಾತನಾಡಿ, ಕೆಜಿಐಎಸ್ ೨.೦ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮಾಹಿತಿ ಅರಿತುಕೊಳ್ಳಬೇಕು. ಈ ಯೋಜನೆಯಿಂದ ಸುಗಮ ಕಾರ್ಯನಿರ್ವಹಣೆಗೆ ಸಹಕಾರಿಯಾಗಿದೆ. ಅನುಷ್ಠಾನಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.
ನಿವೃತ್ತ ಐಎಎಸ್ ಅಧಿಕಾರಿ ಡಾ.ರಾಜಕುಮಾರ ಕತ್ರಿ ಅವರು ವಿಡಿಯೋ ಸಂವಾದದ ಮೂಲಕ ಮಾತನಾಡಿ, ಈ ತಂತ್ರಾಶ ಬಳಕೆಯಿಂದ ಶೀಘ್ರ, ಸುಲಲಿತ ಹಾಗೂ ತುರ್ತು ನಿರ್ಣಯ ಕೈಗೊಳ್ಳಲು ಅತ್ಯಂತ ಸಹಕಾರಿಯಾಗಿದೆ. ಇಂತಹ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಅತ್ಯಂತ ಆಸ್ಥೆ ವಹಿಸಿ ಇಂತಹ ಮಹತ್ವಪೂರ್ಣ ಕಾರ್ಯ ಅನುಷ್ಠಾನಗೊಳ್ಳಲು ಮುತುವರ್ಜಿ ವಹಿಸಿದ್ದಾರೆ ಎಂದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಈ ತಂತ್ರಾಂಶದ ಬಳಕೆ ಮಾಡಿ, ಸಮಸ್ಯೆ ಸರಳವಾಗಿ ಪರಿಹರಿಸಿಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ನಡೆಯುವ ಈ ಶಿಬಿರದ ಸದುಪಯೋಗಪಡಿಸಿಕೊಳ್ಳುವಂತೆ ಅವರು ಹೇಳಿದರು.
ಜಿಲ್ಲಾ ಪಂಚಾಯತಿಯ ಕಾರ್ಯನಿರ್ಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಕೆಜಿಐಎಸ್-೨ ಸದ್ಭಳಕೆ ಮಾಡಿಕೊಳ್ಳಲು ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಇದು ತಂತ್ರಜ್ಞಾನ ಯುಗವಾಗಿದೆ. ನಮ್ಮ ರಾಜ್ಯ ಮಾಹಿತಿ ತಂತ್ರಜ್ಞಾನಕ್ಕೆ ಹೆಸರುವಾಸಿ. ಕಾಲಕಾಲಕ್ಕೆ ಅಭಿವೃದ್ಧಿ ಪಡಿಸುವ ತಂತ್ರಜ್ಞಾನ ಮೈಗೂಡಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ತ್ವರಿತಗತಿಯಲ್ಲಿ ತಲುಪಿಸಲು ಕಾರ್ಯನಿರ್ವಹಿಸಬೇಕು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರ, ಚೆಕ್ ಡ್ಯಾಂ, ಗ್ರಾಪಂ ಮಟ್ಟದ ಆಸ್ತಿ ಮಾಹಿತಿ, ಅಂಗನವಾಡಿ ಕೇಂದ್ರ ನಾನಾ ಮಾಹಿತಿಯನ್ನು ಸುಲಭವಾಗಿ ಪಡೆಯಬಹುದಾಗಿದೆ. ಈ ಕಾರ್ಯಾಗಾರ ನಮ್ಮ ಜಿಲ್ಲೆಯಿಂದ ಆರಂಭವಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಈ ತಂತ್ರಾಂಶ ಬಳಸಿಕೊಳ್ಳುವಂತೆ ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಸ್ವಾಗತಿಸಿ ವಂದಿಸಿದರು. ಕ್ರೀಡಾಧಿಕಾರಿ ರಾಜಶೇಖರ ದೈವಾಡಿ ನಿರೂಪಿಸಿದರು. ಕಾರ್ಯಾಗಾರದಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.