ಯಶೋಧಾ ಚೈತ್ರೋತ್ಸವ-2026 ಕ್ರೀಡೋತ್ಸವ ಉದ್ಘಾಟನೆಯಲ್ಲಿ ಡಾ.ರವೀಂದ್ರ ಮದ್ರಕಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯ ಎಂದು ಯಶೋಧಾ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಮದ್ರಕಿ ಹೇಳಿದರು.
ಯಶೋಧಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಗಳ ವತಿಯಿಂದ ಆಯೋಜಿಸಲಾದ ಯಶೋಧಾ ಚೈತ್ರೋತ್ಸವ-2026 ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ನಿಯಮಿತವಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಿಸ್ತು, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಗೌರವ ಅತಿಥಿಯಾದ ಡಾ.ಕಮಲಾ ಮದ್ರಕಿ ಮಾತನಾಡಿ, ವಿದ್ಯಾರ್ಥಿಗಳು ಪಾಠಗಳ ಜೊತೆಗೆ ಕ್ರೀಡೆಗಳಲ್ಲಿಯೂ ತೊಡಗಿಸಿಕೊಂಡು ಸಮಗ್ರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಅಶೋಕಕುಮಾರ ರಾ.ಜಾಧವ ಮಾತನಾಡಿ, ಕ್ರೀಡೆಗಳು ಆರೋಗ್ಯಕರ ಜೀವನಕ್ಕೆ ಮಾರ್ಗದರ್ಶಕವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ರಮೇಶ್ ಚೌಧರಿ, ಪ್ರಾಂಶುಪಾಲರಾದ ಪ್ರೊ.ಗುರುಶಾಂತ್.ಪಿ ಹಾಗೂ ನರ್ಸಿಂಗ್ ಸಲಹೆಗಾರರಾದ ವೈ.ವೈ.ಕಡಗಬಾವಿ, ವಿಜಯಕುಮಾರ ಚವ್ಹಾಣ, ಚಾಂದವಸೀಮ ಮುಕಾದಮ ಭಾರತ ಸೇವಾದಳದ ಜಿಲ್ಲಾ ಸಂಚಾಲಕರಾದ ನಾಗೇಶ ಡೊಣುರ ಮತ್ತು ಬಂಜಾರ ಶಾಲೆಯ ದೈಹಿಕ ಶಿಕ್ಷಕ ಸೋಮಶೇಖರ ರಾಠೋಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯಶೋಧಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡೋತ್ಸವಕ್ಕೆ ಉತ್ಸಾಹ ತುಂಬಿದರು.

