ಅಥಣಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಸಿದರಾಯ ಬೋಸಗಿ ಸೂಚನೆ
ಉದಯರಶ್ಮಿ ದಿನಪತ್ರಿಕೆ
ಅಥಣಿ: ಏಪ್ರಿಲ್ 14 ರಂದು ತಾಲೂಕಾ ಆಡಳಿತದಿಂದ ಆಚರಿಸುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ತಹಶೀಲ್ದಾರ್ ಸಿದರಾಯ ಬೋಸಗಿ ಹೇಳಿದರು.
ಅವರು ತಾಲೂಕಾ ಪಂಚಾಯತ ಸಭಾ ಭವನದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಡಾ. ಬಿ, ಆರ್, ಅಂಬೇಡ್ಕರ್ ರವರ ಜನ್ಮದಿನಾಚರಣೆಯನ್ನು ತಾಲ್ಲೂಕಿನಾದ್ಯಂತ ಅತ್ಯಂತ ಸಂಭ್ರಮ ಹಾಗೂ ಶಿಸ್ತುಬದ್ಧವಾಗಿ ಬಾಬಾ ಸಾಹೇಬರ ವಿಚಾರಧಾರೆಗಳು ಸರ್ವರಿಗೂ ದಾರಿದೀಪವಾಗಿವೆ ಏಪ್ರಿಲ್ 14ರಂದು ನಡೆಯಲಿರುವ ಜಯಂತಿಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ ಅವರ ತತ್ವಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಆಚರಿಸಿ ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮಗಳು ಎಲ್ಲಾ ಇಲಾಖೆಗಳ ಸಮನ್ವಯದಿಂದ ಕೆಲಸ ಮಾಡಬೇಕು ಹಾಗೂ ಎಲ್ಲ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವ ಹಾಗೆ ತಮ್ಮ ತಮ್ಮ ಕೆಲಸಗಳನ್ನು ತಾವು ಶ್ರದ್ದೆಯಿಂದ ನೆರವೇರಿಸಬೇಕು. ಅನೇಕ ದಲಿತ ಮುಖಂಡರು ನೀಡಿರುವ ಸಲಹೆಯಂತೆ ಕಾರ್ಯಕ್ರಮ ವಿಶೇಷ ಉಪನ್ಯಾಸ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪರಶುರಾಮ ಪತ್ತಾರ ಅವರು ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಕುರಿತು ಆಯಾ ಇಲಾಖೆಗಳಿಗೆ ಜವಾಬ್ದಾರಿ ವಹಿಸಿದರು.
ತಾ.ಪಂ ಅಧಿಕಾರಿ ಶಿವಾನಂದ ಕಲ್ಲಾಪೂರ, ತಾಲೂಕಾ ಆರೋಗ್ಯಾಧಿಕಾರಿ ಬಸಗೌಡಾ ಕಾಗೆ, ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಪಿಎಸ್ ಆಯ್ ಮಲ್ಲಿಕಾರ್ಜುನ ತಳವಾರ, ಪುರಸಭೆ ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ, ಸದಸ್ಯರಾದ ಮಲ್ಲಿಕಾರ್ಜುನ ಬುಟಾಳಿ, ಕಲ್ಲೇಶ ಮಡ್ಡಿ, ದಲಿತ ಮುಖಂಡರಾದ ಗೌತಮ ಪರಾಂಜಪೆ, ಮಹಾಂತೇಶ ಬಾಡಗಿ,ಶಶಿಕಾಂತ ಬಾಡಗಿ,ಶಶಿ ಸಾಳವೆ,ಮಿತೇಶ ಪಟ್ಟಣ, ರಾಮ ಮರೇಳರ, ಶ್ರೀಕಾಂತ ಆಲಗೂರ, ಸುಕುಮಾರ ಕಾಂಬಳೆ, ಸೇರಿದಂತೆ ಹಲವಾರು ದಲಿತ ಮುಖಂಡರು ಭಾಗಿಯಾಗಿದ್ದರು

