ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಸಿಂದಗಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶ್ರೀಗಳು ಕರೆ
ಉದಯರಶ್ಮಿ ದಿನಪತ್ರಿಕೆ
ಪಡಗಾನೂರ(ದೇವರಹಿಪ್ಪರಗಿ): ನಿಸ್ವಾರ್ಥವೆಂಬುದು ಧರ್ಮವಾಗಿದ್ದು, ಸ್ವಾರ್ಥವೆಂಬುದು ಅಧರ್ಮವಾಗಿದೆ. ಸ್ವಾರ್ಥವನ್ನು ತೆಗೆದುಹಾಕಿ ಎಲ್ಲರೂ ಸಾರ್ಥಕವಾದ ಜೀವನವನ್ನು ನಡೆಸಬೇಕು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷರಾದ ಸಿಂದಗಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶ್ರೀಗಳು ಹೇಳಿದರು.
ತಾಲ್ಲೂಕಿನ ಪಡಗಾನೂರ ಗ್ರಾಮದ ಸೋಮೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಜರುಗಿದ ಧರ್ಮಸಭೆ ಹಾಗೂ ಸಾಮೂಹಿಕ ವಿವಾಹದ ಸಾನಿಧ್ಯ ವಹಿಸಿ, ಗ್ರಾಮಸ್ಥರಿಂದ ಗುರುವಂದನ ಸ್ವೀಕರಿಸಿ ಮಾತನಾಡಿದರು. ನಿಸ್ವಾರ್ಥ ಕಾಯಕ ನಮ್ಮನ್ನು ನಾಯಕರನ್ನಾಗಿಸುತ್ತದೆ ಎಂದರು.
ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ), ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ(ಚಬನೂರ), ಮಾಜಿಶಾಸಕ ಶರಣಪ್ಪ ಸುಣಗಾರ ಮಾತನಾಡಿದರು.
ಕಡಗಂಚಿಯ ಸಾವಿರದೇವರ ಸಂಸ್ಥಾನ ಮಠದ ವೀರಭದ್ರ ಸ್ವಾಮೀಜಿ ನೇತೃತ್ವದಲ್ಲಿ ಹಾಗೂ ಸೋಮೇಶ್ವರ ದೇವಸ್ಥಾನ ಕಮೀಟಿಯ ಅಧ್ಯಕ್ಷ ಅಯ್ಯಪ್ಪಯ್ಯ ಹಿರೇಮಠ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಸುಮಂಗಲೆಯರಿಂದ ಕುಂಭ ಕಳಶ,ಪಲ್ಲಕ್ಕಿಗಳ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
ಇಂಗಳೇಶ್ವರ ಭೃಂಗೇಶ್ವರ ಶ್ರೀ, ಬಸವನಬಾಗೇವಾಡಿ ಶಿವಪ್ರಕಾಶಶ್ರೀ, ಯಂಕಂಚಿಯ ಅಭಿನವ ರುದ್ರಮುನಿಶ್ರೀ, ದೇವರಹಿಪ್ಪರಗಿಯ ವೀರಗಂಗಾಧರಶ್ರೀ , ಸಿಂದಗಿಯ ವಿಶ್ವಪ್ರಭುಶ್ರೀ, ಮುಳಸಾವಳಗಿಯ ದಯಾನಂದ ಸ್ವಾಮೀಜಿ, ಕರಭಂಟನಾಳದ ಶಿವಕುಮಾರ ಸ್ವಾಮೀಜಿ, ಡಿಸಿಸಿ ಬ್ಯಾಂಕ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ, ಸೋಮೇಶ್ವರ ದೇವಸ್ಥಾನ ಕಮೀಟಿ ಉಪಾಧ್ಯಕ್ಷ ಬಸನಗೌಡ ಪಾಟೀಲ, ಡಾ.ಮಹಾಂತೇಶ ಹಿರೇಮಠ, ಶ್ರೀಶೈಲ ಕಬ್ಬಿನ, ಗುರುರಾಜ ಆಕಳವಾಡಿ ಸೇರಿದಂತೆ ಪಡಗಾನೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಇದ್ದರು.

