ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯೆ ಡಾ. ಆರ್.ಎಂ.ಮಿರ್ಧೆ ಬೀಳ್ಕೊಡುಗೆ ಸಮಾರಂಭ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಹನೆ, ಕಠಿಣ ಪರಿಶ್ರಮ, ತ್ಯಾಗ ಹಾಗೂ ಸಮರ್ಪಣಾ ಮನೋಭಾವಗಳನ್ನು ಅಳವಡಿಸಿಕೊಂಡವರು ಉತ್ತಮ ಆಡಳಿತಗಾರರಾಗಲು ಸಾಧ್ಯ ಎಂದು ಬಿಎಲ್ಡಿಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ.ಆರ್.ವಿ.ಕುಲಕರ್ಣಿ ಹೇಳಿದರು.
ನಗರದ ಬಿಎಲ್ಡಿಇ ಸಂಸ್ಥೆಯ ಎಸ್ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಾರ್ಚ.೩೧ ರಂದು ಹಮ್ಮಿಕೊಳ್ಳಲಾಗಿದ್ದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತಮ ಆಡಳಿತಗಾರನ ಮೊದಲ ಗುಣ ಸಹನೆ. ಪ್ರೊಫೆಸರ್ ಆಗಬೇಕು, ಪ್ರಿನ್ಸಿಪಲ್ ಆಗಬೇಕು ಎನ್ನುವ ಕನಸು ಎಲ್ಲರಲ್ಲೂ ಇರುತ್ತದೆ. ಆದರೆ ಪ್ರಾಚಾರ್ಯ ಹುದ್ದೆ ನಿರ್ವಹಣೆ ಅಷ್ಟೊಂದು ಸುಲಭವಾದದ್ದಲ್ಲ. ನಾವು ಆಡಳಿತ ಮಾಡಿ ನಮ್ಮ ಹೆಜ್ಜೆ ಗುರುತುಗಳನ್ನು ಆ ಸಂಸ್ಥೆಯಲ್ಲಿ ಉಳಿಸಿಕೊಂಡು ಹೋಗಬೇಕಾದರೆ ಸಂಯಮ ಹಾಗೂ ವೃತ್ತಿ ಮೇಲಿನ ನಮ್ಮ ಶ್ರದ್ಧೆ ಬಹಳ ಮುಖ್ಯವಾಗುತ್ತವೆ. ಆ ನಿಟ್ಟಿನಲ್ಲಿ ಡಾ.ಆರ್.ಎಂ.ಮಿರ್ಧೆ ಅವರು ಉತ್ತಮವಾದ ಆಡಳಿತ ಮಾಡಿದ್ದಾರೆ. ಅತ್ಯಂತ ಜವಾಬ್ದಾರಿಯುತವಾಗಿ ಹುದ್ದೆಯ ಗೌರವ ಹೆಚ್ಚಿಸಿದ್ದಾರೆ. ಸಂಸ್ಥೆಯ ಬೆಳವಣಿಗೆಗೆ ಹೆಗಲು ನೀಡಿ ನಮಗೆಲ್ಲ ಮಾದರಿಯಾಗಿದ್ದಾರೆ ಎಂದು ಹೇಳಿದರು.
ನಿವೃತ್ತ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಮಾತನಾಡಿ, ಬಿಎಲ್ಡಿಇ ಸಂಸ್ಥೆಯಲ್ಲಿ ಸುಧೀರ್ಘ ೩೮ ವರ್ಷಗಳ ಸಾರ್ಥಕ ವೃತ್ತಿ ಬದುಕು ಸಾಗಿಸಿದ್ದೇನೆ. ಈ ಸಂಸ್ಥೆ ನನಗೆ ಬಹಳಷ್ಟು ಜವಾಬ್ದಾರಿಯನ್ನು ನೀಡಿತ್ತು. ಅವುಗಳನ್ನು ನಿಮ್ಮೆಲ್ಲರ ಸಹಕಾರ ಹಾಗೂ ಸಲಹೆಯ ಮೇರೆಗೆ ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದೇನೆ ಎಂದರು.
ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಪ್ರೊ.ಎಸ್.ಹೆಚ್.ಲಗಳಿ, ಆಡಳಿತಾಧಿಕಾರಿ ಪ್ರೊ,ವಿ,ಎಸ್,ಬಗಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಎಲ್ಡಿಇ ಸಂಸ್ಥೆಯ ದೈಹಿಕ ನಿರ್ದೇಶಕರು ಎಸ್ ಎಸ್ ಕೋರಿ, ಪಿಯುಸಿ ಆಡಳಿತಾಧಿಕಾರಿ ಐ.ಎಸ.ಕಾಳಪ್ಪನವರ, ಬಿಎಲ್ಡಿಇ ಸಂಸ್ಥೆಯ ಅಧಿಕಾರಿಗಳು, ಪ್ರಭಾರ ಪ್ರಾಚಾರ್ಯ ಡಾ.ಅನೀಲ ನಾಯಕ ಡಾ.ಪಿ.ಎಸ್ ಪಾಟೀಲ ನೀವೃತ್ತ ಪ್ರಾಚಾರ್ಯ ಡಾ.ಯು.ಎಸ್.ಪೂಜೇರಿ, ಡಾ.ಎಸ್.ಟಿ.ಮೇರವಾಡೆ, ಪ್ರೊ.ಆರ್.ಹೆಚ್.ಬಿದರಿ, ಪ್ರೊ.ಜಿ.ಆರ್.ಅಂಬಲಿ, ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ, ಪ್ರೊ.ಎಸ್.ಜೆ ಜೀರಗಾಳಿ, ಡಾ.ಎಸ್.ಬಿ.ಕಮತಿ ವಿವಿಧ ಮಹಾವಿದ್ಯಾಲಯದ ಪ್ರಾಚಾರ್ಯರು, ಪ್ರಾಧ್ಯಾಪಕರು, ಬೋಧಕರು, ಬೋಧಕೆತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

