ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಯುವ ಮುಖಂಡ ನಂದು ಗಡಗಿ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೆಂದ್ರ ಅವರ ನಾಯಕತ್ವವನ್ನ ಒಪ್ಪಿಕೊಂಡು ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಹಾಗೂ ವಿಜಯಪುರ ನಗರ ಮಂಡಲ ಅಧ್ಯಕ್ಷರಾದ ಸಂದೀಪ್ ಪಾಟೀಲ್ ಸಮ್ಮುಖದಲ್ಲಿ ಬಾಗಲಕೋಟೆ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲಾದ ಹಿರಿಯ ನಾಯಕರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು.
ದೇಶದ ಪ್ರಧಾನಿ ಮೋದಿ ಅವರ ನಾಯಕತ್ವ ಹಾಗೂ ವಿಜಯೆಂದ್ರ ಅವರ ನಾಯಕತ್ವ ಹಾಗೂ ತತ್ವ ಸಿದ್ದಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಬಂದಿದ್ದೇನೆ. ಜಿಲ್ಲೆಯಲ್ಲಿ ಪಕ್ಷದ ಬೆಳೆವಣಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ನಂದು ಗಡಗಿ ತಿಳಿಸಿದರು.

