Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ

ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ

ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜದ ಶಾಂತಿ, ಸುವ್ಯವಸ್ಥೆಗೆ ಶ್ರಮಿಸುವ ಪೊಲೀಸರ ಕಾರ್ಯ ಅನನ್ಯ
(ರಾಜ್ಯ ) ಜಿಲ್ಲೆ

ಸಮಾಜದ ಶಾಂತಿ, ಸುವ್ಯವಸ್ಥೆಗೆ ಶ್ರಮಿಸುವ ಪೊಲೀಸರ ಕಾರ್ಯ ಅನನ್ಯ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಶ್ಲಾಘನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವರ್ಷದುದ್ದಕ್ಕೂ ಸದಾ ಒತ್ತಡದ ಮಧ್ಯೆಯೇ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕಾಗಿ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರು ನಿಭಾಯಿಸುವ ಕರ್ತವ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಪೊಲೀಸರ ಕಾರ್ಯವನ್ನು ಬಣ್ಣಿಸಿದರು.
ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಲ್ಲಿನ ಪೊಲಿಸ್ ಕವಾಯತು ಮೈದಾನದಲ್ಲಿ ಗುರುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸದಾ ಸಮಾಜದ ಒಳಿತಿಗಾಗಿ ಯಾವ ಪ್ರತಿಫಲಾಪೇಕ್ಷೆಯಿಲ್ಲದೇ ಹಗಲಿರುಳು ಶ್ರಮಿಸುವ ಪೊಲೀಸರು ಕಾರ್ಯ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದರು.
ಜಿಲ್ಲೆಯ ಪೊಲೀಸರ ಕಾರ್ಯದಕ್ಷತೆಗೆ ಹೆಸರುವಾಸಿಯಾಗಿದ್ದಾರೆ. ಇದಕ್ಕೆ ತಾಜಾ ನಿದರ್ಶನವೇ ಇತ್ತೀಚೆಗಷ್ಟೇ ಜಿಲ್ಲೆಯ ಐವರು ಪೊಲೀಸ್ ಅಧಿಕಾರಿ, ಸಿಬ್ಬಂದಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನವಾಗಿದ್ದು, ಹೆಮ್ಮ ತರುವುದರ ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ದಕ್ಷ ಕಾರ್ಯವೈಖರಿಗೆ ಸಾಕ್ಷಿಯಾಗಿದೆ ಎಂದರು.
ಪೊಲೀಸ್ ಇಲಾಖೆ ಸಿಬ್ಬಂದಿ ಹಗಲಿರುಳು ಸಾರ್ವಜನಿಕರು ಶಾಂತಿ-ನೆಮ್ಮದಿಗಾಗಿ ತಮ್ಮ ಕರ್ತವ್ಯ ಮೀಸಲಿಡುತ್ತಾರೆ. ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ, ಪ್ರಕೃತಿ ವಿಕೋಪದಂತಹ ಘಟನೆಗಳಲು ಘಟಿಸಿದಾಗ, ಅಪರಾಧ ಪ್ರಕರಣ ನಡೆಯದಂತೆ ತಡೆಗಟ್ಟುತ್ತಾರೆ. ಮಾತ್ರವಲ್ಲ ತುರ್ತು ಸಂದರ್ಭಗಳಲ್ಲಿ ಜೀವದ ಹಂಗು ತೊರೆದು ಸಾರ್ವಜನಿಕರ ನೆಮ್ಮದಿಗೋಸ್ಕರ ಮಿಡಿಯುವ ಪೊಲೀಸರ ಕಾರ್ಯ ಅದು ಕಾರ್ಯವಲ್ಲ. ಬದಲಿಗೆ ಅದು ಸಾರ್ವಜನಿಕರ ವಿಶ್ವಾಸ ಹಾಗೂ ನೆಮ್ಮದಿಯ ಜೀವನದ ಆಶಾಭಾವ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿ, ಈ ದಿನದಂದು ಹೆಚ್ಚು ಶ್ರದ್ಧಾಪೂರ್ವಕವಾಗಿ, ರಚನಾತ್ಮಕವಾಗಿ ಮತ್ತು ನಿಷ್ಠೆಯೊಂದಿಗೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಸೇವೆಯಲ್ಲಿರುವ ಪೊಲೀಸ್ ಸಿಬ್ಬಂದಿ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ನಮ್ಮ ಸಂಕಲ್ಪವನ್ನು ಮತ್ತಷ್ಟು ದೃಢಪಡಿಸಿಕೊಳ್ಳುವುದಾಗಿದೆ ಎಂದರು.
ನಿವೃತ್ತ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಕೆ.ಮಾರಿಹಾಳ ಅವರು ಧ್ವಜವಂದನೆ ಸ್ವೀಕರಿಸಿ ಮಾತನಾಡಿ, ಇತಿಹಾಸ ತ್ಯಾಗ, ಶೌರ್ಯ, ಅಚಲ ನಿಷ್ಠೆಯ ಪ್ರತಿಬಿಂಬವಾಗಿದೆ. ಧ್ವಜದಡಿ ಸೇವೆ ಮಾಡಿರುವ ಪ್ರತಿ ಹೃದಯದಲ್ಲಿ ದೇಶ ಭಕ್ತಿ,ಕರ್ತವ್ಯ ನಿಷ್ಠೆ ಮತ್ತು ಸೇವಾ ಮನೋಭಾವ ಹೊಂದಿರುತ್ತಾರೆ. ಪೊಲೀಸ್ ಧ್ವಜವೂ ಚಿಹ್ನೆಯಲ್ಲ. ಅದೊಂದು ಮಹತ್ವದ್ದು ಎಂದು ಪೊಲೀಸರ ಕರ್ತವ್ಯವನ್ನು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಐಆರ್‌ಬಿ ಡೆಪ್ಯೂಟಿ ಕಮಾಂಡೆಂಟ್ ರಾಚಪ್ಪ ಕಾಜಗಾರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ನಾಗರಾಜ ಡಿ. ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಅಧಿಕಾರಿ,ಸಿಬ್ಬಂದಿ ಸಾರ್ವಜನಿಕರು ಭಾಗವಹಿಸಿದ್ದರು.
ನಿವೃತ್ತ ಶಿಕ್ಷಕ ಎಚ್.ಎ.ಮಮದಾಪುರ ಹಾಗೂ ದಶರಥ ಕಾರ್ಯಕ್ರಮ ನಿರೂಪಿಸಿದರು.

ಪೊಲೀಸರ ಕಾರ್ಯ ಅತ್ಯಂತ ಕಠಿಣ ಕೆಲಸ

“ವಿಜಯಪುರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಪೊಲೀಸರ ಕಾರ್ಯ ಅಪ್ರತಿಮವಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸುರಕ್ಷತೆ ಕಾಪಾಡಿ ಸಮಾಜದಲ್ಲಿ ನೆಮ್ಮದಿಯ ಜೀವನಕ್ಕೆ ಕಾರಣವಾಗಿದೆ. ಪೊಲೀಸರ ಕಾರ್ಯ ಸರಳವಲ್ಲ, ಅದೊಂದು ಅತ್ಯಂತ ಕಠಿಣ ಕೆಲಸ. ಯಾವುದೇ ಅಪರಾಧ ತಡೆಗೆ ತುರ್ತು ಸ್ಪಂದನೆ ಪೊಲೀಸರದ್ದಾಗಿದೆ. ಪೊಲೀಸ್ ಇಲಾಖೆಗೆ ಜಿಪಂ ಸಹಕಾರ ನೀಡಲಿದೆ.”

– ರಿಷಿ ಆನಂದ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಆಕರ್ಷಕ ಪಥಸಂಚಲನ

ಪರೇಡ್ ಕಮಾಂಡರ್ ಐ.ಎಸ್. ತೇಲಿ ಅವರ ನೇತೃತ್ವದಲ್ಲಿ ಆರ್.ಎಸ್.ಐ ಮಲ್ಲನಗೌಡ ಗುತ್ತರಗಿ, ಆದರ್ಶ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ ಲಮಾಣಿ, ಮನಗೂಳಿ ಪೋಲೀಸ್ ಠಾಣೆಯ ವಿಜಯಕುಮಾರ ರಾಠೋಡ, ಗೋಲಗುಂಬಜ್ ಪಿಎಸ್‌ಐ ಎಂ.ಡಿ.ಗೋರಿ, ಸಿಂದಗಿ ಪಿಎಸ್ ಐ ಮಲಕನಗೌಡ ಬಿರಾದಾರ, ಕೂಡಗಿ ಪೊಲೀಸ್ ಠಾಣೆಯ ಪಿಎಸ್‌ಐ ಯತೀಶ ಕೆ.ಎನ್, ಗಾಂಧಿವೃತ್ತ ಠಾಣೆ ಪಿಎಸ್ ಐ ಸುಷ್ಮಾ ನಂದಗೋಳ ಒಳಗೊಂಡ ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿಕೊಟ್ಟರು.
ಅರ್ಜುನ ಭಜಂತ್ರಿ ಹಾಗೂ ಸುರೇಶ ಉತ್ಲಾಸಕರ ನೇತೃತ್ವದ ತಂಡ ಕದಮ್, ಸುಶ್ರಾವ್ಯ ಸಂಗೀತದ ನಿನಾದ ಬ್ಯಾಂಡ್ ಮೂಲಕ ನುಡಿಸಿದರು.

ಧ್ವಜ ದಿನಾಚರಣೆ ಸಂದರ್ಭದಲ್ಲಿ ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿ, ಧ್ವಜಗಳ ಮಾರಾಟದಿಂದ ಸಂಗ್ರಹವಾದ ವಂತಿಗೆಯನ್ನು ನಿವೃತ್ತ ಮತ್ತು ಸೇವಾ ನಿರತ ಪೊಲೀಸರ ಕ್ಷೇಮಾಭಿವೃದ್ದಿಗೆ ಉಪಯೋಗಿಸಿಕೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ಈಗಾಗಲೇ ಪೊಲೀಸರ ಸಲುವಾಗಿ ಹಲವಾರು ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಪೊಲೀಸ್ ಸಮುದಾಯ ಭವನ, ಪೊಲೀಸರ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಡಿಆರ್ ಘಟಕದಲ್ಲಿ ಅತಿಥಿ ಗೃಹವೂ ಇದೆ. ಪೊಲೀಸ್ ಕಲ್ಯಾಣ ನಿಧಿಯಿಂದ ಪೊಲೀಸ್ ಸಿಬ್ಬಂದಿ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ, ವೈದ್ಯಕೀಯ ಸಹಾಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ. ಶೇ.೫೦ರಷ್ಟು ಅನುದಾನವನ್ನು ನಿವೃತ್ತ ಅಧಿಕಾರಿಗಳ ಪೊಲೀಸ್ ಕಲ್ಯಾಣ ನಿಧಿಗೆ ಶೇ.೫೦ ರಷ್ಟನ್ನು ಕೇಂದ್ರ ಪೊಲೀಸ್ ಕಲ್ಯಾಣ ನಿಧಿಗೆ ಜಮೆ ಮಾಡಲಾಗುತ್ತದೆ.”

– ಲಕ್ಷ್ಮಣ ನಿಂಬರಗಿ
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ

ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ

ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ

ಯಲಗೂರ ದೇವಸ್ಥಾನದಲ್ಲಿ ಸಡಗರದ ಹನುಮ ಜಯಂತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ
    In (ರಾಜ್ಯ ) ಜಿಲ್ಲೆ
  • ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಯಲಗೂರ ದೇವಸ್ಥಾನದಲ್ಲಿ ಸಡಗರದ ಹನುಮ ಜಯಂತಿ
    In (ರಾಜ್ಯ ) ಜಿಲ್ಲೆ
  • ನೀರನ್ನು ಮಿತವಾಗಿ ಬಳಕೆ ಮಾಡಬೇಕು :ನ್ಯಾ.ಅಮೀತ ಘಟ್ಟಿ
    In (ರಾಜ್ಯ ) ಜಿಲ್ಲೆ
  • ತುರ್ತು ದುರಸ್ಥಿಗೆ ಕಾದಿರುವ ಸಿಂದಗಿ ಸಾರ್ವಜನಿಕ ಗ್ರಂಥಾಲಯ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣಾಭಿವೃದ್ಧಿ ಯೋಜನೆಗಳ ಜಾರಿ ವೇಗ ಹೆಚ್ಚಿಸಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಆದ್ಯತೆ :ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಮಾರುತಿ ಸೇವಕನಾ ಮಾಡೋ ನಿನ್ನಂತೆ ನನ್ನ..
    In ಭಾವರಶ್ಮಿ
  • ಎಸ್ಸೆಎಸ್ಸೆಲ್ಸಿ 3ನೇ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ :ಶಬೀರ್ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.