Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ

ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ

ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೀರನ್ನು ಮಿತವಾಗಿ ಬಳಕೆ ಮಾಡಬೇಕು :ನ್ಯಾ.ಅಮೀತ ಘಟ್ಟಿ
(ರಾಜ್ಯ ) ಜಿಲ್ಲೆ

ನೀರನ್ನು ಮಿತವಾಗಿ ಬಳಕೆ ಮಾಡಬೇಕು :ನ್ಯಾ.ಅಮೀತ ಘಟ್ಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ನೀರಿಲ್ಲದೆ ಜೀವವಿಲ್ಲ. ನಾಗರಿಕತೆಗಳು ನೀರು ಇದ್ದಲ್ಲಿಯೇ ಬೆಳೆದು ಬಂದಿದ್ದನ್ನು ಇತಿಹಾಸದ ಪುಟಗಳಿಂದ ತಿಳಿದುಕೊಳ್ಳುತ್ತೇವೆ. ಪ್ರತಿಯೊಬ್ಬರೂ ನೀರಿನ ಮಹತ್ವ ಅರಿತು ಮಿತವಾಗಿ ಬಳಕೆ ಮಾಡಬೇಕೆಂದು ಪ್ರಧಾನ ಸಿವ್ಹಿಲ್ ನ್ಯಾಯಾಧೀಶ ಅಮೀತ ಘಟ್ಟಿ ಹೇಳಿದರು.
ತಾಲೂಕಿನ ಮುತ್ತಗಿ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ತಾಲೂಕ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾಡಳಿತ ಹಾಗೂ ತಾಲೂಕ ಪಂಚಾಯತಿ ಕಾರ್ಯಾಲಯ ಸಹಯೋಗದಲ್ಲಿ ವಿಶ್ವ ಜಲ ದಿನಾಚರಣೆಯಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಕಲ ಜೀವರಾಶಿಗಳಿಗೂ ನೀರು ಬೇಕು. ನಮ್ಮ ಉಳಿವಿಗೆ ಆಹಾರ, ಗಾಳಿ ಎಷ್ಟು ಮುಖ್ಯವೋ ಅಷ್ಟೇ ನೀರು ಸಹ ಮುಖ್ಯವಾಗಿದೆ. ನೀರು ಪೋಲು, ಹವಾಮಾನ ಬದಲಾವಣೆ ಸೇರಿದಂತೆ ವಿವಿದ ಕಾರಣಗಳಿಂದ ನೀರಿನ ಕೊರತೆ ಹೆಚ್ಚಾಗುತ್ತಿದೆ. ಇದು ಕೈಗಾರಿಕೆ, ಕೃಷಿ ಮತ್ತು ಆರ್ಥಿಕತೆಯ ಮೇಲೆ ಪ್ರಭಾವ ಬೀರುತ್ತದೆ. ಸಿಹಿನೀರಿನ ಮೂಲಗಳನ್ನು ಕಾಪಾಡುವ ಮೂಲಕ ಮುಂದಿನ ಜನಾಂಗಕ್ಕೆ ನೀರನ್ನು ಉಳಿಸಬೇಕಿದೆ. ನೀರಿನ ಮೂಲಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ನ್ಯಾಯವಾದಿ ಬಿ.ಪಿ.ಪತ್ತಾರ ಅವರು ಉಪನ್ಯಾಸ ನೀಡಿ ಮಾತನಾಡಿದ ಅವರು, ನೀರನ್ನು ಮಿತವಾಗಿ ಬಳಸಬೇಕು. ಬೇಸಿಗೆಯ ದಿನದಲ್ಲಿ ತಣ್ಣನೆ ನೀರನ್ನು ಹಾಗೂ ಹೆಚ್ಚು ನೀರನ್ನು ಸೇವಿಸಬೇಕು. ಶುದ್ಧ ಕುಡಿಯುವ ನೀರನ್ನು ಬಳಸಬೇಕು.ತಗ್ಗು ದಿನ್ನೆಗಳಲ್ಲಿ ನೀರನ್ನು ಸಂಗ್ರಹಣೆ ಮಾಡುವುದು ಕಡಿಮೆ ಮಾಡಿ ಅವುಗಳಿಂದ ಉಂಟಾಗುವ ಮಾರಣಾಂತಿಕ ಕಾಯಿಲೆಗಳಿಂದ ಸುರಕ್ಷಿತರಾಗಬೇಕು. ನೀರಿನ ಮಹತ್ವ ಕುರಿತು ಹೇಳಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವ್ಹಿ.ಬಿ.ಗೊಂಗಡಿ, ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ವಂದಾಲ ಮಾತನಾಡಿದರು. ಕಾರ್ಯಕ್ರಮದಲ್ಲಿ ಒಂದನೇ ಸಿವ್ಹಿಲ್ ನ್ಯಾಯಾಧೀಶ ಈರಪ್ಪ ಢವಳೇಶ್ವರ, ಸಹಾಯಕ ಸರ್ಕಾರಿ ಅಭಿಯೋಜಕಿ ರಾಜರಾಜೇಶ್ವರಿ ಸುತ್ತಾರ, ಉಪತಹಸೀಲ್ದಾರ ಸೋಮಶೇಖರ ತಾವರಖೇಡ, ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ, ಕೂಡಗಿ ಪೊಲೀಸ್ ಠಾಣೆಯ ಪಿಎಸೈ ವ್ಹಿ.ಎಚ್.ಹತ್ತಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಂಜುಳಾ ಹಿರೇಮನಿ, ಹಿರಿಯ ನ್ಯಾಯವಾದಿ ವ್ಹಿ.ಬಿ.ಮರ್ತರ, ಗ್ರಾಮ ಪಂಚಾಯಿತಿ ಪಿಡಿಓ ಡಿ.ಎಂ.ಬಿಳೆಕುದರಿ ಇತರರು ಇದ್ದರು.ತಾಲೂಕು ಪಂಚಾಯಿತಿಯ ತಾಲೂಕು ಯೋಜನಾಧಿಕಾರಿ ಎಂ.ಬಿ.ಸೊನ್ನದ ಸ್ವಾಗತಿಸಿ, ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ

ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ

ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ

ಯಲಗೂರ ದೇವಸ್ಥಾನದಲ್ಲಿ ಸಡಗರದ ಹನುಮ ಜಯಂತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ
    In (ರಾಜ್ಯ ) ಜಿಲ್ಲೆ
  • ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಯಲಗೂರ ದೇವಸ್ಥಾನದಲ್ಲಿ ಸಡಗರದ ಹನುಮ ಜಯಂತಿ
    In (ರಾಜ್ಯ ) ಜಿಲ್ಲೆ
  • ನೀರನ್ನು ಮಿತವಾಗಿ ಬಳಕೆ ಮಾಡಬೇಕು :ನ್ಯಾ.ಅಮೀತ ಘಟ್ಟಿ
    In (ರಾಜ್ಯ ) ಜಿಲ್ಲೆ
  • ತುರ್ತು ದುರಸ್ಥಿಗೆ ಕಾದಿರುವ ಸಿಂದಗಿ ಸಾರ್ವಜನಿಕ ಗ್ರಂಥಾಲಯ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣಾಭಿವೃದ್ಧಿ ಯೋಜನೆಗಳ ಜಾರಿ ವೇಗ ಹೆಚ್ಚಿಸಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಆದ್ಯತೆ :ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಮಾರುತಿ ಸೇವಕನಾ ಮಾಡೋ ನಿನ್ನಂತೆ ನನ್ನ..
    In ಭಾವರಶ್ಮಿ
  • ಎಸ್ಸೆಎಸ್ಸೆಲ್ಸಿ 3ನೇ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ :ಶಬೀರ್ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.