ಯತ್ನಾಳಗೆ ಬಿಜೆಪಿ ಅನಿವಾರ್ಯ | ವಿಜಯಪುರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಿಜೆಪಿ ಒಂದು ಶಿಸ್ತಿನ ಪಕ್ಚವಾಗಿದ್ದು, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಅನಿವಾರ್ಯ ಇದೆ. ಆದರೆ ಬಿಜೆಪಿಗೆ ಯತ್ನಾಳ ಅನಿವಾರ್ಯ ಇಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಒಂದು ಶಿಸ್ತಿನ ಪಕ್ಷವಾಗಿದೆ. ಬಿಜೆಪಿ ಪಕ್ಷಕ್ಕೆ ತನ್ನದೇ ಯಾದ ಸಿದ್ದಾಂತ ಹೊಂದಿದೆ. ಪಕ್ಷಕ್ಕೆ ಯಾರಿಂದ ಅನಿವಾರ್ಯ ಇಲ್ಲ. ಪಕ್ಷದ ಅನಿವಾರ್ಯ ಎಲ್ಲರಿಗೂ ಇದೆ. ಯತ್ನಾಳ ಅವರ ಅವಶ್ಯಕತೆ ಪಕ್ಷಕ್ಕೆ ಇಲ್ಲ, ಆದರೆ ಪಕ್ಷದ ಅನಿವಾರ್ಯ ಎಂದು ಹೇಳಿದರು.
ಬಾಗಲಕೋಟೆ ಉಪಚುನಾವಣೆಯಲ್ಲಿ ಶಾಸಕ ಯತ್ನಾಳ ಅವರು ಬಿಜೆಪಿ ಪರ ಪ್ರಚಾರದ ಕುರಿತು ಹೇಳಿಕೆ ನೀಡಿದ ಅವರು, ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಆಪ್ತರಾಗಿದ್ದರಿಂದ ಚುನಾವಣೆ ಪ್ರಚಾರಕ್ಕೆ ಹೋಗಿದ್ದಾರೆ. ಅವರಿಗೆ ಬಿಜೆಪಿಯಿಂದ ಯಾರೂ ಆವ್ಹಾನ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಯತ್ನಾಳವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಂಡರೆ ಬಿಜೆಪಿಗೆ ಸ್ವಾಗತ..!
ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದವರಿಗೆ ಹಾಗೂ ರಾಜ್ಯಾಧ್ಯಕ್ಷರ ಕುರಿತು ಅಗೌರವವಾಗಿ ಮಾತನಾಡುವುದು ಸರಿಯಲ್ಲ. ಮೋದಿಯವರು ರಾಷ್ಟ್ರೀಯ ಅಧ್ಯಕ್ಷರು ವಯಸ್ಸಿನಲ್ಲಿ ಚಿಕ್ಕವರಿದ್ದರು, ಅವರಿಗೆ ಗೌರವದಿಂದ ಮಾತನಾಡುತ್ತಾರೆ. ಆದರೆ ಯತ್ನಾಳ ಅವರು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಹೇಳಿಕೆ ನೀಡಿತ್ತಾರೆ. ಪಕ್ಷದ ವಿರುದ್ಧ ಹೇಳಿಕೆ ನೀಡುವುದನ್ನು ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ವರ್ತನೆ ಸರಿ ಮಾಡಿಕೊಂಡು ಬಂದರೆ ಅವರಿಗೆ ಬಿಜೆಪಿಗೆ ಸ್ವಾಗತಿಸುತ್ತೇನೆ ಎಂದರು.

