Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ

ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ
(ರಾಜ್ಯ ) ಜಿಲ್ಲೆ

ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬೇಸಿಗೆ ಇರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು, ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈವರೆಗೂ ಟ್ಯಾಂಕರ್ ಸರಬರಾಜು ಅವಶ್ಯಕತೆ ಕಂಡುಬಂದಿಲ್ಲ. ಆದಾಗ್ಯೂ ಸಮಸ್ಯೆ ಇರುವ ಭಾಗದಲ್ಲಿ ಕುಡಿಯುವ ನೀರಿಗೆ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದರು.
ಪ್ರತಿ ಗ್ರಾಪಂಗಳು ನೀರು ಪೂರೈಕೆಯಲ್ಲಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಭವಿಷ್ಯದ ದಿನಗಳಲ್ಲಿ ಎಲ್ಲಿ ಸಮಸ್ಯೆ ಉಲ್ಬಣಿಸಬಹುದೋ ಅಲ್ಲಿ ಪರ್ಯಾಯವಾಗಿ ಜಲಮೂಲಗಳನ್ನು ಗುರುತಿಸಿಟ್ಟುಕೊಳ್ಳಬೇಕು. ಬೋರವೆಲ್ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.
ಈ ಹಿಂದೆ ಕುಡಿಯುವ ನೀರಿಗೆ ಎಲ್ಲೆಲ್ಲಿ ಸಮಸ್ಯೆಯಾಗಿತ್ತು ಎಂಬ ಮಾಹಿತಿ ಇದೆ. ಅಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ತಾಲೂಕು ಮಟ್ಟದಲ್ಲಿ ಕಾಲ-ಕಾಲಕ್ಕೆ ಕಾರ್ಯಪಡೆ ಸಭೆ ನಡೆಸುವ ಮೂಲಕ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಇನ್ನೊಂದೆಡೆ ಲಭ್ಯವಿರುವ ಜಲಮೂಲಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ನೀರು ಪರೀಕ್ಷಿಸಿ, ಪೂರೈಸಲು ಕ್ರಮ ಕೈಗೊಳ್ಳಬೇಕು. ಈ ವಿಷಯದಲ್ಲಿ ಬಹು ಜಾಗೃತಿ ವಹಿಸಬೇಕು ಎಂದರು. ಒಎಚ್‌ಟಿ ನೀರು ಸಂಗ್ರಹ ಟ್ಯಾಂಕ್ ನಿರಂತರವಾಗಿ ಸ್ವಚ್ಛಗೊಳಿಸಬೇಕು. ದಾಖಲೆ ನಮೂದಿಸಿ, ನಿರ್ವಹಿಸಬೇಕು ಗ್ರಾಪಂ ಮಟ್ಟದಲ್ಲಿ ಬೋರವೆಲ್ ದುರಸ್ತಿ ತಮ್ಮ ಹಂತದಲ್ಲಿ ಮಾಡಿಕೊಳ್ಳಬೇಕು. ಈಗಾಗಲೇ ಸಾಕಷ್ಟು ಸೂಚನೆಗಳನ್ನು ನೀಡಲಾಗಿದೆ. ಬೋರವೆಲ್ ದುರಸ್ತಿ ಮಾಡಿಸದೇ ನಿರ್ಲಕ್ಷ್ಯ ವಹಿಸಬಾರದು. ಮುಂಚಿತವಾಗಿ ತಿಳಿದುಕೊಳ್ಳಬೇಕು ಎಂದರು.
ಗ್ರಾಮ ಪಂಚಾಯತಿ, ಸ್ಥಳೀಯ ಸಂಸ್ಥೆಗಳ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದೂ ಸಭೆಯಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ ಅವರು, ಎಲ್ಲಿಯೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಬಿಸಿಲಿನ ತಾಪಮಾನದಿಂದಾಗುವ ಪರಿಣಾಮಗಳ ಬಗ್ಗೆ ಜನರು ವಹಿಸಬೇಕಾದ ಅಗತ್ಯ ಮುನ್ನೆಚ್ಚರಿಕೆ ಬಗ್ಗೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಇದೇ ವೇಳೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಎಲ್ಲ ತಾಲೂಕಿನ ತಹಶೀಲ್ದಾರರು, ತಾಲೂಕ ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ

ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು

ಯತ್ನಾಳ ವರ್ತನೆ ಬದಲಾದರೆ ಮಾತ್ರ ಬಿಜೆಪಿಗೆ ಸ್ವಾಗತ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ
    In (ರಾಜ್ಯ ) ಜಿಲ್ಲೆ
  • ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು
    In (ರಾಜ್ಯ ) ಜಿಲ್ಲೆ
  • ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ
    In (ರಾಜ್ಯ ) ಜಿಲ್ಲೆ
  • ಯತ್ನಾಳ ವರ್ತನೆ ಬದಲಾದರೆ ಮಾತ್ರ ಬಿಜೆಪಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಜೀವನಶೈಲಿ, ಧನಾತ್ಮಕ ವಿಚಾರಗಳಿಂದ ಆರೋಗ್ಯ ವೃದ್ಧಿ :ಡಾ.ದಡ್ಡಿ
    In (ರಾಜ್ಯ ) ಜಿಲ್ಲೆ
  • ಅಧಿಕಾರಿ ರವೀಂದ್ರ ಮುರಗಾಲಿ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆಯಡಿ ಕುಸುಬೆ ಖರೀದಿ
    In (ರಾಜ್ಯ ) ಜಿಲ್ಲೆ
  • ಕನ್ನಡ ಮತ್ತು ಸಂಸ್ಜೃತಿ ಇಲಾಖೆಮಾರಾಟಕ್ಕೆ ಪುಸ್ತಕಗಳು ಲಭ್ಯ
    In (ರಾಜ್ಯ ) ಜಿಲ್ಲೆ
  • ಸಾಲೋಟಗಿಯಲ್ಲಿ ಸಂಭ್ರಮದ ನೀರಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.