ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ಶ್ರೀ ಶಾಂತಿನಾಥ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿನ್ನರ ಉತ್ಸವ ಕಾರ್ಯಕ್ರಮವು ಅತ್ಯಂತ ವಿಜ್ರಮಣೆಯಿಂದ ನೆರವೇರಿತು.
ಈ ಸಂದರ್ಭದಲ್ಲಿ 2025-26ನೇ ಸಾಲಿನ ಆದರ್ಶ ವಿದ್ಯಾರ್ಥಿನಿಯಾಗಿ ಸೃಷ್ಟಿ ನರಸಗೊಂಡ ಹಾಗೂ ಆದರ್ಶ ವಿದ್ಯಾರ್ಥಿಯಾಗಿ ನಿಖಿಲಕುಮಾರ ಶಿಂಧೆ ಆಯ್ಕೆಯಾಗಿದ್ದು, ಚೀಟಿ ಹಾರಿಸುವ ಮೂಲಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಶಾಲೆಯ ಕಾರ್ಯಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯೋಪಾಧ್ಯಾಯರು, ಕಾರ್ಯನಿರ್ವಾಹಕರು ಹಾಗೂ ಶಿಕ್ಷಕರ ಬಳಗವು ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು.
ಇದೇ ವೇಳೆ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಯೂ ಗಮನ ಸೆಳೆಯಿತು. 5ನೇ ತರಗತಿ ವಿದ್ಯಾರ್ಥಿ ಸೈಯದ್ ಉಜೇರ್ ಜುನೇದಕರ ಕ್ರಿಕೆಟ್ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, 4ನೇ ತರಗತಿ ವಿದ್ಯಾರ್ಥಿ ಸಮದ್ ಜುನೇದಕರ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶಾಲೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಶಾಲೆಯ ಮುಖ್ಯ ಗುರುಮಾತೆ ಜ್ಯೋತಿ ಚೌಗಲೆ ಅವರು ಮಾಹಿತಿ ನೀಡುತ್ತಾ, “ವಿದ್ಯಾರ್ಥಿಗಳ ಸಾಧನೆ ನಮ್ಮ ಶಾಲೆಯ ಗೌರವವನ್ನು ಹೆಚ್ಚಿಸಿದೆ. ಅವರ ಪರಿಶ್ರಮಕ್ಕೆ ಅಭಿನಂದನೆಗಳು,” ಎಂದು ಹೇಳಿದರು.

