Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಭಾವರಶ್ಮಿ»ನಾನು ಸಹ ಮುಖವಾಡ ಧರಿಸಲೇಬೇಕಾಯಿತು
ಭಾವರಶ್ಮಿ

ನಾನು ಸಹ ಮುಖವಾಡ ಧರಿಸಲೇಬೇಕಾಯಿತು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ರಶ್ಮಿ ಕೆ. ವಿಶ್ವನಾಥ್
ಮೈಸೂರು

ಉದಯರಶ್ಮಿ ದಿನಪತ್ರಿಕೆ

“ಲೋಕೋ ಭಿನ್ನ ರುಚಿಃ” – ಲೋಕದಲ್ಲಿ ನಾಲಗೆಗಳೆಷ್ಟೋ ರುಚಿಗಳಷ್ಟು.
ಅವರಿಗೆ ರುಚಿಸಿದ್ದು ನನಗೆ ರುಚಿಸಬೇಕೆಂದೇನು ಇಲ್ಲಾ. ಆದರೂ ಒಪ್ಪಿಕೊಳ್ಳಲೇಬೇಕು.
ನನಗೆ ರುಚಿಸಿದ್ದು ಮತ್ತೊಬ್ಬರಿಗೆ ರುಚಿಸಬೇಕೆಂದೇನು ಇಲ್ಲಾ. ಹಾಗಾಗಿ ಅವರು ಒಪ್ಪಿಕೊಳ್ಳುವುದಿಲ್ಲ. ಆದರೆ ಅವರು ಒಪ್ಪದಿದ್ದುದ್ದನ್ನೂ ಸಹ ನಾನು ಒಪ್ಪಿಕೊಳ್ಳಲೇಬೇಕು. ಯಾಕೆಂದರೆ ಅವರ ಜೊತೆ ಜೊತೆಯಲ್ಲಿಯೇ ಬದುಕಬೇಕಾದ ಅನಿವಾರ್ಯತೆ ನನಗಿದೆ. ಹಾಗಾಗಿ ಒಳಗಿನ ಮನಸ್ಸನ್ನು ಹಾಗೇ ಕುದಿಯಲು ಬಿಟ್ಟು, ಮೇಲೊಂದು ತಣ್ಣನೆಯ ಮುಖವಾಡ ತೊಟ್ಟು.. ಸುಳ್ಳು ಸುಳ್ಳೇ ಆದರೂ ಸರಿಯೆ.. ಮೆಲ್ಲಗೆ ನಕ್ಕುಬಿಡಬೇಕು.
“ಏ ಇಲ್ಲಪ್ಪ ನಾನೇ ತಿಂದುನೋಡಿದ್ದೀನಿ ಹಾಗಲಕಾಯಿ ಸಿಹಿ ಇತ್ತು” ಎಂದು ದೊಡ್ಡ ಸ್ಥಾನದಲ್ಲಿರುವವರು ಅಥವಾ ಹೆಸರು ಮಾಡಿರುವವರು ಹೇಳಿದರೆ, “ಊಹುಂ” ಎಂದವೋ ಅಲ್ಲಿಗೆ ಮುಗಿಯಿತು. ‘ಶನಿಮಹಾತ್ಮ ಹೆಗಲೇರಿದಂತೆಯೇ’ ಇಲ್ಲ-ಸಲ್ಲದ ಆಪಾದನೆಗಳು ನಮ್ಮ ಮೇಲೆಯೇ ಎರಗಿಬೀಳುತ್ತವೆ. “ಒಗ್ಗಟ್ಟಿನಲ್ಲಿ ಬಲವಿದೆ” ಎಂಬುದನ್ನು “ಆ ಬಹುಸಂಖ್ಯಾತರು” ಪ್ರದರ್ಶಿಸಿಬಿಡುತ್ತಾರೆ. “ಗೆದ್ದೆತ್ತಿನ ಬಾಲ ಹಿಡಿಯುವ” ಜನರ ಬೆಂಬಲ ಅಂತವರಿಗೆ ಇದ್ದೇ ಇರುತ್ತದೆ. ಹಾಗಾಗಿ ನಾವು ಕೊನೆಗೆ “ಹೂಂ” ಎನ್ನದೆ ವಿಧಿಯಿಲ್ಲ.
ಇದುವೇ ಜೀವನ. ಇಲ್ಲಿ ಕೆಲಸಂದರ್ಭಗಳಲ್ಲಿ ನಿಜಾಯಿತಿಗೆ ಜಾಗವಿರುವುದಿಲ್ಲ. ಇದ್ದರೂ ಆದರ ಒತ್ತಡ ಸಹಿಸಲಾಗುವುದಿಲ್ಲ. “ಬೆತ್ತಲೆ ಲೋಕದಲ್ಲಿ ಬಟ್ಟೆತೊಟ್ಟವನೇ ಹುಚ್ಚ”. “ನಾವು ಮನುಷ್ಯ ಎಂಬ ಬುದ್ದಿವಂತ ಪ್ರಾಣಿ, ಬಟ್ಟೆತೊಡಬೇಕು” ಎಂದು ಹೇಳಹೋದರೆ, ಅಲ್ಲಿ ಯಾರಿಗೂ ಹಿಡಿಸದು. ಆದರ ಬದಲಿಗೆ “ಹೌದು. ನೀವು ಇರುವುದೇ ಸರಿ. ನನಗೆ ಚಳಿ ಆಗ್ತಾ ಇದೆ ಅದಕ್ಕೆ ಬಟ್ಟೆಹಾಕಿಕೊಂಡೆ ಅಷ್ಟೆ” ಈ ರೀತಿ ಏನಾದರೊಂದು ಮಿಥ್ಯವನ್ನೇ ಸತ್ಯವೆಂದು ಹೇಳಿ ಸುಮ್ಮನಾಗಿಬಿಡಬೇಕು.


‘ಈ ಜೀವನ ನನ್ನದು, ನನ್ನ ಇಷ್ಟದಂತೆ ಬದುಕ್ತೀನಿ’ ಎನ್ನಬಹುದು. ಬದುಕಲೂಬಹುದು. ಅದು ಕೆಲವು ಸ್ಥಳ & ಸಮಯಗಳಲ್ಲಿ ಮಾತ್ರ. ಉಳಿದಂತೆ ಸಂಘಜೀವಿಯಾದ ಮನುಷ್ಯ ಸಮಾಜದ ಅಣತಿಯಂತೆ ಬದುಕಬೇಕಾಗುತ್ತದೆ. ಹೆದರಬೇಕಾಗುತ್ತದೆ, ಹೆದರಿಸಬೇಕಾಗುತ್ತದೆ, ಓಲೈಸಬೇಕಾಗುತ್ತದೆ, ಸೆಳೆಯಬೇಕಾಗುತ್ತದೆ..
ಏಕೆಂದರೆ ಅದೇ ಸಮಾಜದೊಳಗೆ ಇದ್ದುಕೊಂಡೆ ಬದುಕು ನಡೆಸಬೇಕಲ್ಲ..
“ಮುಖವಾಡ ಹಾಕಿಕೊ. ಇಲ್ಲದಿದ್ದರೆ ಸೂರ್ಯನ ಬಿಸಿಕಿರಣ ತಾಗಿ ಸುಟ್ಟುಬಿಟ್ಟೀತು..” ಎಂದು ಮತ್ತೆ ಮತ್ತೆ ನಮ್ಮ ಮನಕ್ಕೆ ನಾವೇ ಹೇಳಿಕೊಳ್ಳಬೇಕಾಗುತ್ತದೆ.
‘ನೆಟ್ಟಗೆ ಬೆಳೆದುನಿಂತ ಮರ, ಗಾಳಿ ಜೋರಾಗಿ ಬೀಸಿದೊಡನೆ ಲೊಟಕ್ಕನೆ ಮುರಿದುಬೀಳುತ್ತದೆ. ಅದೇ ಗಾಳಿಬಂದೆಡೆಗೆ ತಾನೂ ತೂರಿಬಿಟ್ಟರೆ, ಉಳಿದುಬಿಡಬಹುದು. ಹಾಗೆಯೇ ತೂರಾಡುತ್ತಾ, ತೂರಾಡುತ್ತಾ ಮುರುದುಹೋಗಲೂಬಹುದು. ಹಾಗಾಗಿ ಯಾವ ಮಾರುತಕ್ಕೆ ಎಷ್ಟು ಬಾಗಬೇಕು ಎಂಬುದನ್ನು ಸಹ ಯೋಚಿಸಿ ಆಲೋಚಿಸಿ ತೂಗಿ ಬಾಗಿ ಮಾಡಬೇಕಾಗುತ್ತದೆ.
ಆದ್ದರಿಂದಲೇ ಅಲ್ಲವೇ ರಾಜಕೀಯಕ್ಕೆ ಸೇರಿದ, ಸರ್ಕಾರಿ ಕೆಲಸಕ್ಕೆ ಸೇರಿದ ಎಷ್ಟೋ ಪ್ರಾಮಾಣಿಕ ವ್ಯಕ್ತಿಗಳು ಬದಲಾಗುವುದು. ಕೆಟ್ಟ ಕ್ರಿಮಿಮಾನವರ ಜೊತೆ ಸೇರಿ ಅವರು ಕೆಟ್ಟವರಾಗುವುದು. ಇಲ್ಲದಿದ್ದರೆ ಅವರಿಗೆ ಬದುಕಲು ಬಿಡಬೇಕಾದವರು ಬಿಟ್ಟಾರೆಯೇ? ಹೀಗೆಯೇ ಅಲ್ಲವೇ ಸಮಾಜ ಕೊಳಕಾಗುತ್ತಾ ಬರುವುದು. “ಸಗಣಿ ಜೊತೆ ಸರಸ ಆಡುವುದಕ್ಕಿಂತ, ಗಂಧದ ಜೊತೆ ಗುದ್ದಾಡು” ಎನ್ನುತ್ತದೆ ಗಾದೆ. ಆದರೆ ಸರಸ ಆಡುವಂತೆ ನಟನೆಯನ್ನಾದರೂ ಮಾಡುವ ಸಮಯ ಬಂದಾಗ ನಟಿಸಲೇಬೇಕಲ್ಲ..

ಗಮನಕ್ಕೆ : ಇಲ್ಲಿರುವ ‘ನಾನು’ ನಾನಷ್ಟೇ ಅಲ್ಲ. ಇದು ಅದೆಷ್ಟೋ ‘ನಾನು’ಗಳ ಮನದಮಾತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ

ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೨೩ರಂದು ವಿಕಲಚೇತನರ ಕುಂದುಕೊರತೆ ಸಭೆ
    In (ರಾಜ್ಯ ) ಜಿಲ್ಲೆ
  • ಬಿಡದಿ ಟೌನಶಿಪ್ ಯೋಜನೆ ಕೈಬಿಡಲ್ಲ :ಯತೀಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.