ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ಭಾರತ ಸರ್ಕಾರವು 2027ರ ಜನಗಣತಿ ಕಾರ್ಯಕ್ರಮವನ್ನು ಡಿಜಿಟಲ್ ಮಾದರಿಯಲ್ಲಿ ಪ್ರಾರಂಭಿಸುತ್ತಿರುವ ಹಿನ್ನೆಲೆಯಲ್ಲಿ ಜಮಖಂಡಿ ನಗರದಲ್ಲಿ ಜಾಗೃತಿ ಮೂಡಿಸಲು ಬೈಕ್ ರ್ಯಾಲಿಯನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮಾತನಾಡಿ, ಪ್ರತಿ 10 ವರ್ಷಕ್ಕೊಮ್ಮೆ ನಡೆಯುವ ಜನಗಣತಿ ಈ ಬಾರಿ ಪ್ರಪ್ರಥಮ ಬಾರಿಗೆ ಡಿಜಿಟಲ್ ವಿಧಾನದಲ್ಲಿ ನಡೆಯುತ್ತಿದೆ ಎಂದು ಹೇಳಿದರು. ಸಾರ್ವಜನಿಕರಿಗೆ ಸ್ವಯಂ ಗಣತಿ (Self Enumera-tion) ಮಾಡುವ ಅವಕಾಶ ನೀಡಲಾಗಿದ್ದು, ಎಲ್ಲರೂ https://se.census.gov.in ವೆಬ್ಬಸೈಟ್ ಮೂಲಕ ತಮ್ಮ ಮಾಹಿತಿ ಸಲ್ಲಿಸಿ ಈ ಮಹತ್ತರ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಏಪ್ರಿಲ್ 15ರೊಳಗೆ ಸ್ವಯಂಗಣತಿ ಪೂರ್ಣಗೊಳಿಸಿದ ಬಳಿಕ ದೊರೆಯುವ ಅಂಕಿತ ತಿಳಿಸಿದರು.
ಸಂಖ್ಯೆಯನ್ನು (Acknowl-edgement Number) ಗಣತಿದಾರರಿಗೆ ನೀಡುವಂತೆ ತಿಳಿಸಿದರು.
ಪೌರಾಯುಕ್ತ ಜ್ಯೋತಿ ಗಿರೀಶ್ ಮಾತನಾಡಿ, ಏಪ್ರಿಲ್ 1ರಿಂದ 15ರವರೆಗೆ ಸ್ವಯಂ ಗಣತಿಯ ಅವಕಾಶ ಲಭ್ಯವಿದ್ದು, ಇದರಿಂದ ಸಮಯ ಉಳಿತಾಯವಾಗಲಿದೆ ಎಂದು ಹೇಳಿದರು.
ಮನೆಗೆ ಬರುವ ಗಣತಿದಾರರಿಗೆ ಉತ್ತರ ನೀಡುವ ಬದಲು ನಾಗರಿಕರು ತಮ್ಮ ಮನೆಯಲ್ಲಿ ಸುಲಭವಾಗಿ ಮಾಹಿತಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಸುಮಾರು 35 ಪ್ರಶ್ನೆಗಳ ಮಾಹಿತಿಯನ್ನು ನಾಗರಿಕರು ಸ್ವತಃ ಭರ್ತಿ ಮಾಡುವ ಮೂಲಕ ಪ್ರಕ್ರಿಯೆಯನ್ನು ವೇಗಗೊಳಿಸಬಹುದೆಂದು ಹೇಳಿದರು.
ತಹಶಿಲ್ದಾರ ಅನೀಲ ಬಡಗೇರ ಮಾತನಾಡಿ,ಜನಗಣತಿ ಪ್ರಕ್ರಿಯೆಯ ಭಾಗವಾಗಿ ನಗರದಲ್ಲಿ ಜಾಗೃತಿ ಮೂಡಿಸಲು ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸ್ವಯಂ ಗಣತಿ ಮಾಡುವುದರಿಂದ ಸಮಯ ಉಳಿತಾಯವಾಗುವುದಲ್ಲದೆ, ಗಣತಿದಾರರ ಕಾರ್ಯವೂ ಸುಲಭವಾಗಲಿದೆ. ಸಾರ್ವಜನಿಕರು ಮೊಬೈಲ್ ಮೂಲಕ ಸರಳವಾಗಿ ತಮ್ಮಮಾಹಿತಿಯನ್ನು ನಮೂದಿಸಿ, ಬಳಿಕ ದೊರೆಯುವ ಐಡಿ ಸಂಖ್ಯೆಯನ್ನು ಗಣತಿದಾರರಿಗೆ ನೀಡಬೇಕು ಎಂದು ಮನವಿ ಮಾಡಿದರು.
ಈ ಜಾಗೃತಿ ರ್ಯಾಲಿಯಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

