ಚಡಚಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಮುಕ್ತ ಕೋರ್ಸಗಳ ಮಹತ್ವ ತಿಳಿಸಿದ ಡಾ.ಮಂಜುಳಾ
ಉದಯರಶ್ಮಿ ದಿನಪತ್ರಿಕೆ
ಚಡಚಣ: ವಿಜಯಪುರ ಜಿಲ್ಲೆಯ ಚಡಚಣದಲ್ಲಿರುವ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ “ತರಗತಿಯ ಆಚೆಗೆ ಮುಕ್ತ ಕೋರ್ಸಗಳು” ಕುರಿತು ಒಂದು ದಿನದ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಮುಕ್ತ ಮತ್ತು ಹೊಂದಿಕೊಳ್ಳುವ ಶೈಕ್ಷಣಿಕ ವೇದಿಕೆಗಳ ಮೂಲಕ ಸಾಂಪ್ರದಾಯಿಕ ತರಗತಿಯನ್ನು ಮೀರಿ ಕಲಿಕೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಕಾರ್ಯಾಗಾರದ ಮುಖ್ಯ ಉದ್ದೇಶವಾಗಿತ್ತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ಮಂಜುಳಾ (ಸಹಾಯಕ ಪ್ರಾಧ್ಯಾಪಕರು ಹಾಗೂ ಹಿರಿಯ ಗ್ರಂಥಪಾಲಕರು, ಬಿಎಲ್ಡಿಇ ಡಿಮ್ಡ್ ವಿಶ್ವವಿದ್ಯಾಲಯ, ವಿಜಯಪುರ)ಅವರು ಜ್ಯೋತಿ ಬೇಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೇ ನೀಡಿ ಮಾತನಾಡಿದ ಅವರು ಎಮ್ಓಓಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆನ್ಲೈನ್ ಪ್ರಮಾಣಪತ್ರ ಕೋರ್ಸಗಳು ಹಾಗೂ ಕೌಶಲ್ಯ ಆಧಾರಿತ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು. ಡಿಜಿಟಲ್ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ವಯಂ-ಗತಿಯ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಡಾ. ಎಸ್.ಎಸ್. ಚೋರಗಿ ತಮ್ಮ ಮುಖ್ಯ ಭಾಷಣದಲ್ಲಿ ಮುಕ್ತ ಕೋರ್ಸಗಳ ಸುಲಭ ಲಭ್ಯತೆ ಹಾಗೂ ಜಾಗತಿಕ ಮಾನ್ಯತೆ ಕುರಿತು ವಿವರಿಸಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಎಸ್.ಬಿ. ರಾಥೋಡ್ ವಿದ್ಯಾರ್ಥಿಗಳು ಪಠ್ಯಕ್ರಮದಾಚೆಗೆ ಕಲಿಕೆಯನ್ನು ವಿಸ್ತರಿಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮವು ಗ್ರಂಥಪಾಲಕರು ಹಾಗೂ ಸಂಘಟನಾ ಕಾರ್ಯದರ್ಶಿಗಳಾದ ಮಹಾಂತೇಶ್ ಬಿರಾದಾರ ಅವರ ಸ್ವಾಗತ ಭಾಷಣದೊಂದಿಗೆ ಆರಂಭಗೊಂಡಿತು. ಮುಕ್ತ ಕೋರ್ಸಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿಪರ ಕೌಶಲ್ಯ ಅಭಿವೃದ್ಧಿಗೆ ಮಹತ್ವದ್ದಾಗಿವೆ ಎಂದು ಹೇಳಿದರು.
ಕಾರ್ಯಕ್ರಮದ ಕೊನೆಯಲ್ಲಿ ಪ್ರೊ. ಸಂಜಯ್ಕುಮಾರ್ ಅವಟಿ ಧನ್ಯವಾದ ಅರ್ಪಿಸಿ, ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಎಲ್ಲಾ ಅತಿಥಿಗಳು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಐಕ್ಯೂಎಸಿ ಸಂಯೋಜಕ ಡಾ. ಎಸ್.ಎಸ್. ದೇಸಾಯಿ ಉಪಸ್ಥಿತರಿದ್ದರು.
ಪ್ರೊಫೆಸರ್ ಬಸವರಾಜ ಯಲ್ಲೂರ್ ಕಾರ್ಯಕ್ರಮವನ್ನು ನಿರೂಪಿಸಿದರು.
ಸುಮಾರು 200 ವಿದ್ಯಾರ್ಥಿಗಳು ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಾಗಾರ ಮಾಹಿತಿ ಸಮೃದ್ಧ ಮತ್ತು ಸಂವಾದಾತ್ಮಕವಾಗಿ ನಡೆಯಿತು.

