Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
(ರಾಜ್ಯ ) ಜಿಲ್ಲೆ

ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕಿನ ಲಚ್ಯಾಣದಲ್ಲಿ ನಡೆದ ಸದ್ಗುರು ಶ್ರೀ ಶಂಕರಲಿಂಗ ಶಿವಯೋಗಿಗಳ ಮಹಾರಥೋತ್ಸವ ಅಂಗವಾಗಿ ಬುಧವಾರದಂದು ಅಗ್ನಿ ಶಮನ ಕಾರ್ಯಕ್ರಮ ನೆರೆದ ಸಹಸ್ರಾರು ಭಕ್ತರ ಜಯಘೋಷಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಉತ್ಸವದ ಅಂಗವಾಗಿ ನಿಗಧಿಯಂತೆ ಲಚ್ಯಾಣ ಹಾಗೂ ಬಂಥನಾಳ ಮಠದ ಪ್ರಸ್ತುತ ಪೀಠಾಧೀಶರಾದ ಶ್ರೀ ವೃಷಭಲಿಂಗೇಶ್ವರ ಮಹಾ ಶಿವಯೋಗಿಗಳ ಅಡ್ಡ ಪಲ್ಲಕ್ಕಿ ಉತ್ಸವ ನಡೆಯಬೇಕಿತ್ತು. ಆದರೆ ಬಂಥನಾಳ ಪೂಜ್ಯರ ಅಪ್ಪಣೆಯ ಮೇರೆಗೆ ಯರನಾಳ ಮಠದ ಪೀಠಾಧೀಶರಾದ ಪೂಜ್ಯ ಗುರು ಸಂಗನಬಸವ ಮಹಾಸ್ವಾಮೀಜಿ ಅವರ ಅಡ್ಡ ಪಲ್ಲಕ್ಕಿ ಉತ್ಸವ ಹಾಗೂ ಅಗ್ನಿ ಪ್ರವೇಶ ಕಾರ್ಯಕ್ರಮ ಇದೇ ಮೊದಲ ಬಾರಿಗೆ ನಡೆಯಿತು. ಅಪರೂಪದ ಈ ದೃಶ್ಯಕ್ಕೆ ನೆರೆದ ಸಹಸ್ರಾರು ಜನರು ಸಾಕ್ಷಿಯಾಗಿ ಪೂಜ್ಯರ ದರ್ಶನ ಪಡೆದು ಪುನೀತರಾದರು.
ಶ್ರೀ ಸಿದ್ದಲಿಂಗ ಮಹಾರಾಜರ ಐಕ್ಯ ಮಂಟಪದಿಂದ ಆರಂಭವಾದ ಯರನಾಳ ಪೂಜ್ಯರ ಪಲ್ಲಕ್ಕಿ ಉತ್ಸವ ಭವ್ಯ ಮೆರವಣಿಗೆಯೊಂದಿಗೆ ಉತ್ತರ ದಿಕ್ಕಿನ ಮಠದ ಮಹಾದ್ವಾರ ಬಾಗಿಲಿನ ಮುಂಭಾಗದ ಪಾದಗಟ್ಟೆಯ ವರೆಗೆ ವಾದ್ಯ ಮೇಳದೊಂದಿಗೆ ನಡೆಯಿತು.
ಬಳಿಕ ಪುರವಂತರೊAದಿಗೆ ಅಗ್ನಿ ಶಮನ ಕಾರ್ಯಕ್ರಮ ಮಠದ ಸಂಪ್ರದಾಯದಂತೆ ಸಂಭ್ರಮದಿಂದ ನೇರವೇರಿತು.
ಸುಕ್ಷೇತ್ರ ಯರನಾಳ ಮಠಕ್ಕೂ ಲಚ್ಯಾಣ ಮಠಕ್ಕೂ ಅವಿನಾಭಾವ ಸಂಬಂಧ. ಲಚ್ಯಾಣ ಮಠ ಬಂಥನಾಳ ಮಠದ ಶಾಖಾ ಮಠವಾಗಿದೆ. ಲಚ್ಯಾಣ ಹಾಗೂ ಬಂಥನಾಳ ಮಠದ ಈ ಹಿಂದಿನ ಪೀಠಾಧೀಶ ರಾಗಿದ್ದ ಶ್ರೀ ಸಂಗನಬಸವ ಮಹಾಶಿವಯೋಗಿಗಳು ಈ ಮಠದ ಪೀಠಾಧೀಶರಾಗುವ ಮುನ್ನ ಯರನಾಳದ ಮಠದ ಪೀಠಧೀಶರಾಗಿದ್ದರು. ಇಂತಹ ವೀರಕ್ತ ಮಠ ಯರನಾಳ ಮಠದ ಪ್ರಸ್ತುತ ಪೀಠಧೀಶರಾದ ಶ್ರೀ ಗುರು ಸಂಗನಬಸವ ಮಹಾಸ್ವಾಮೀಜಿ ಅವರ ಅಡ್ಡ ಪಲ್ಲಕ್ಕಿ ಉತ್ಸವ ನಡೆದದ್ದು ಭಕ್ತರ ಸಂತಸ ಇಮ್ಮಡಿಗೊಳಿಸಿದೆ. ಲಚ್ಯಾಣ ಕ್ಷೇತ್ರದಲ್ಲಿ ಈ ಹಿಂದೆ ನಡೆದ ಉತ್ಸವದಲ್ಲಿ ಯರನಾಳ ಮಠದ ಈ ಹಿಂದಿನ ಪೀಠಾಧೀಶರಾಗಿದ್ದ ಶ್ರೀ ದಯಾನಂದ ಪೂಜ್ಯರ ಅಡ್ಡಪಲ್ಲಕ್ಕಿ ಉತ್ಸವ ಭವ್ಯವಾಗಿ ಜರುಗಿತ್ತು ಎಂದು ಭಕ್ತಿಯಿಂದ ಸ್ಮರಿಸುತ್ತಾರೆ ಸ್ಥಳೀಯ ನಿವೃತ್ತ ಪ್ರಾಚಾರ್ಯ ಎ. ಪಿ. ಕಾಗವಾಡ.
ಇದೇ ದಿನ ರಾತ್ರಿ ಖ್ಯಾತ ಕಲಾವಿದ ಸಿದ್ದು ನಾಲವತವಾದ ನೇತೃತ್ವದಲ್ಲಿ ಬಂಜೆಯ ತೊಟ್ಟಿಲು ಎಂಬ ಸಾಮಾಜಿಕ ನಾಟಕದ ಯಶಸ್ವಿ ಪ್ರದರ್ಶನಗೊಂಡು ನೆರೆದ ಪ್ರೇಕ್ಷಕರ ಮನಗೆದ್ದಿತು.
ಈ ದಿನ ಇಲ್ಲಿನ ಅನ್ನ ದಾಸೋಹ ಕೇಂದ್ರದಲ್ಲಿ ಭಕ್ತರು ವಿಶೇಷ ಅನ್ನ ಪ್ರಸಾದ ಸವಿದು ಕೃತಾರ್ಥರಾದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.