ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ತಾಲೂಕಿನ ಬಂದಾಳ ಗ್ರಾಮ ಎಂಬಲ್ಲಿ ಯುವತಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.೧೨ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ಜಯಶ್ರೀ ಭಗವಂತರಾಯ ಮಾಗಣಗೇರಿ (೨೧) ಎಂದು ಗುರುತಿಸಲಾಗಿದೆ. ಏ.೧೨ರಂದು ಮನೆಯಲ್ಲಿದ್ದು ಸಂಜೆ ವೇಳೆ ಮನೆಯಲ್ಲಿ ಕಾಣದೇ ನಾಪತ್ತೆಯಾಗಿದ್ದರು. ಹುಡುಕಾಡಿದಾದ ರಾತ್ರಿ ವೇಳೆ ಬಂದಾಳ ಸರಕಾರಿ ಶಾಲೆಯ ಸಮೀಪದ ಬಾವಿಯಲ್ಲಿ ಏ.೧೩ರಂದು ಬೆಳಿಗ್ಗೆ ಆಕೆಯ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ಪರಿಶೀಲನೆ ಮಾಡಿ ತನಿಖೆ ಪ್ರಾರಂಭಿಸಿದ್ದಾರೆ. ಮೃತ ದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಈ ಪ್ರಕರಣ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಆತ್ಮಹತ್ಯೆಗೆ ಇನ್ನು ಕಾರಣ ತಿಳಿದು ಬರಬೇಕಿದೆ.

