ಮುದ್ದೇಬಿಹಾಳ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಮನವಿ
ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸಲು ಪಕ್ಷಬೇಧ ಮರೆತು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಮನವಿ ಮಾಡಿದರು.
ಪಕ್ಷ ಮತ್ತು ವಿವಿಧ ದಲಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಟ್ಟಣದ ಅಂಬೇಡ್ಕರ್ ವೃತ್ತದ ಸ್ವಚ್ಛತಾ ಕಾರ್ಯಕ್ರಮದ ಬಳಿಕ ಅವರು ಮಾತನಾಡಿದರು.
ದೇಶದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗಾಗಿ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೊದೀಜಿ ಅವರು ನೀಡಿದ ಕರೆಗೆ ಸ್ಪಂದಿಸಿ, ಪಟ್ಟಣದ ಅಂಬೇಡ್ಕರ್ ವೃತ್ತಗಳನ್ನು ಸ್ವಚ್ಛಗೊಳಿಸುವ ಕಾರ್ಯ ಉತ್ಸಾಹದಿಂದ ಮಾಡಿದ್ದೇವೆ. ಈ ಕಾರ್ಯದಿಂದ ಅಂಬೇಡ್ಕರ್ ವೃತ್ತ ಹೊಸ ಮೆರುಗು ಪಡೆದುಕೊಂಡಿದ್ದೂ ಅಲ್ಲದೇ ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಗಿದೆ ಎಂದರು.
ಡಿಎಸ್ಎಸ್ ಮುಖಂಡ ಹರೀಶ ನಾಟೆಕಾರ್ ಮಾತನಾಡಿ ಇದು ಕೇವಲ ಸ್ವಚ್ಛತಾ ಕಾರ್ಯವಲ್ಲ, ನಮ್ಮ ಸಮಾಜದ ಜವಾಬ್ದಾರಿ. ಇಂತಹ ಅಭಿಯಾನಗಳಿಂದ ಜನರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಹೆಚ್ಚುತ್ತದೆ. ಮುಂದೆಯೂ ಇಂತಹ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತೇವೆ ಎಂದರು.
ಈ ವೇಳೆ ಹಿರಿಯ ಪತ್ರಕರ್ತ ಪರಶುರಾಮ ಕೊಣ್ಣೂರ, ಬಿಜೆಪಿಯ ಪ್ರಮುಖರಾದ ಸಂಗನಗೌಡ ಪಾಟೀಲ, ಮಲ್ಲಣ್ಣ ತಂಗಡಗಿ, ರಾಜು ಬಳ್ಳೊಳ್ಳಿ, ಸಂಜು ಬಾಗೇವಾಡಿ, ಸಂಗಣ್ಣ ಹತ್ತಿ, ಡಿಎಸ್ಎಸ್ ಮುಖಂಡರಾದ ಯಮನಪ್ಪ ವಡ್ಡರ, ಶಾಂತು ನಾಯಕಮಕ್ಕಳ ಸೇರಿದಂತೆ ಹಲವರು ಇದ್ದರು.
ಕೋಟ್:
ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಪಟ್ಟಣದ ಬಾಬಾ ಸಹೇಬ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಪಕ್ಷದ ವತಿಯಿಂದ ವಿಶೇಶ ಗೌರವ ಸಲ್ಲಿಸಲಾಗುತ್ತಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ.
ಜಗದೀಶ ಪಂಪಣ್ಣವರ. ಮಂಡಲ ಅಧ್ಯಕ್ಷರು, ಭಾರತೀಯ ಜನತಾ ಪಾರ್ಟಿ

