Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ

ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್

ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೋಲಿಕೆ ಇಲ್ಲವೆಂದು ಪುತ್ರನನ್ನೇ ಕೊಲೆ ಮಾಡಿದ ತಂದೆ!
(ರಾಜ್ಯ ) ಜಿಲ್ಲೆ

ಹೋಲಿಕೆ ಇಲ್ಲವೆಂದು ಪುತ್ರನನ್ನೇ ಕೊಲೆ ಮಾಡಿದ ತಂದೆ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನೋಡಲು ತನ್ನಂತಿಲ್ಲ ಎಂಬ ಕಾರಣಕ್ಕೆ ತಂದೆಯೋರ್ವ ಪುತ್ರನನ್ನೇ ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ.
ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಳೆದ ಮಾರ್ಚ್‌ನಲ್ಲಿಯೇ ಈ ಘಟನೆ ನಡೆದಿದ್ದು, ಇದೀಗ ಅಸಲಿಯತ್ತು ಬಯಲಾಗಿದೆ.
ಈ ಮೊದಲು ಮಗು ಕಾಣೆಯಾಗಿದೆ ಎಂದು ದೂರು ಕೊಟ್ಟಿದ್ದ ಕುಟುಂಬಸ್ಥರೇ ಇದೀಗ ತಂದೆಯೇ ಪುತ್ರನನ್ನು ಕೊಂದಿದ್ದಾನೆಂದು ದೂರು ದಾಖಲಿಸಿದ್ದು, ಇಡೀ ಪ್ರಕರಣ ರೋಚಕ ತಿರುವು ಪಡೆದಿದೆ.
ಘಟನೆ ವಿವರ:
ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತ ಮಾ.15 ರಂದು ತನ್ನ ಆರು ವರ್ಷದ ಪುತ್ರ ಸಿದ್ಧಾರ್ಥನನ್ನು ಶಾಲೆಗೆ ಸೇರಿಸುವುದಾಗಿ ಮನೆಯಿಂದ ಕರೆದೊಯ್ದಿದ್ದಾನೆ. ಬಳಿಕ ಮನೆಗೆ ಬಂದು ಮಗನನ್ನು ಶಾಲೆಗೆ ಸೇರಿಸಿದ್ದಾಗಿ ತಿಳಿಸಿದ್ದಾನೆ. ಏಪ್ರೀಲ್ 1 ರಂದು ಸಿದ್ಧಾರ್ಥನ ಜನ್ಮ ದಿನವಿದ್ದು, ಆಚರಣೆಗಾಗಿ ಕರೆತರಲು ಮಲ್ಲಿಕಾರ್ಜುನನ ಪತ್ನಿ ಭಾಗ್ಯಶ್ರೀ ದುಂಬಾಲು ಬಿದ್ದಿದ್ದಾಳೆ. ಕಡೇ ಪಕ್ಷ ಫೋನ್ ಮಾಡಿಯಾದರೂ ಮಗನೊಂದಿಗೆ ಮಾತನಾಡಿಸು ಎಂದು ಒತ್ತಾಯಿಸಲಾಗಿ ಯಾರ ಜೊತೆಗೋ ಮಾತನಾಡಿಸಿದ್ದು, ಮಗನ ಕೈಗೆ ಮೊಬೈಲ್ ಕೊಡುವಂತೆ ಹೇಳಿದಾಗ, ಆತ ಮಾತನಾಡಲು ನಿರಾಕರಿಸುತ್ತಿರುವುದಾಗಿ ಅಪರಿಚಿತರು ತಿಳಿಸಿದ್ದಾರೆ.
ಇದರಿಂದ ಅನುಮಾನಗೊಂಡ ಭಾಗ್ಯಶ್ರೀ ಮಗನನ್ನು ಕರೆದುಕೊಂಡು ಬರೋಣವೆಂದು ಒತ್ತಾಯಿಸಲಾಗಿ ಮಲ್ಲಿಕಾರ್ಜುನ ಬೈಕ್ ಮೇಲೆ ಕರೆದೊಯ್ದು ಸಿಂದಗಿ ಬಸ್ ನಿಲ್ದಾಣ ಮತ್ತಿತರ ಕಡೆ ಸುತ್ತಾಡಿಸಿಕೊಂಡು ಹತ್ತಿರದ ಬಂದಾಳ ಗ್ರಾಮದಲ್ಲಿ ಸಂಬಂಧಿಕರನ್ನು ಭೇಟಿ ಮಾಡಿಸಿದ್ದಾನೆ. ವಾಪಸ್ ನಾಗಠಾಣಕ್ಕೆ ಬರುತ್ತಿರಬೇಕಾದರೆ ಮಾರ್ಗಮಧ್ಯೆ ಭಾಗ್ಯಶ್ರೀ ಹಠ ಹಿಡಿಯಲಾಗಿ, ಬೋರಾಡಿ ಅತ್ತ ಮಲ್ಲಿಕಾರ್ಜುನ ಸತ್ಯ ಬಯಲುಗೊಳಿಸಿದೇ ಕೇವಲ ನನ್ನನ್ನು ಕ್ಷಮಿಸು ಎಂದು ಹೇಳಿದ್ದಾನೆ. ಬಳಿಕ ಗ್ರಾಮದಲ್ಲಿ ಕುಟುಂಬಸ್ಥರು ಹಾಗೂ ಹಿರಿಯರು ಸತ್ಯ ಬಾಯಿ ಬಿಡುವಂತೆ ಒತ್ತಾಯಿಸತೊಡಗಿದ್ದಾಗ ಮಲ್ಲಿಕಾರ್ಜುನ ಪರಾರಿಯಾಗಿದ್ದಾನೆ. ನಂತರ ಪೊಲೀಸರು ಕರೆತಂದು ವಿಚಾರಣೆ ನಡೆಸಲಾಗಿ ಸತ್ಯ ಬಯಲಾಗಿದೆ.

ಮಹಾರಾಷ್ಟ್ರದ ಕರಾಡದಲ್ಲಿ ಕೊಲೆ!

ಮಾ.16 ರಂದು ಮಹಾರಾಷ್ಟ್ರದ ಕರಾಡ ಬಳಿಯ ಕೃಷ್ಣಾ ನದಿಯಲ್ಲಿ ಪುತ್ರನನ್ನು ಕೊಂದು ಎಸೆದಿರುವ ಮಲ್ಲಿಕಾರ್ಜುನ ಬಳಿಕ ಸತ್ಯ ಮರೆಮಾಚಲು ಹಲವು ಕಸರತ್ತು ನಡೆಸಿದ್ದಾನೆ. ಕೆಲ ದಿನಗಳ ಹಿಂದಷ್ಟೇ ಕರಾಡದಲ್ಲಿ ಬಾಲಕನೋರ್ವನ ಶವ ಪತ್ತೆಯಾಗಿದ್ದು, ಆತ ಶವ ಪರಿಶೀಲಿಸಲಾಗಿ ಸಿದ್ಧಾರ್ಥನದ್ದೇ ಎಂದು ಗೊತ್ತಾಗಿದೆ. ಮಲ್ಲಿಕಾರ್ಜುನನಿಗೆ ಬಾಯ್ಬಿಡಿಸಲಾಗಿ ಮಗ ನೋಡಲು ತನ್ನಂತಿಲ್ಲ ಎಂಬ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾನೆಂಬ ಅಂಶ ಬೆಚ್ಚಿಬೀಳಿಸಿದೆ.
ಸದ್ಯ ತನಿಖೆ ಪ್ರಗತಿಯಲ್ಲಿದೆ ಎಂದು ಎಸ್‌ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ

ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್

ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ

ಆದರ್ಶ ವಿದ್ಯಾಲಯ ಶಿಕ್ಷಕ ಚಟ್ಟರಕಿ ಅಮಾನತು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಶಿಕ್ಷಕ ಚಟ್ಟರಕಿ ಅಮಾನತು
    In (ರಾಜ್ಯ ) ಜಿಲ್ಲೆ
  • ನವ ಭಾರತ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಹಾಕಿದ ಡಾ.ಅಂಬೇಡ್ಕರ್
    In (ರಾಜ್ಯ ) ಜಿಲ್ಲೆ
  • ಶಾಲೆಗಳ ಮಾನ್ಯತೆ ನೀಡುವಲ್ಲಿ ಕೋಟ್ಯಂತರ ರೂ. ಹಗರಣ!
    In (ರಾಜ್ಯ ) ಜಿಲ್ಲೆ
  • ಬಡವರಿಗೆ ಆಹಾರ ಸಿಗಬೇಕೆನ್ನುವುದೇ ’ಇಂದಿರಾ ಕ್ಯಾಂಟೀನ್’ ಆಶಯ
    In (ರಾಜ್ಯ ) ಜಿಲ್ಲೆ
  • ರೂ.1.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ಹೋಲಿಕೆ ಇಲ್ಲವೆಂದು ಪುತ್ರನನ್ನೇ ಕೊಲೆ ಮಾಡಿದ ತಂದೆ!
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ ತತ್ವ, ಸಿದ್ಧಾಂತಗಳು ಸದಾ ಪ್ರಸ್ತುತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.