ಉದಯರಶ್ಮಿ ದಿನಪತ್ರಿಕೆ
ಚಡಚಣ: ತಾಲೂಕಾಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಚಡಚಣ ಪಟ್ಟಣದ ತಹಶೀಲ್ದಾರ್ ಕಛೇರಿ ಆವರಣದಲ್ಲಿ ಅತ್ಯಂತ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟಿಸಿದ ಶಾಸಕ ವಿಠ್ಠಲ ಕಟಕಧೋಂಡ ಅವರು ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಭಾರತದ ಸಂವಿಧಾನದ ಶಿಲ್ಪಿಯಷ್ಟೇ ಅಲ್ಲದೆ, ವಿಶ್ವಕ್ಕೆ ಮಾದರಿಯಾಗಿದ್ದಾರೆ, ಸಮಾಜದಲ್ಲಿಯ ಅಂಕು ಡೊಂಕುಗಳನ್ನು ತಿದ್ದುವ ಮತ್ತು ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಬಿತ್ತಿದ ಮಹಾನ್ ಚಿಂತಕರು ಎಂದು ಹೇಳಿದರು.
ಯುವಜನತೆ ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಸಾಮಾಜಿಕ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಕರೆ ನೀಡಿದರು.
ಉಪನ್ಯಾಸಕರಾದ ಡಾ. ಸಂಜೀವಕುಮಾರ ಪೋತೆ ಅವರು ಅಂಬೇಡ್ಕರ್ ಅವರ ಜೀವನಚರಿತ್ರೆಯನ್ನು ಸವಿಸ್ತಾರವಾಗಿ ಪರಿಚಯಿಸಿದರು.
ತಹಶೀಲ್ದಾರ ಸಂಜಯ ಇಂಗಳೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಲಾಯಿತು. ಸಂವಿಧಾನದ ಪೀಠಿಕೆ ಓದಲಾಯಿತು.
ಪಟ್ಟಣದ ಪ್ರಮುಖ ಬೀದಿಯಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಅದ್ಧೂರಿ ಮೆರವಣಿಗೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ ಸಂಜಯ ಇಂಗಳೆ, ಪ.ಪಂ.ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ,ಪ.ಪಂ.ಉಪಾಧ್ಯಕ್ಷ ಇಲಾಹಿಸಾಬ ನದಾಫ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಅಶೋಕಕುಮಾರ ರಾಠೋಡ, ಪ.ಪಂ.ಮುಖ್ಯಾಧಿಕಾರಿ ಬಿ.ಕೆ.ತಾವಸೆ, ಸಹಾಯಕ ನಿರ್ದೆಶಕ ಸಮಾಜ ಕಲ್ಯಾಣ ಇಲಾಖೆ ಉಮೇಶ ಲಮಾಣಿ, ಸಿಪಿಐ ಪರಶುರಾಮ ಮನಗೂಳಿ, ಪಿಎಸ್ಐ ಸೋಮೇಶ ಗೆಜ್ಜಿ,ಮುಖಂಡ ಕಾಂತುಗೌಡ ಪಾಟೀಲ, ಮಹಾದೇವ ಬನಸೋಡೆ, ಧರ್ಮಣ್ಣ ಬನಸೋಡೆ, ಸೋಮು ಬಡಿಗೇರ, ಚೇತನ ನೀರಾಳೆ, ನಾಗೇಶ ಗಾಯಕವಾಡ, ವಿವಿಧ ಸಂಘಟನೆಗಳ ಮುಖಂಡರು, ಪ.ಪಂ.ಎಲ್ಲ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

