Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶ ಮುಂದುವರಿಯಲು ಆದಾಯ ತೆರಿಗೆ ಸಲ್ಲಿಕೆ ಅಗತ್ಯ :ಕಾರಜೋಳ
(ರಾಜ್ಯ ) ಜಿಲ್ಲೆ

ದೇಶ ಮುಂದುವರಿಯಲು ಆದಾಯ ತೆರಿಗೆ ಸಲ್ಲಿಕೆ ಅಗತ್ಯ :ಕಾರಜೋಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಛಾಯಾಗ್ರಾಹಕರಿಗೆ ಆದಾಯ ತೆರಿಗೆ ಮತ್ತು ಜಿಎಸ್ಟಿ ಕುರಿತು ವಿಶೇಷ ಕಾರ್ಯಾಗಾರದಲ್ಲಿ ಚಾರ್ಟರ್ಡ್ ಅಕೌಂಟಂಟ್ ಶಾಂತವಿರೇಶ ಮಣೂರ ಉಪನ್ಯಾಸ

ವಿಜಯಪುರ: ದೇಶ ಮುಂದುವರಿಯಲು ಪ್ರತಿಯೊಬ್ಬರೂ ತಮ್ಮ ಆದಾಯಕ್ಕೆ ತಕ್ಕಂತೆ ಸರಕಾರಕ್ಕೆ ತೆರಿಗೆ ಸಲ್ಲಿಸುವುದು ಅಗತ್ಯ. ಆದರೆ ಛಾಯಾಗ್ರಾಹಕರಿಗಿರುವ ಸೇವಾ ತೆರಿಗೆ ಶೇ.18 ಅವರಿಗೆ ಹೊರೆಯಾಗಿದ್ದು, ಸರಕಾರ ಅದನ್ನು ಶೇ. 5 ರ ವ್ಯಾಪ್ತಿಗೆ ತರಬೇಕು. ಅದಕ್ಕಾಗಿ ಛಾಯಾಗ್ರಾಹಕರು ಸಂಘಟನೆ ಮೂಲಕ ಸರಕಾರಕ್ಕೆ ಮನವಿ ಮಾಡುವಂತೆ ಯುವ ಭಾರತ ಸಮಿತಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಉಮೇಶ ಕಾರಜೋಳ ಸಲಹೆ ನೀಡಿದರು.
ನಗರದ ಸರಕಾರಿ ಆರ್ಟ ಗ್ಯಾಲರಿಯಲ್ಲಿ ಗುರುವಾರ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಮತ್ತು ಯುವ ಭಾರತ ಸಮಿತಿ, ವಿಜಯಪುರ ಇವರ ಸಹಯೋಗದಲ್ಲಿ ಛಾಯಾಗ್ರಾಹಕರಿಗೆ ಆದಾಯ ತೆರಿಗೆ ಮತ್ತು ಜಿ.ಎಸ್.ಟಿ. ಕುರಿತು ವಿಶೇಷ ಕಾರ್ಯಾಗಾರ, ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಉಧ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ವಿಜಯಪುರದ ಜಾರಿ ಸರಕುಗಳು ಮತ್ತು ಸೇವಾ ತೆರಿಗೆ ಇಲಾಖೆಯ ಸಿ.ಟಿ.ಓ. ಸುರೇಶ.ಎಂ.ಗೊಳಸಂಗಿ ಮಾತನಾಡಿ, ಯಾವುದೇ ವ್ಯವಹಾರದಲ್ಲಿ ಕಷ್ಟಕ್ಕೆ ಎದೆಗುಂದದೇ ಮುಂದೆ ಸಾಗಿದಾಗ ಮಾತ್ರ ಉಜ್ವಲ ಭವಿಷ್ಯ ಸಾಧ್ಯ. ಗುರಿ ಸುಪ್ತವಾಗಿದ್ದು ಸಾಧನೆ ಸತತವಾಗಿರಬೇಕು. ವ್ಯವಹಾರದ ಮಾರಾಟ ಮತ್ತು ಖರೀಧಿಗೆ ಸಂಬಂಧಿಸಿದ ವಿವರಗಳು ಪಾರದರ್ಶಕವಾಗಿ ಪ್ರತಿ ತಿಂಗಳು ನಮ್ಮ ಇಲಾಖೆಗೆ ರಿಟರ್ನ್ ಫೈಲ್ ಮಾಡಿದರೆ ಯಾವ ಸಮಸ್ಯೆಗಳೂ ಇರೊಲ್ಲ ಎಂದರು.
ವಿಜಯಪುರದ ಲೆಕ್ಕ ಪರಿಶೋಧಕ (ಸಿಎ) ಶಾಂತವಿರೇಶ ಮಣೂರ ಮಾತನಾಡಿ, ಛಾಯಾಗ್ರಾಹಕರ ವ್ಯವಹಾರಕ್ಕೆ ಸಂಬಂಧಿಸಿದ ತೆರಿಗೆಗಳು ಕುರಿತು ಸಮಗ್ರ ಮಾಹಿತಿ ನೀಡಿದರಲ್ಲದೆ, ವ್ರವಹಾರದ ಲೆಕ್ಕಪತ್ರಗಳ ದಾಖಲೆಗಳನ್ನು ಆರು ವರ್ಷಗಳವರೆಗೆ ಕಾಯ್ದಿರಿಸಿಡಬೇಕೆಂದು ಸಲಹೆ ನೀಡಿದರು.
ಜಿಎಸ್‌ಟಿಪಿ ಸರಕುಗಳು ಮತ್ತು ಸೇವಾ ತೆರಿಗೆ ಸಲಹೆಗಾರ ಸಿದ್ದನಗೌಡ ಬಿರಾದಾರ, ಲೆಕ್ಕಪತ್ರ ಮತ್ತು ಜಿ.ಎಸ್.ಟಿ. ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಮೇಶ ಚವ್ಹಾಣ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ ಛಾಯಾಗ್ರಾಹಕರಿಗೆ ಜಿಎಸ್ಟಿ, ಆದಾಯ ತೆರಿಗೆ ಕುರಿತ ಮಾಹಿತಿ ನೀಗಿಸಲು ಈ ಕಾರ್ಯಕ್ರಮ ಆಯೋಜಿಸಿದ್ದು, ಸಂಘದ ಸದಸ್ಯರಿಗೆ ಸಹಾಯವಾಗಲೆಂದು, ಸಂಘದ ವತಿಯಿಂದ ತೆರಿಗೆ ಸಲಹೆಗಾರ ನೇಮಕದ ಆಲೋಚನೆ ಹೊಂದಿರುವುದಾಗಿ ಹೇಳಿದರು.
ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ಸತೀಶ ಕಲಾಲ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಇಂಡಿ ತಾಲೂಕಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಸಿದ್ದಪ್ಪ ಮಲ್ಲಪ್ಪ ಕುದರೆ, ಬಬಲೇಶ್ವರ ತಾಲೂಕಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಜಂಗಲಿಬಾಷಾ ಮುಜಾವರ, ಮತ್ತು ಮೌನೇಶ ಬಡಿಗೇರ, ಕೋಲ್ಹಾರ ತಾಲೂಕಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಸಂಗಯ್ಯ ಮಠಪತಿ, ಹಾಗೂ ಪಡೆಪ್ಪಾ ಕೋಲಕಾರ, ಯುವ ಭಾರತ ಸಮಿತಿಯ ಪದಾಧಿಕಾರಿಗಳಾದ ವಿನೋದಕುಮಾರ ಮಣೂರ, ವಿರೇಶ ಗೊಬ್ಬುರ, ಕಲ್ಮೇಶ ಅಮರಾವತಿ, ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಉಪಾಧ್ಯಕ್ಷ ಪ್ರಶಾಂತ ಪಟ್ಟಣಶೆಟ್ಟಿ, ಖಜಾಂಚಿ ಸುರೇಶ ರಾಠೋಡ, ನಿರ್ದೇಶಕರಾದ ರಾಜುಸಿಂಗ ರಜಪೂತ, ಗುರುಬಾಳಪ್ಪ ಗಲಗಲಿ, ಮಲ್ಲಿಕಾರ್ಜುನ ಪಾರ್ವತಿ, ಪವನಕುಮಾರ ಅಂಗಡಿ, ಸಂಜೀವ ಕುಂಬಾರ ಸದಸ್ಯರಾದ ಅನಂತ ಭೋಸಲೆ, ಪ್ರಮೋದ ಕಾಜಗಾರ, ಕಿಶೋರ ಖಂಡಾಗಳೆ, ಸುಗುರೇಶ ಗಲ್ಪಿ, ಕೇಶವ ರಾಠೋಡ, ಬಸವರಾಜ ಸರ್ಜಾಪೂರ, ಶಶಿ ಕುಂಬಾರ, ಪ್ರಮೋದ ಪಾಟೀಲ, ಅಶೋಕ ಸಾರವಾಡ, ಗೀರಿಶ ಚೌಕಿಮಠ. ಸಹಿತ ಜಿಲ್ಲೆಯ ಛಾಯಾಗ್ರಾಹಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.