ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ಕರ್ನಾಟಕದಲ್ಲಿ 2026ರ ಏಪ್ರಿಲ್ 16 ರಿಂದ ಮೇ 15 ರವರೆಗೆ ಮನೆಪಟ್ಟಿ ಮತ್ತು ವಸತಿ ಗಣತಿ (Census) ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮೊದಲ ಮೂರು ದಿನ ಗ್ರಾಮದ ನಕ್ಷೆಯ ಜೊತೆಗೆ ಗಣತಿದಾರರಿಗೆ ಬಂದಂತಹ ಪ್ರದೇಶದಲ್ಲಿ ಲಭ್ಯವಿರುವ ಮನೆಗಳ, ರಸ್ತೆ, ಹಳ್ಳ, ಕೆರೆ, ಸಮುದಾಯ ಭವನ, ದೇವಸ್ಥಾನ ಸೇರಿದಂತೆ ಮನೆಪಟ್ಟಿ ತಯಾರಿಸಲು ಶಿಕ್ಷಕರು ಮನೆ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ತಾಲ್ಲೂಕಿನ ಘೋಣಸಗಿ ಗ್ರಾಮ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಬಿರು ಬಿಸಿಲಿನ ನಡುವೆಯೂ ರಜೆ ದಿನಗಳಲ್ಲಿ ಶಿಕ್ಷಕರು ಜನಗಣತಿ ಕಾರ್ಯ ಮಾಡುತ್ತಿದ್ದಾರೆ. ಆರಂಭದಲ್ಲಿ ಹಲವು ಶಿಕ್ಷಕರ ಮೊಬೈಲ್ ಲಾಗಿನದಲ್ಲಿ ತೊಂದರೆಯಾಗುತ್ತಿದೆ. ತಮಗೆ ವಹಿಸಿದ ನಕ್ಷೆ ಡೌನಲೋಡ್ ಆಗುತ್ತಿಲ್ಲ ಎಂದು ಶಿಕ್ಷಕರು ಮೇಲ್ವಿಚಾರಕರ ಗಮನಕ್ಕೆ ತಂದರು.
ಮೇಲ್ವಿಚಾರಕ ಐ.ಎ.ತೇಲಿ, ಗಣತಿದಾರ ಎಂ.ಎನ್.ಮದಬಾವಿ, ಸಾವಿತ್ರಿ ಆಕಳೆ, ನಾರಾಯಣ ಜಗತಾಪ, ಪಿ.ಎಸ್.ಗದ್ಯಾಳ, ಬಿಎಲ್ಓ ರಾಜು ಹುನ್ನೂರ ಇದ್ದರು.

