Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!

ಪ್ರೀತಿ-ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕ

ಸಿಂದಗಿಯ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರೀತಿ-ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕ
(ರಾಜ್ಯ ) ಜಿಲ್ಲೆ

ಪ್ರೀತಿ-ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ ಮನಗೂಳಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಜಗತ್ತಿನಲ್ಲಿ ಪ್ರೀತಿ-ವಿಶ್ವಾಸ ಬಹುಮುಖ್ಯವಾಗಿದೆ. ಪ್ರತಿಯೊಬ್ಬರೂ ಪ್ರೀತಿ-ವಿಶ್ವಾಸ ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ ಮನಗೂಳಿ ಹೇಳಿದರು.
ತಾಲೂಕಿನ ಮನಗೂಳಿ ಪಟ್ಟಣದ ಭಜನಾ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಟ್ಟೀಕಂಥಿ ಹಿರೇಮಠದ ಬಾಲತಪಸ್ವಿ ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 77ನೇ ಯಾತ್ರಾಮಹೋತ್ಸ, ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ 25ನೇ ಸಂಸ್ಮರಣೋತ್ಸವ ಹಾಗೂ ಶ್ರೀಗುರು ಮಹಾಂತೇಶ್ವರ ಪ್ರಶಸ್ತಿ ಹಾಗೂ ಭೂ ಜನ ಆರೋಗ್ಯ ರಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ,ಗುರುರಕ್ಷೆ, ಧರ್ಮ ಜಾಗೃತಿ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ಪ್ರತಿಯೊಬ್ಬರಲ್ಲಿ ಪ್ರೀತಿ-ವಿಶ್ವಾಸ ಇಲ್ಲದಂತಾಗಿರುವದು ವಿಷಾದನೀಯ. ಇದನ್ನು ಉಳಿಸಿಕೊಳ್ಳುವದು ಬಹಳ ದೊಡ್ಡ ಶಕ್ತಿಯಾಗಿದೆ. ಇದನ್ನು ಪ್ರತಿಯೊಬ್ಬರೂ ಉಳಿಸಿಕೊಂಡು ಜೀವನ ಮಾಡುವ ಅಗತ್ಯವಿದೆ. ಮನಸ್ಸಿನಲ್ಲಿ ಒಂದು ಹೊರಗೊಂದು ವಿಚಾರವನ್ನು ಇಟ್ಟುಕೊಂಡು ಜೀವನ ಸಾಗಿಸುವದು ಸರಿಯಲ್ಲ. ಎಂದಿಗೂ ವೈಮನಸ್ಸು ಇರಬಾರದು. ಪ್ರತಿಯೊಂದು ಊರಗಳಲ್ಲಿ ಎಲ್ಲ ಬಾಂಧವರು ಸಹಕಾರ, ಸಹಬಾಳ್ವೆ, ಪ್ರೀತಿ-ವಿಶ್ವಾಸದೊಂದಿಗೆ ಬದುಕು ಸಾಗಿಸುವಂತಾಗಬೇಕೆಂದರು.
ಸಾನಿಧ್ಯ ವಹಿಸಿದ್ದ ನಾಗಠಾಣದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನಾಡಿನಲ್ಲಿ ಶಿವಾಚಾರ್ಯ ಪರಂಪರೆಗೆ ಸೇರಿದ ಸಹಸ್ರ ಮಠಗಳಿವೆ. ಇಂತಹ ಮಠಗಳಲ್ಲಿ ಮನಗೂಳಿಯಲ್ಲಿರುವ ಪಟ್ಟೀಕಂಥಿ ಹಿರೇಮಠವು ತಪೋಭೂಷಣ, ತಪಸ್ವಿಮಠವಾಗಿದೆ. ಪ್ರಸ್ತುತ ಶ್ರೀಗಳು ಅನೇಕ ಸಾಮಾಜಿಕ, ಶೈಕ್ಷಣಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದರು.
ನೇತೃತ್ವ ವಹಿಸಿದ್ದ ಪಟ್ಟೀಕಂಥಿ ಹಿರೇಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇಂದು ರಾಸಾಯನಿಕ ಬಳಕೆಯಿಂದಾಗಿ ಭೂಮಿಯ ಆರೋಗ್ಯ ಕೆಟ್ಟು ಹೋಗಿದೆ. ಕೆಟ್ಟು ಹೋದ ಭೂಮಿಯಿಂದ ಬರುವ ಆಹಾರದಿಂದ ಜನರ ಆರೋಗ್ಯವು ಕೆಡುತ್ತಿದೆ. ಇದನ್ನು ಮನಗಂಡು ನಾವು ಸಾವಯವ ಕೃಷಿ ಮಾಡುವ ಕೃಷಿಕರನ್ನು ಉತ್ತೇಜನ ಮಾಡುವ ಸಲುವಾಗಿ ಭೂ ಜನ ಆರೋಗ್ಯ ರಕ್ಷಕ ಪ್ರಶಸ್ತಿ ಎಂಬ ವಿನೂತನವಾಗಿ ಶ್ರೀಮಠ ನೀಡಿದೆ. ಭೂಮಿಯ ಆರೋಗ್ಯ ಸರಿಯಿದ್ದರೆ ಜನರ ಆರೋಗ್ಯವು ಸರಿಯಾಗಿರುತ್ತದೆ ಎಂದರು.
ಜಿಪಂ ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಮುಖ್ಯಮಂತ್ರಿ ಪದಕ ಪುರಸ್ಕ್ರತ ಪಿಎಸ್ಐ ಶ್ರೀಕಾಂತ ಕಾಂಬಳೆ ಮಾತನಾಡಿದರು. ಸಾನಿಧ್ಯವನ್ನು ಕೆರೂರಿನ ಡಾ.ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಇಂಗಳೇಶ್ವರದ ಭೃಂಗೀಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಿದ್ದರು.
ಸಮಾರಂಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ವಿಶ್ವನಾಥಗೌಡ ಪಾಟೀಲ, ಪಟ್ಟಣ ಪಂಚಾಯಿತಿ ಹಂಗಾಮಿ ಅಧ್ಯಕ್ಷ ಶೇಖಪ್ಪಗೌಡ ಬಿರಾದಾರ, ಮುಖಂಡರಾದ ಸುಭಾಸಗೌಡ ಪಾಟೀಲ, ರಾಜಶೇಖರ ಮಗಿಮಠ, ಗುರು ಗಚ್ಚಿನಮಠ, ಎಸ್.ಎಸ್.ಗೊಳಸಂಗಿಮಠ, ಪಪಂ ಸದಸ್ಯರಾದ ಪ್ರದೀಪ ಜಾನಕರ, ಭಾಗ್ಯರಾಜ ಸೊನ್ನದ, ಪಪಂ ಮುಖ್ಯಾಧಿಕಾರಿ ನಿಖಿಲೇಶ ಪಾಟೀಲ ಇತರರು ಇದ್ದರು. ಸಂಗಮೇಶ ಗೆಣ್ಣೂರ ಸ್ವಾಗತಿಸಿದರು. ಎಸ್.ಪಿ.ಪಾಟೀಲ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ರತ್ನಾಬಾಯಿ ಸಿದ್ದಪ್ಪ ಗುಬ್ಬಾ ದಂಪತಿಗಳಿಗೆ ಶ್ರೀಗುರು ಮಹಾಂತೇಶ್ವರ ಪ್ರಶಸ್ತಿ, ವಿರೇಶ ಗೂಡಲಮನಿ ಅವರಿಗೆ ಭೂ ಜನ ಆರೋಗ್ಯ ರಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರತಿಭಾನ್ವಿತ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಗುರುರಕ್ಷೆ ನೀಡಲಾಯಿತು. ಶ್ರೀಮಠದ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗು, ಶಾಲಾ ಪರಿಕರಗಳನ್ನು ವಿತರಿಸಲಾಯಿತು. ಸಮಾರಂಭಕ್ಕೂ ಮುನ್ನ ಗುರು ಮಹಾಂತೇಶ್ವರರ ಹಾಗೂ ಗುರು ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ರಜತ ಮೂರ್ತಿಗಳ ಬೆಳ್ಳಿ ಅಡ್ಡಪಲ್ಲಕ್ಕಿ ಮಹೋತ್ಸವವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕುಂಭಮೇಳ, ಸಕಲ ವಾದ್ಯ ವೈಭವದೊಂದಿಗೆ ಸಂಭ್ರಮದಿಂದ ಜರುಗಿತು. ನಂತರ ರಥೋತ್ಸವ, ಶ್ರೀಮಠದ ಪೂಜ್ಯರ ಸಿಂಹಾಸನಾರೋಹಣ ನೆರವೇರಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!

ಸಿಂದಗಿಯ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ ಸಾಧನೆ

ಡಾ.ಅಂಬೇಡ್ಕರ್ ತತ್ವದಾರ್ಶ ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ

ಜನಗಣತಿ ಮೊದಲ ಹಂತಕ್ಕೆ ಚಾಲನೆ: ೧೮೨ ಸಿಬ್ಬಂದಿ ನಿಯೋಜನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!
    In (ರಾಜ್ಯ ) ಜಿಲ್ಲೆ
  • ಪ್ರೀತಿ-ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ ಸಾಧನೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವದಾರ್ಶ ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಜನಗಣತಿ ಮೊದಲ ಹಂತಕ್ಕೆ ಚಾಲನೆ: ೧೮೨ ಸಿಬ್ಬಂದಿ ನಿಯೋಜನೆ
    In (ರಾಜ್ಯ ) ಜಿಲ್ಲೆ
  • ಏ.೨೦ ರಂದು ಬಸವ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಪೂರ್ವಭಾವಿ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಏ.೧೯ ರಂದು ಬಸವನ ಬಾಗೇವಾಡಿಯಿಂದ ಬಸವಜ್ಯೋತಿ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ಸಾಂಗ್ಲಿಯಲ್ಲಿ ಲಿಂಗಾಯತ ಧರ್ಮ ಮಾನ್ಯತೆಗೆ ಅಮರಣ ಉಪವಾಸ
    In (ರಾಜ್ಯ ) ಜಿಲ್ಲೆ
  • ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ ತಂದ ನೇಹಾ ಕಂಕಣವಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.