ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪಾರಂಪರಿಕ ದಿನಾಚರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಮ್ಮ ಪರಂಪರೆ ಐತಿಹಾಸಿಕ ಸ್ಮಾರಕಗಳ ಇತಿಹಾಸ, ವೈವಿಧ್ಯತೆಯನ್ನು ಕಾಪಾಡಿಕೊಳ್ಳುವದು ಅಲ್ಲದೆ ಪಾರಂಪರಿಕೆ ತಾಣಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಚಡಚಣ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಮುಖಸ್ಥರಾದ ಡಾ. ಮಯೂರ ಕುದರಿ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನಿ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಹೆರಿಟೇಜ್ ಕ್ಲಬ್ ಹಾಗೂ ಇತಿಹಾಸ ವಿಭಾಗದ ಸಹಯೋಗದಲ್ಲಿ ಏ.೧೮ ರಂದು ವಿಶ್ವ ಪಾರಂಪರಿಕ ದಿನಾಚರಣೆ ಅಂಗವಾಗಿ ‘ಕರ್ನಾಟಕದ ಪಾರಂಪರಿಕ ಸ್ಮಾರಕಗಳ ಮಹತ್ವ’ ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಪುರಾತತ್ವ ಇಲಾಖೆಯಡಿಯಲ್ಲಿನ ಹಲವಾರು ವಿಶ್ವ ಪಾರಂಪರಿಕ ತಾಣಗಳು ಇದ್ದು ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮದಾಗಿದೆ, ಪಾರಂಪರಿಕ ತಾಣಗಳು ಪೂರ್ವಜರ ವಿಚಾರಗಳನ್ನು ಪಸ್ತುತಪಡಿಸುತ್ತಿವೆ ಎಂದರು.
ಈ ವೇಳೆಯಲ್ಲಿ ಇತಿಹಾಸ ವಿಭಾಗದ ಮುಖಸ್ಥರಾದ ಪ್ರೊ.ಐ.ಎಸ್.ಹೂಗಾರ ಸ್ವಾಗತಿಸಿದರು, ಹೆರಿಟೇಜ್ ಕ್ಲಬ್ ಸಂಯೋಜಕ ಡಾ.ಗಿರೀಶ ಹನಮರೆಡ್ಡಿ ಪರಿಚಯಿಸಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ.ಅನೀಲ.ಭಿ.ನಾಯಕ, ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ, ಡಾ.ತರನ್ನುಮ್ ಜಬೀನ ಖಾನ್, ಪ್ರೊ.ಎಸ್.ವೈ.ಅಂಗಡಿ, ಮಲಿಕ್ ಎಲ್. ಜಮಾದಾರ, ಅಕ್ಷಯ ಜನಾಯ, ಡಾ.ಸುಮಿ ಚೋಪಡೆ, ಲಕ್ಷ್ಮೀ ವಾಲಿ, ಪ್ರೊ.ಶೋಭಾ ರುದ್ರಗೌಡರ್, ಪ್ರೊ.ಸಿ.ಎನ್.ಕುನ್ನೂರ, ಡಾ.ಪಲ್ಲವಿ ಪಟಾಟೆ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

