ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾಮಾನವತಾವಾದಿ ಬಸವಣ್ಣನವರು ೧೨ ನೇಯ ಶತಮಾನದ ಮಹಾನ್ ಕ್ರಾಂತಿಕಾರಿ, ಸಮಾಜ ಸುಧಾರಕ ಮತ್ತು ತತ್ವಜ್ಞಾನಿಯಾಗಿದ್ದರು. ಅವರು ತನ್ನ ವಚನಗಳ ಮೂಲಕ ಸಮಾಜದಲ್ಲಿನ ಜಾತಿ, ಲಿಂಗ ತಾರತಮ್ಯ ಮತ್ತು ಮೌಢ್ಯತೆಗಳನ್ನು ಕಠೋರವಾಗಿ ವಿರೋಧಿಸುತ್ತಾ, ಸಮಾನತೆ ಮತ್ತು ಕಾಯಕ ನಿಷ್ಠೆಯನ್ನು ಬೋಧಿಸಿದ ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಧರ್ಮದ ಮೂಲ ಎಂಬ ಸಂದೇಶ ಸಾರುತ್ತಾ, ಸಾಮಾಜಿಕ ಜಾಗೃತಿ ಮೂಡಿಸುತ್ತಾ, ಸಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದವರು ಎಂದು ಹೊನ್ನುಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಬಸವರಾಜ ಕುಂಬಾರ ಅಭಿಪ್ರಾಯಪಟ್ಟರು.
ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ವಿಭಾಗದಡಿಯಲ್ಲಿ “ವಿಶ್ವಗುರು ಬಸವಣ್ಣ ಅವರ ಜಯಂತಿ” ಕಾರ್ಯಕ್ರಮದಲ್ಲಿ ಬಸವಣ್ಣನವರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡುತ್ತಿದ್ದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡ. ಎ.ಐ.ಹಂಜಗಿ ಅವರು ಮಾತನಾಡಿ, ವಿಶ್ವಗುರು ಬಸವಣ್ಣನವರ ವಚನಗಳ ಸಂದೇಶದ ಸಾರವನ್ನು ಜನರಿಗೆ ತಿಳಿಸಕೊಡಬೇಕಾಗಿರುವುದು ಇಂದಿನ ಅಗತ್ಯತೆಯಾಗಿದೆ ಎಂದರು.
ಸಾಂಸ್ಕೃತಿಕ ವಿಭಾಗದ ಸಂಚಾಲಕ ಡಾ. ಚಂದ್ರಕಾಂತ.ಬಿ. ವೇದಿಕೆಯ ಮೇಲಿದ್ದರು.
ಈ ಕಾರ್ಯಕ್ರಮದಲ್ಲಿ ಬಸವ ಜಯಂತಿ ಅಂಗವಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ನಾಯಕ-ಬಸವಣ್ಣ ವಿಷಯ ಕುರಿತು ಪ್ರಬಂಧ ಮತ್ತು ಬಸವಣ್ಣನವರ ವೈಚಾರಿಕ ಮತ್ತು ಮೌಲ್ವಿಕ ಚಿಂತನೆಗಳು ವಿಷಯ ಕುರಿತು ಏರ್ಪಡಿಸಿದ ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಚಿದಾನಂದ ಆನೂರ ನಿರೂಪಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎಂ.ಎಸ್.ಖೊದ್ನಾಪೂರ ಅತಿಥಿಗಳ ಪರಿಚಯಿಸಿದರು. ಡಾ. ಚಂದ್ರಕಾಂತ. ಬಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ರೂಪಾ ಕಮದಾಳ ವಂದಿಸಿದರು.
ಕಾರ್ಯಕ್ರಮದಲ್ಲಿ ಡಾ. ಸುನೀಲ ತೋಂಟಾಪೂರ, ಡಾ. ವಿಶಾಲಾಕ್ಷಿ ಹೊನ್ನಾಕಟ್ಟಿ, ಡಾ. ಬಸನಗೌಡ ಶಾಡದಳ್ಳಿ, ಡಾ. ಎಸ್.ಬಿ.ಕಬಾಡೆ, ಡಾ. ದೇವೇಂದ್ರಗೌಡ, ಡಾ. ರಾಜಶ್ರೀ ಮಾರನೂರ, ಡಾ.ಮಮತಾ ಬನ್ನೂರ, ಪ್ರೊ. ವಲ್ಲಭ ಕಬಾಡೆ, ಪ್ರೊ. ಸಿದ್ರಾಮ ಯರನಾಳ, ಪ್ರೊ. ಸಂಗಮೇಶ ಗುರವ, ಪ್ರೊ. ವಿನೋದ ಹುಲ್ಲೂರ, ಕಛೇರಿ ಅಧೀಕ್ಷಕಿ ಶ್ರೀಮತಿ ಸರ್ವಶ್ರೀ ಚಟ್ಟೇರ ಇನ್ನಿತರರು ಸೇರಿದಂತೆ ಕಾಲೇಜಿನ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

