ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಕಾರ್ಯಕ್ರಮ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ೧ ಮತ್ತು ೨ ರ ಸಹಯೋಗದಲ್ಲಿ ಏ.೨೨ ರಂದು ದತ್ತು ಗ್ರಾಮ ಅರಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ನಡೆಯಿತು.
ಈ ವೇಳೆ ಮುಖ್ಯ ಅತಿಥಿ ವಿಜಯಪುರದ ಹೆಚ್ಐವಿ ಏಡ್ಸ್ ಸಲಹೆಗಾರರಾದ ಅರ್ಚನಾ ಒಲಕೋಟೆ, ಮಾತನಾಡಿ, ಇಂದಿನ ಯುವಕರಲ್ಲಿ ಹೆಚ್ಐವಿ ಏಡ್ಸ್ ಸುರಕ್ಷಿತೆ ಬಗ್ಗೆ ಜಾಗೃತಿ ಅವಶ್ಯಕತೆ ಇದೆ ಅದರಂತೆ ತಡೆಗಟ್ಟುವಿಕೆ ಮತ್ತು ಚಿಕಿತ್ಸೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಬಗ್ಗೆ ಜಾಗೃತಿ ಮೂಡಿಸಿದರಲ್ಲದೆ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಅಗತ್ಯತೆಯ ಇದೆ ಎಂದರು.
ಈ ವೇಳೆಯಲ್ಲಿ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಧರ್ಮಗುರು ಪ್ರಸಾದ್ ಎಂ.ಪಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಹೆಚ್ಐವಿ ಏಡ್ಸ್ ಸುರಕ್ಷಿತೆ ಬಗ್ಗೆ ಎಲ್ಲ ಸ್ವಯಂಸೇವಕರು ಗ್ರಾಮದ ಸುತ್ತೆಲ್ಲ ಹೆಚ್ಐವಿ ಏಡ್ಸ್ ಸುರಕ್ಷಿತೆ ಬಗ್ಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಎನ್ಎಸ್ಎಸ್ ಘಟಕ-೧ ಮತ್ತು ೨ ರ ಕಾರ್ಯಕ್ರಮ ಅಧಿಕಾರಿಗಳಾದ ಡ. ಮಿಲನ್ ರಾಠೋಡ್ ,ಡಾ.ತರನ್ನುಮ್ ಜಬೀನ್ ಖಾನ್ ,ಪ್ರಾಣಿಶಾಸ್ತ್ರ ವಿಭಾಗದ ಬೋಧಕರು, ಎನ್ಎಸ್ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.

