ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಎಲ್. ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪಜಾ, ಪ.ಪಂಗಡದ ಹಲವಾರು ವಸತಿ ಶಾಲೆ ಮತ್ತು ನಿಲಯಗಳ ಸಮಸ್ಯೆಗಳ ಪಜಾ, ಪಪಂ ವರ್ಗಗಳ ಮಕ್ಕಳಿರುವ ಹಾಸ್ಟೇಲ್ ನಲ್ಲಿ ಬೇರೆಯವರು ವಾಸವಿದ್ದು, ಇದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಬೇರೆಯವರು ಉಳಿದುಕೊಳ್ಳದಂತೆ ನೋಡಿಕೊಳ್ಳಲು ಜಂಟಿ ಸಮಿತಿ ಮೂಲಕ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಎಲ್. ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಕ್ರಮವಹಿಸಲಾಗುವುದು ಎಂದರು.
ನಕಲಿ ಜಾತಿ ಪ್ರಮಾಣ ಪತ್ರದ ದುರ್ಬಳಕೆ ಗಂಭೀರವಾಗಿ ಪರಿಗಣಿಸಿದ್ದು, ನಕಲಿ ಜಾತಿ ಪ್ರಮಾಣ ಪತ್ರ ದುರುಪಯೋಗ ಮಾಡಿಕೊಳ್ಳುವವರ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆದೇಶಗಳನ್ನು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪಜಾ, ಪಂಗಡದ ವಿವಿಧ ನಿಗಮಕ್ಕೆ ಅನುದಾನ ಒದಗಿಸಕು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಸರಕಾರದ ಕಾರ್ಯದರ್ಶಿ ಮೂಲಕ ಅನುದಾನಕ್ಕೆ ಕೋರಲಾಗುವುದು. ವಿಜಯಪುರದ ಸಭೆಯಲ್ಲಿ ಸಾಕಷ್ಟು ಕುಂದುಕೊರತೆಗಳನ್ನು ಆಲಿಸಿದ್ದೇನೆ. ಹೇಳಿಕೆ ಮೂಲಕ ಲಿಖಿತ ದೂರುಗಳನ್ನು ಸ್ವೀಕರಿಸಿದ್ದೇನೆ. ಎಲ್ಲ ದೂರುಗಳಿಗೆ ನ್ಯಾಯ ದೊರಕಿಸಿ ಕೊಡಲಾಗುವುದು ಎಂದರು.
ಇನ್ನೊಂದೆಡೆ ಅಧಿಕಾರಿಗಳು ಸರ್ಕಾರದ ಪ್ರತಿಯೊಂದೂ ಆದೇಶಗಳನ್ನು ಪಾಲನೆ ಮಾಡಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಣ್ಯ ಕ್ರಮ ವಹಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಪಜಾ, ಪಪಂ ಜನಾಂಗದವರಿಗೆ ಸ್ಮಶಾನ ಭೂಮಿ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಎಲ್ಲೆಲ್ಲಿ ಸಮಸ್ಯೆಗಳಿವೆ. ಅಲ್ಲಿ ಸ್ಮಶಾನ ಭೂಮಿ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸ್ವಚ್ಚತೆ ಕಾಪಾಡುವ ಪೌರ ಕಾರ್ಮಿಕರು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಹಾಗಾಗಿ ಸರ್ಕಾರದ ಆಶಯದಂತೆ ಪೌರಕಾರ್ಮಿಕರಿಗೆ ಅವರಿಗೆ ದೊರಕುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪಜಾ, ಪಪಂ ನಿಗಮಗಳಿಗೆ ಕ್ರಮಬದ್ಧವಾಗಿ ಅನುದಾನ ಒದಗಿಸಲು ಸಮಾಜ ಕಲ್ಯಾಣ ಸಚಿವರನ್ನು ಕೋರಲಾಗುವುದು.
ಅಲೆಮಾರಿ ಜನಾಂಗದವರಿಗಾಗಿ ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬೇಡಿ. ಗೋಮಾಳ ಅರ್ಜಿ ಹಾಕಿಕೊಂಡಿದ್ದರೆ ರೆಗ್ಯುಲರೈಜ್ ಮಾಡಲು ಸಿಎಂ ಅವರಿಗೂ ಗಮನ ತರಲಾಗುವುದು ಎಂದರು.
ಎಸ್ ಸಿಪಿ ಟಿ ಎಸ್ ಪಿ ಅನುದಾನ ಬಳಕೆ ನಾಮ ಫಲಕ ಅಳವಡಿಸಲು ಕ್ರಮಕ್ಕೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಪತ್ರಮುಖೇನ ಅಧಿಕಾರಿ ವರ್ಗದವರಿಗೆ ಲೋಪ ದೋಷ ಕಂಡುಬಂದಲ್ಲಿ ನಿರ್ದಾಕ್ಷಣ್ಯ ಕ್ರಮವಹಿಸಲಾಗುವುದು ಎಂದು ಹೇಳಿದರು.
ಆಯೋಗದ ಸದಸ್ಯರಾದ ಸುನೀಲ ಉಕ್ಕಲಿ, ಎನ್ .ದಿವಾಕರ್ ಹಾಗೂ ಗೀತಾ ಥಾವಂಶಿ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಸೇರಿದಂತೆ ಪ ಉಪಸ್ಥಿತರಿದ್ದರು.

