ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಗ್ರಾಮದಿಂದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಹರಿಯುವ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪ ಕಾಲುವೆಯ ಸೇತುವೆಗೆ ತಡೆಗೋಡೆ ನಿರ್ಮಿಸಬೇಕೆಂದು ಈ ಭಾಗದ ರೈತರು, ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮದಿಂದ ಜಗದಾಳ, ಕುಳಲಿ ಮಾರ್ಗದ ಈ ರಸ್ತೆಯು ೨೦೨೦-೨೧ ನೇ ಸಾಲಿನ ಅಪೆಂಡಿಕ್ಸ -ಇ ಯೋಜನೆಯಡಿಯಲ್ಲಿ ಸುಮಾರು ೬ ಕೋಟಿ ರೂ.ಗಳ ವೆಚ್ಚದಲ್ಲಿ ದ್ವಿಪಥ ಮಾರ್ಗವಾಗಿ ಕಳೆದ ಎರಡು ವರ್ಷಗಳ ಹಿಂದೆ ಅಭಿವೃದ್ದಿ ಪಡಿಸಲಾಗಿದ್ದು, ಈ ರಸ್ತೆಯನ್ನು ಎತ್ತರಿಸಿದ ಕಾರಣ ಸೇತುವೆಯ ತಡೆಗೋಡೆ ಸಂಪೂರ್ಣವಾಗಿ ಮುಚ್ಚಿಕೊಂಡಿದ್ದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ. ಜನ ಜಾನುವಾರುಗಳು ಕಾಲುವೆಗೆ ಬೀಳುವ ಅಪಾಯ ಹೆಚ್ಚಿದ್ದು, ಪ್ರತಿದಿನ ಶಾಲಾ ವಾಹನಗಳು ಹಾಗೂ ಗುಡ್ಡದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಈ ಭಾಗದ ರೈತರು ತಮ್ಮ ಹೊಲ ಗದ್ದೆಗಳಿಗೆ ತೆರಳುವ ಏಕೈಕ ಮಾರ್ಗ ಇದಾಗಿದ್ದರಿಂದ ರಾತ್ರಿವೇಳೆ ಸಂಚರಿಸುವಾಗ ಸೇತುವೆ ಕಾಣದೆ ವಾಹನಗಳು ಕಾಲುವೆಗೆ ಬೀಳುವ ಅಪಾಯವಿದ್ದು, ಅನಾಹುತ ಸಂಭವಿಸುವ ಮುನ್ನ ಈ ಸೇತುವೆಗೆ ತಡೆಗೋಡೆ ನಿರ್ಮಿಸಿ ಈ ಮಾರ್ಗದ ಸಂಚಾರಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಈ ಭಾಗದ ನಾಗರಿಕರು ಸಂಬಂದಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

