Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
(ರಾಜ್ಯ ) ಜಿಲ್ಲೆ

ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆರು ತಿಂಗಳಲ್ಲಿ ಬಬಲೇಶ್ವರ ಮತಕ್ಷೇತ್ರದ ಎಲ್ಲ ಸರಕಾರಿ ಶಾಲೆಗಳಿಗೆ ಸಿ.ಎಸ್.ಆರ್ ಅನುದಾನದಡಿ ಕ್ರೀಡಾ ಸಲಕರಣೆ ಸೌಲಭ್ಯ ಸಿಗಲಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಅವರು ರವಿವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ಮದಗುಣಕಿ ಬಳಿ ಲೋಕೋಪಯೋಗಿ ಇಲಾಖೆಯ ವತಿಯಿಂದ ರೂ. 150 ಲಕ್ಷ ವೆಚ್ಚದ ಶಿವಣ್ಣವರ ವಸ್ತಿಯಿಂದ ಕೊಡಬಾಗಿವರೆಗಿನ ರಸ್ತೆ ಕಾಮಗಾರಿ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರೂ. 50 ಲಕ್ಷ ವೆಚ್ಷದ ಸಿಸಿ‌ ರಸ್ತೆಗೆ ಭೂಮಿಪೂಜೆ ಹಾಗೈ ಕೆ.ಎಸ್.ಐ.ಐ.ಡಿ.ಸಿ ಸಿ.ಎಸ್.ಆರ್ ಅನುದಾನದಲ್ಲಿ ಅಂದಾಜು‌ ರೂ. 60 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶಾಲಾ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಬಬಲೇಶ್ವರ ಮತಕ್ಷೇತ್ರದಲ್ಲಿ ಸಿ‌ಎಸ್ಆರ್ ಅನುದಾನದಡಿ ಈಗಾಗಲೇ 100 ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ನೀಡಲಾಗಿದೆ. ಬಾಕಿ‌ 100 ಸರಕಾರಿ ಶಾಲೆಗಳಿಗೆ ಆರು ತಿಂಗಳೊಳಗೆ ಕ್ರೀಡಾ ಸಲಕರಣೆ ಒದಗಿಸಲಾಗುವುದು. ಅಷ್ಟೇ ಅಲ್ಲ, ಈ ಅನುದಾನದಲ್ಲಿ ಸುಂದರ ಶಾಲಾ ಕೊಠಡಿಗಳ‌‌‌ ನಿರ್ಮಾಣ, ಸ್ಮಾರ್ಟ್ ಕ್ಲಾಸ್, ಶೌಚಾಲಯ ನಿರ್ಮಾಣ, ಕ್ರೀಡಾ ಸಲಕರಣೆಗಳನ್ನು ಒದಗಿಸಲಾಗುತ್ತಿದೆ. ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಸ್ಮಾರ್ಟ್ ಕ್ಲಾಸ್ ಸೌಲಭ್ಯವನ್ನು ಹಂತಹಂತವಾಗಿ 5 ರಿಂದ 7ನೇ ತರಗತಿವರೆಗೆ ವಿಸ್ತರಿಸುವ ಯೋಜನೆಯಿದೆ. ಶಿಕ್ಷಕರೂ ಕೂಡ ವಿದ್ಯಾರ್ಥಿಗಳಿಗೆ ಒಳ್ಳೆಯ ಬೋಧನೆ ಮಾಡಬೇಕು. ಪೋಷಕರು ಲಿಂಗ ತಾರತಮ್ಯವಿಲ್ಲದೇ ತಮ್ಮ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಸಚಿವರು ತಿಳಿಸಿದರು.
ಅಂತರ್ಜಲ ಹೆಚ್ಚಿಸಲು ಕಾಲುವೆಗಳಿಂದ ಹಳ್ಳಗಳಿಗೆ ನೀರು ತುಂಬಿಸಲಾಗುತ್ತಿದೆ. ಹೈನುಗಾರಿಕೆಗೆ ಉತ್ತೇಜ‌ನ ಅಕ್ಷಯಕಲ್ಪ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಪೈಲಟ್ ಯೋಜನೆ ಉತ್ತಮ ಪಲಿತಾಂಶ ನೀಡುತ್ತಿದೆ. ರೈತರ ಆದಾಯ ದುಪ್ಪಟ್ಟು ಮಾಡಲಾಗುತ್ತಿದೆ. ಭವಿಷ್ಯದಲ್ಲಿ ಕೃಷಿ ಮಾಡುವ ಯುವಕರಿಗೆ ಬೇಡಿಕೆ ಹೆಚ್ಚಾಗಲಿದೆ. ಇದಕ್ಕೆ ಪೂರಕವಾಗಿ ಆಹಾರ ಸಂಸ್ಕರಣೆ ಘಟಕಗಳ ಸ್ಥಾಪನೆ, ನಾನಾ ಕಾರ್ಖಾನೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗಿದೆ ಎಂದು ಸಚಿವ ಎಂ. ಬಿ. ಪಾಟೀಲ ತಿಳಿಸಿದರು.
ಇದೇ ವೇಳೆ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಮತ್ತು ಶಾಲೆಗೆ ಭೂಮಿ ದಾನ ಮಾಡಿದ ಮಲ್ಲಪ್ಪ ಶಿವಣ್ಣವರ ಮತ್ತು ಧರೆಪ್ಪ ಶಿವಣ್ಣವರ ಸಹೋದರರನ್ನು ಸಚಿವ ಎಂ. ಬಿ. ಪಾಟೀಲ‌ ಅವರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಮದಾಪುರ ಶ್ರೀ ಅಭಿನವ ಮುರುಗೇಂದ್ರ ಸ್ವಾಮೀಜಿ, ಮುಖಂಡರಾದ ಮುತ್ತಪ್ಪ ಶಿವಣ್ಣವರ, ಕೆ. ಎಚ್. ಮುಂಬಾರಡ್ಡಿ, ಸೋಮಶೇಖರ ಪಾಟೀಲ, ಹಣಮಂತ ಸೊನ್ನದ, ಉಮೇಶ ಮಲ್ಲಣ್ಣವರ, ಬಸವರಾಜ ಪಾಟೀಲ, ಪರಮಾನಂದ ಚಲವಾದಿ, ಬಸವರಾಜ ಬೊಮಾರ, ಹಣಮಂತ ಛಲವಾದಿ, ಎಂ. ಕೆ. ಶಿವಣ್ಣವರ, ಕಲ್ಲಪ್ಪ ಶಿವಣ್ಣವರ, ಲೋಕೋಪಯೋಗಿ ಇಲಾಖೆ ಎಇಇ ಪ್ರಮೋದಕುಮಾರ ಹಟ್ಟಿ, ಎಇ ವಿಜಯ ಹಿರೇಮಠ, ಕೆ.ಆರ್.ಐ.ಡಿ.ಎಲ್ ಎಇಇ ಪ್ರವೀಣ ಮಠಪತಿ, ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ, ಶಿಕ್ಷಣಾಧಿಕಾರಿ ವಸಂತ ಚವ್ಹಾಣ, ಗ್ರಾಮದ ಹಿರಿಯರು, ಮಹಿಳೆಯರು ಯುವಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.