ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಂದೇ ಭಾರತ ರೈಲು ಸಂಚಾರ ವಿಜಯಪುರದಲ್ಲಿ ಸಂಚರಿಸಲು ಜಿಲ್ಲೆಯ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದು, ಗುಲ್ಬರ್ಗಾ, ಹುಬ್ಬಳ್ಳಿ, ಬೆಳಗಾವಿಯಲ್ಲಿ ಸದ್ಯ ರೈಲು ಸಂಚರಿಸುತ್ತಿದೆ. ಆದರೆ ವಸ್ತುಸ್ಥಿತಿ ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕು. ಸೊಲ್ಲಾಪುರ, ಬಿಜಾಪುರ, ಗದಗ, ಹುಬ್ಬಳ್ಳಿಯವರೆಗೆ ರೈಲು ಮಾರ್ಗ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ. ಸದ್ಯ ಓಡುತ್ತಿರುವ ರೈಲಿನ ವೇಗವು ೯೨ ರಿಂದ ೧೦೦ ರವರೆಗೆ ಇರುತ್ತದೆ. ಆದರೆ ವಂದೇ ಭಾರತ ರೈಲಿನ ವೇಗ ೧೧೦ ರಿಂದ ೧೪೦ರ ವೇಗವಾಗಿದೆ. ಆದ ಕಾರಣ ರೈಲಿನ ಮಾರ್ಗ ಕಾಮಗಾರಿಯಲ್ಲಿದ್ದು, ಈ ರೈಲು ಚಾಲನೆಯಾದರೆ ಏನಾದರೂ ಸಮಸ್ಯೆಯಾಗಬಾರದೆಂಬ ಹಿನ್ನೆಲೆ ವಂದೇ ಭಾರತ ರೈಲು ಸಂಚಾರ ಮಾಡುವುದು ವಿಳಂಬವಾಗುತ್ತಿದೆ. ರೈಲು ಮಾರ್ಗ ೨-೩ ತಿಂಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾಮಗಾರಿ ಮುಗಿದ ನಂತರ ಈ ರೈಲು ಸಂಚರಿಸಲು ಚಾಲನೆಯಾಗುತ್ತದೆ. ವಿದ್ಯಾವಂತರು ಇದನ್ನು ಅರಿತುಕೊಳ್ಳಬೇಕು. ಯಾವುದೇ ರೀತಿಯ ಧ್ವಂಧಕ್ಕೆ ಅಂಟಿಕೊಳ್ಳದೇ ರೈಲಿನ ಕುರಿತು ಅಪಪ್ರಚಾರ ಮಾಡಬಾರದು ಎಂದು ಲೋಕಸಭಾ ಸದಸ್ಯರಾದ ರಮೇಶ ಜಿಗಜಿಣಗಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

