Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ

ಇಂಡಿ-ಸೋಲಾಪುರ ವ್ಹಾಯಾ ಲಚ್ಯಾಣ ಬಸ್ಸಿಗೆ ಶಾಸಕರಿಂದ ಚಾಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಗಂಗಾ ಕೊಳೂರಗೆ ಶಾಸಕರಿಂದ ಸನ್ಮಾನ
(ರಾಜ್ಯ ) ಜಿಲ್ಲೆ

ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಗಂಗಾ ಕೊಳೂರಗೆ ಶಾಸಕರಿಂದ ಸನ್ಮಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಪುಟ್ಟ ಮೈಲೇಶ್ವರ ಗ್ರಾಮದಲ್ಲಿ ಹುಟ್ಟಿ ರಾಜ್ಯಮಟ್ಟದಲ್ಲಿ ಸಾಧನೆಯ ಹೆಜ್ಜೆಯನ್ನು ಇಡುತ್ತಾ ಸಾಗಿರುವ ಬ್ರಿಲಿಯಂಟ್ ಶಿಕ್ಷಣ ಸಂಸ್ಥೆಯ ಕಾರ್ಯ ಮೆಚ್ಚುವಂತಹದ್ದಾಗಿದೆ ಗ್ರಾಮೀಣ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಪರಿಚಯಿಸುತ್ತಾ ಸಾಗಿರುವದು ಹೆಮ್ಮೆಯ ಸಂಗತಿ ಎಂದು ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಹೇಳಿದರು.
ತಾಲೂಕಿನ ಮೈಲೇಶ್ವರ ಗ್ರಾಮದ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಗಂಗಾ ಅಶೋಕ ಕೋಳೂರ ಎಸ್‌ಎಸ್‌ಎಲ್‌ಸಿ ಪರಿಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಅವರು ತಮ್ಮ ವತಿಯಿಂದ ಶುಕ್ರವಾರರಂದು ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಗಂಗಾ ಕೋಳೂರಗೆ ಸನ್ಮಾನಿಸಿ ಪ್ರೋತ್ಸಾಹಿಸಿ ಮಾತನಾಡುತ್ತಿದ್ದ ಅವರು, ಈ ಬ್ರಿಲಿಯಂಟ್ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗುತ್ತಿದ್ದು ಇದೀಗ ಗಂಗಾ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ನನ್ನ ದೇವರಹಿಪ್ಪರಗಿ ಮತಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದಾಳೆ ಪ್ರತಿಭಾವಂತ ವಿದ್ಯಾರ್ಥಿಗಳನ್ನಾಗಿ ರೂಪಿಸುವಲ್ಲಿ ಮುಂದು ವರೆದ ಈ ಬ್ರಿಲಿಯಂಟ ಶಿಕ್ಷಣ ಸಂಸ್ಥೆಯ ಕಾರ್ಯ ಮೆಚ್ಚುವಂತಹದ್ದಾಗಿದೆ. ಈ ವಿದ್ಯಾರ್ಥಿಇಯ ಸಾಧನೆಗೆ ಶಿಕ್ಷಕರ ಪರಿಶ್ರಮ ಸಂಸ್ಥೆಯ ಪರಿಶ್ರಮ ಮತ್ತು ಪಾಲಕರ ಸಹಕಾರಕ್ಕೆ ಅಭಿನಂದಿಸುತ್ತೇನೆಂದ ಅವರು, ವಿದ್ಯಾರ್ಥಿಗಳು ಶಿಕ್ಷಕರು ನೀಡುವ ಪಾಠ ಭೋದನೆಗಳನ್ನು ಮನದಟ್ಟು ಮಾಡಿಕೊಳ್ಳುವ ರೀತಿ ಗಂಗಾ ಕೊಳೂರ ವಿದ್ಯಾರ್ಥಿನಿಯನ್ನು ನೋಡಿ ಕಲಿತಕೊಳ್ಳಬೇಕು. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಎಂಥಹ ಸಾಧನೆಯನ್ನಾದರೂ ಮಾಡಬಹುದು ಎಂಬುದಕ್ಕೆ ಈ ವಿದ್ಯಾರ್ಥಿನಿಯೇ ಉತ್ತಮ ಉಧಾಹರಣೆಯಾಗಿದ್ದಾಳೆ ಎಂದರು.
ಪ್ರಾಸ್ತಾವಿಕವಾಗಿ ಜೆಡಿಎಸ್ ತಾಲೂಕಾ ಅಧಕ್ಷ ಮಡು ಸಾಹುಕಾರ ಬಿರಾದಾರ ಅವರು ಮಾತನಾಡಿ, ಶಾಸಕ ರಾಜುಗೌಡ ಪಾಟೀಲ ಅವರು ಶಿಕ್ಷಣ ಹಾಗೂ ಕೃಷಿಗೆ ಹೆಚ್ಚು ಒತ್ತು ನೀಡಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ, ವಿದ್ಯಾರ್ಥಿನಿ ಗಂಗಾ ಕೋಳೂರ ಅವರ ಈ ಸಾಧನೆ ಶಾಸಕರಿಗೆ ಇನ್ನಷ್ಟು ಹುಮ್ಮಸ್ಸು ತಂದು ಕೊಟ್ಟಿದೆ. ಸಾಧನೆ ಎಂಬುದು ಯಾರ ಸ್ವತ್ತು ಅಲ್ಲ ಅದು ಶಿಕ್ಷಣ ಸಂಸ್ಥೆಯಲ್ಲಿ ನೀಡುವ ಪಾಠ ಭೋದನೆಯ ನಿತ್ಯ ಮರು ಅಧ್ಯಯನ ಮಾಡುವದರೊಂದಿಗೆ ಮುನ್ನುಗುತ್ತಾರೋ ಸಾಧನೆ ಅವರನ್ನು ಹುಡುಕಿಕೊಂಡು ಬರಲಿದೆ ಅಂತಹ ಒಳ್ಳೆಯ ಪಾಠ ಭೋದನೆಯ ಮೂಲಕ ಈ ಭಾಗದಲ್ಲಿಯೇ ಹೆಸರುವಾಸಿಯಾಗಿರುವ ಬ್ರಿಲಿಯಂಟ್ ಶಿಕ್ಷಣ ಸಂಸ್ಥೆ ರಾಜ್ಯದಲ್ಲಿಯೇ ಮಾದರಿಯ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದರು.
ಮಾರುತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಬಿ. ಮಡಿವಾಳರ ಮಾತನಾಡಿದರು.
ಇದೇ ಸಂದರ್ಭದಲ್ಲಿ ಶಾಸಕ ರಾಜುಗೌಡ ಪಾಟೀಲ ಇವರಿಗೆ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಬಿ.ನಡುವಿನಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಮಯದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಆರ್ ಬಿ ನಡುವಿನಮನಿ, ತಾಪಂ ಮ್ಮಾಜಿ ಅಧ್ಯಕ್ಷ ರಾಜುಗೌಡ ಕೋಳೂರ, ವೀರೇಶಗೌಡ ಪಾಟೀಲ, ಉಮೇಶ ಮೈಲೇಶ್ವರ, ಅಪುö್ಪ ಕುಳಗೇರಿ, ಪಿಡಿಒ ಪ್ರಭು ಚೆನ್ನೂರ, ಸಂಸ್ಥೆಯ ನಿರ್ದೇಶಕರಾದ ಎಸ್.ಎಚ್.ಪಾಟೀಲ, ಶ್ರೀಮತಿ ಲೀಲಾದೇವಿ ಎಂ. ಬಿರಾದಾರ, ಶ್ರೀಮತಿ ನಿರ್ಮಲಾ ಎಸ್ ಗಡಗಿ, ಡಾ.ಶಶಿಧರ ಬಿರಾದಾರ, ಕನ್ನಡ ಮಾಧ್ಯಮ ಮುಖ್ಯೋಪಾಧ್ಯಾಯ ಡಾ.ವಿನಾಯಕ ಪಟಗಾರ, ಆಂಗ್ಲ ಮಾಧ್ಯಮ ಮುಖ್ಯೋಪಾಧ್ಯಾಯ ಬಿ.ಜಿ.ಕರಕಳ್ಳಿ, ಶಿಕ್ಷಕ ವರ್ಗ, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.
ಶಿಕ್ಷಕ ಸಿದ್ದು ಕರಡಿ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ

ಇಂಡಿ-ಸೋಲಾಪುರ ವ್ಹಾಯಾ ಲಚ್ಯಾಣ ಬಸ್ಸಿಗೆ ಶಾಸಕರಿಂದ ಚಾಲನೆ

ಕುಡಿಯುವ ನೀರಿಗೆ ಕ್ರಮ ಕೈಕೊಳ್ಳಿ :ಶಾಸಕ ಯಶವಂತರಾಯಗೌಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಇಂಡಿ-ಸೋಲಾಪುರ ವ್ಹಾಯಾ ಲಚ್ಯಾಣ ಬಸ್ಸಿಗೆ ಶಾಸಕರಿಂದ ಚಾಲನೆ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿಗೆ ಕ್ರಮ ಕೈಕೊಳ್ಳಿ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಮಗ್ರ ಬೆಳವಣಿಗೆಗೆ ಕೈಜೋಡಿಸಿ :ಡಿಸಿ ಡಾ.ಆನಂದ.ಕೆ
    In (ರಾಜ್ಯ ) ಜಿಲ್ಲೆ
  • ಹೆಚ್ಚಿನ ಬೆಲೆಗೆ ರಸಗೊಬ್ಬರಮಾರಾಟ :ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಗಂಗಾ ಕೊಳೂರಗೆ ಶಾಸಕರಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಮತೆ, ಮಮಕಾರದ ಮಾತೃ ಸ್ವರೂಪಿ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಪಡಗಾನೂರದಲ್ಲಿ ದ್ಯಾಮವ್ವದೇವಿ ಜಾತ್ರೆ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.