ಉದಯರಶ್ಮಿ ದಿನಪತ್ರಿಕೆ
ತಾಳಿಕೋಟೆ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರಂಭವಾಗುತ್ತಿದ್ದು ಈಗಲೇ ರಸಗೊಬ್ಬರ ಲಭ್ಯವಿಲ್ಲವೆಂದು ಖಾಸಗಿ ಮಾರಾಟ ಮಳಿಗೆಗಳಲ್ಲಿ ನಾಮ ಫಲಕ ಹಾಕಿ ಸರ್ಕಾರ ನಿಗಧಿ ಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆ ರಸಗೊಬ್ಬರ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದ್ದು ಕೂಡಲೇ ಕಠಿಣ ಕ್ರಮ ಜರುಗಿಸಬೇಕೆಂದು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಶುಕ್ರವಾರರಂದು ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಈ ಸಮಯದಲ್ಲಿ ಸಂಘಟನೆಯ ಜಿಲ್ಲಾ ಬಸವರಾಜ ಸಿಂಗನಹಳ್ಳಿ ಮಾತನಾಡಿ, ರೈತರು ಬಿತ್ತನೆಗಾಗಿ ಬೀಜ ಹಾಗೂ ರಸಗೊಬ್ಬರ ಖರಿದಿಸಲು ರೈತ ಸಂಪರ್ಕ ಕೇಂದ್ರಗಳಿಗೆ ಹಾಗೂ ಖಾಸಗಿ ಮಾರಾಟ ಮಳಿಗೆಗಳಿಗೆ ತೆರಳುತ್ತಿದ್ದಾರೆ ರಸ ಗೊಬ್ಬರ ಸ್ಟಾಕ್ ಇಲ್ಲಾವೆಂಬ ನಾಮಫಲಕ ಏಷ್ಟು ಸರಿ ಎಂದು ಪ್ರಶ್ನೀಸಿದ ಅವರು, ಇದರಿಂದ ಬಡ ಮತ್ತು ಮಧ್ಯಮ ವರ್ಗದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದು ಕೃಷಿ ಚಟುವಟಿಕೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ ಕೂಡಲೇ ಸರ್ಕಾರವು ಎಚ್ಚೆತ್ತುಕೊಳ್ಳಬೇಕಾಗಿದೆ. ಜಿಲ್ಲೆಯ ಎಲ್ಲ ರೈತ ಸಂಪರ್ಕ ಕೇಂದ್ರಗಳ ಮುಂದೆ ಕಡ್ಡಾಯವಾಗಿ ಬೀಜ ರಸಗೊಬ್ಬರಗಳ ದರಪಟ್ಟಿ ಮತ್ತು ಲಭ್ಯವಿರುವ ಸ್ಟಾಕ್ ವಿವರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವಂತೆ ಕ್ರಮ ವಹಿಸಬೇಕು. ಹಾಗೆಯೇ ಹತ್ತಿ ಬೀಜ ಸೇರಿದಂತೆ ಇತರೆ ಎಲ್ಲಾ ಬೀಜಗಳ ಅಧಿಕೃತ ಮಾರಾಟದ ದರಪಟ್ಟಿಯನ್ನು ಪ್ರದರ್ಶಿಸಿ ಸರ್ಕಾರ ನಿಗಧಿಪಡಿಸಿದ ಬೆಲೆಯಲ್ಲಿಯೇ ಮಾರಾಟವಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕೆಂದು ಒತ್ತಾಯಿಸಿದ ಅವರು, ಸರ್ಕಾರದ ನಿಯಮ ಉಲ್ಲಂಘಿಸಿ ಹೆಚ್ಚಿನ ಬೆಲೆ ರಸಗೊಬ್ಬರ ಮಾರಾಟ ಮಾಡುವ ಮಳಿಗೆಗಳ ಮೇಲೆ ವ್ಯಾಪಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.
ಈ ಸಮಯದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷ ಬಾಪುಗೌಡ ಪಾಟೀಲ, ಸಹದೇವಪ್ಪ ದೊಡಮನಿ, ಹಣಮಂತ ಗುತ್ತೇದಾರ, ರುದ್ರೇಶ ಮುರಾಳ, ಸುರೇಶ ರಾಠೊಡ, ನಿಂಗನಗೌಡ ಬಸರೆಡ್ಡಿ, ಹಣಮಂತ ತಳ್ಳೋಳ್ಳಿ, ಸಂತೋಷ ಹೆಗರಡ್ಡಿ, ಮೊದಲಾದವರು ಇದ್ದರು.

