ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಡಿ ಕೆ ಶಿವಕುಮಾರ್ ಅವರೇ ಎಸ್ ಐ ಆರ್ ಪ್ರಕ್ರಿಯೆ ನಡೆಸುವುದರಿಂದ ರಾಜ್ಯದ ಜನತೆಗೆ ಯಾವುದೇ ತೊಂದರೆ ಇಲ್ಲ. ಆದರೂ ಕೂಡ ತಾವು ಕಾಂಗ್ರೆಸ್ ಪಕ್ಷದ ವತಿಯಿಂದ ಜನತೆಗೆ ತಪ್ಪು ಸಂದೇಶ ನೀಡುತ್ತಿದ್ದೀರಿ ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಕುಟುಕಿದ್ದಾರೆ.
ಮಂಗಳವಾರ ಈ ಕುರಿತು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ ಅವರು, ಇತ್ತೀಚೆಗೆ ನಡೆದ 5 ರಾಜ್ಯದ ಚುನಾವಣೆಗಳಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ನಡೆಸಿತ್ತು, ಅದರಲ್ಲಿ ಕೇರಳದಲ್ಲಿ ಕಾಂಗ್ರೆಸ್ ಹಾಗೂ ತಮಿಳುನಾಡಿನಲ್ಲಿ ಟಿ ವಿ ಕೆ ವಿಜಯ್ ಅವರ ಪಕ್ಷ ಗೆದ್ದಿಲ್ಲವೇ? ಇದು ಕೇವಲ ಮತದಾನ ಪ್ರಕ್ರಿಯೆಗೆ ಮಾತ್ರ ಸಂಬಂಧಿಸಿದ್ದು. ಸರಕಾರಿ ಸೌಲಭ್ಯಗಳು, ಉಚಿತ ಯೋಜನೆಗಳು, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಇತರೆ ಯಾವುದಕ್ಕೂ ಇದರಿಂದ ತೊಂದರೆ ಇಲ್ಲ, ಕಾರಣ ಜನತೆಗೆ ತಪ್ಪು ಮಾಹಿತಿ ನೀಡಬೇಡಿ ಎಂದು ರಾಘವ್ ತಿಳಿಸಿದ್ದಾರೆ.

