ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸೃಜನಾತ್ಮಕ ಬೋಧನೆ ಮತ್ತು ಕಲಿಕಾ ಕಾರ್ಯತಂತ್ರಗಳು ಕುರಿತು ಒಂದು ದಿನದ ಕಾರ್ಯಾಗಾರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ನಡೆಯಿತು.
ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(ಸಿಬಿಎಸ್ಇ) ಶಾಲೆ ಮತ್ತು ಶ್ರೀ ಬಿ. ಎಂ ಪಾಟೀಲ್ ಪಬ್ಲಿಕ್(ಐಸಿಎಸ್ಇ) ಶಾಲೆಯ ಶಿಕ್ಷಕರಿಗಾಗಿ ಆಯೋಜಿಸಲಾದ ಈ ಕಾರ್ಯಾಗಾರವನ್ನು ಶೈಕ್ಷಣಿಕ ಸಂಯೋಜಕಿ ದೀಪಾ ಜಂಬೂರೆ ಉದ್ಘಾಟಿಸಿದರು.
ಜಾಗೃತ ಮನಸ್ಥಿತಿ ಮತ್ತು ಭೋದನೆ ತಂತ್ರಗಳು ವಿಷಯ ಕುರಿತು ವಿಷಯದ ಕುರಿತು ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ (ಸಿಬಿಎಸ್) ಶಾಲೆಯ ಉಪಪ್ರಾಚಾರ್ಯೆ ವಸುಧಾ ನಾರ್ವೇಕರ ಉಪನ್ಯಾಸ ನೀಡಿದರು.
ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ (ಐಸಿಎಸ್ಇ) ಶಾಲೆಯ ಪ್ರಾಚಾರ್ಯ ವಿಕ್ರಮ ನಾರ್ವೇಕರ ಅವರು ಸೃಜನಾತ್ಮಕ ಬೋಧನೆ ಮತ್ತು ಕಲಿಕೆಯ ಕಾರ್ಯತಂತ್ರಗಳು ವಿಷಯದ ಕುರಿತು ಮಾತನಾಡಿ ಮನಸ್ಸಿನ ಏಕಾಗ್ರತೆ, ಶಾಂತ ಮನೋಭಾವ ಹಾಗೂ ವಿದ್ಯಾರ್ಥಿಗಳೊಂದಿಗೆ ಉತ್ತಮ ಸಂವಹನ ನಡೆಸುವ ವಿಧಾನಗಳ ಕುರಿತು ಶಿಕ್ಷಕರಿಗೆ ತರಬೇತಿ ನೀಡಿದರು.
ಈ ತರಬೇತಿಯಲ್ಲಿ ನಾನಾ ಚಟುವಟಿಕೆಗಳು, ಗುಂಪು ಚರ್ಚೆಗಳು ಹಾಗೂ ಪ್ರಾಯೋಗಿಕ ಅಭ್ಯಾಸಗಳನ್ನು ಆಯೋಜಿಸಲಾಗಿತ್ತು. ನಾನಾ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಯಾವ ರೀತಿ ಕಲಿಕಾ ಆಸಕ್ತಿಯನ್ನು ಉಂಟು ಮಾಡಬಹುದು ಎಂಬುದನ್ನು ಅವರು ವಿವರಿಸಿದರು.
ಆಂಗ್ಲ ಭಾಷಾ ಶಿಕ್ಷಕ ಯೋಗಿರಾಜ ಹಳಕಟ್ಟಿ ಸ್ವಾಗತಿಸಿದರು. ಮೀರಾ ಮೋಕಾಶಿ ವಂದಿಸಿದರು.

