ಸಿಂದಗಿ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸಿಂದಗಿ ತಾಲೂಕಾಧ್ಯಕ್ಷರನ್ನಾಗಿ ಜಿಲಾನಿ ಮುಲ್ಲಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಜಗದೀಶ ಸೂರ್ಯವಂಶಿ ತಿಳಿಸಿದ್ದಾರೆ.
ಇವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ತಾಯಿ ಶ್ರೀ ಭುವನೇಶ್ವರಿ ಹಾಗೂ ಈ ನಾಡಿನ ಸೇವೆಯನ್ನು ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ.ಕೃಷ್ಣೇಗೌಡ ಅವರ ಆದೇಶದ ಮೇರೆಗೆ ಜಿಲಾನಿ ಮುಲ್ಲಾ ಅವರನ್ನು ತಾಲೂಕಾಧ್ಯಕ್ಷರನ್ನಾಗಿ ಜಿಲ್ಲಾಧ್ಯಕ್ಷ ಜಗದೀಶ ಸೂರ್ಯವಂಶಿ ಆದೇಶ ಹೊರಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

