Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಐಟಿಐ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜಿಲ್ಲಾಧ್ಯಕ್ಷರಾಗಿ ಲಮಾಣಿ, ಪ್ರ.ಕಾರ್ಯದರ್ಶಿಯಾಗಿ ಕೊಣದಿ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅತ್ಯಾಧುನಿಕ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
(ರಾಜ್ಯ ) ಜಿಲ್ಲೆ

ಅತ್ಯಾಧುನಿಕ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಯಶಸ್ವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ.. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಿವಿ, ಮೂಗು ಹಾಗೂ ಗಂಟಲು ವಿಭಾಗದಲ್ಲಿ ಶುಕ್ರವಾರ ಅತ್ಯಾಧುನಿಕ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.
ಸುಮಾರು ಒಂದು ವರ್ಷ ಏಳು ತಿಂಗಳ ಜನ್ಮಜಾತ ಕಿವುಡುತನ ಹೊಂದಿರುವ ಮಗುವಿಗೆ ಅತ್ಯಾಧುನಿಕ ನೆಕ್ಸಾ(NEXA 1022) ಕಾಕ್ಲಿಯರ್ ಇಂಪ್ಲಾಂಟ್ ಉಪಕರಣವನ್ನು ಒಳಕಿವಿಯ ಭಾಗದಲ್ಲಿ ಅಳವಡಿಸಲಾಯಿತು. ಈ ಉಪಕರಣವು ಮಾತನಾಡುವ ಧ್ವನಿಗಳನ್ನು ವಿದ್ಯುತ್ ಪ್ರೇರಣೆಯಾಗಿ ಪರಿವರ್ತಿಸಿ, ಕಿವಿಯ ನರಗಳನ್ನು ಉತ್ತೇಜಿಸುವ ಮೂಲಕ ಮೆದುಳಿಗೆ ಸಂದೇಶಗಳನ್ನು ಕಳುಹಿಸಿ, ಪದಗಳನ್ನು ಸ್ಪಷ್ಟವಾಗಿ ಕೇಳಿಸಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಶಸ್ತ್ರಚಿಕಿತ್ಸೆಯಲ್ಲಿ ಬಳಸಲಾದ ಸ್ಮಾರ್ಟ್ ನಾವ್(SMART NAV) ತಂತ್ರಜ್ಞಾನವು ಮೊಬೈಲ್‌ ಜೊತೆ ನೇರ ಸಂಪರ್ಕ ಹೊಂದಿದ್ದು, ಡೈರೆಕ್ಟ್ ಸ್ಟ್ರೀಮಿಂಗ್ ಮತ್ತು ಟ್ರ್ಯಾಕಿಂಗ್ ಸೌಲಭ್ಯವನ್ನು ಒದಗಿಸುತ್ತದೆ. ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಉತ್ತರ ಕರ್ನಾಟಕ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ನಡೆದಿರುವುದು ವಿಶೇಷವಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಅರುಣ ಚಂ. ಇನಾಮದಾರ, ಕಳೆದ ಎರಡು ವರ್ಷಗಳಿಂದ ಆಸ್ಪತ್ರೆಯಲ್ಲಿ ಈ ರೀತಿಯ ಚಿಕಿತ್ಸೆಗಳು ನಡೆಯುತ್ತಿದ್ದು, ಚಿಕಿತ್ಸೆ ಪಡೆದ ಮಕ್ಕಳು ವಾಕ್ ಮತ್ತು ಶ್ರವಣ ತಜ್ಞರಿಂದ ತರಬೇತಿ ಪಡೆದು ಸಾಮಾನ್ಯ ಮಕ್ಕಳಂತೆ ಮಾತನಾಡಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದರು.
ವೈದ್ಯಕೀಯ ಮಹವಿದ್ಯಾಲಯದ ಪ್ರಾಚಾರ್ಯೆ ಮತ್ತು ತಜ್ಞವೈದ್ಯೆ ಡಾ. ತೇಜಸ್ವಿನಿ ವಲ್ಲಭ ಮಾತನಾಡಿ, ಜನ್ಮಜಾತ ಕಿವುಡುತನ ಹೊಂದಿರುವ ಮಕ್ಕಳಿಗೆ ಎರಡು ವರ್ಷದೊಳಗೆ ಚಿಕಿತ್ಸೆ ನೀಡಿದರೆ ಅವರು ಇತರ ಮಕ್ಕಳಂತೆ ಶಿಕ್ಷಣ ಪಡೆದು ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತoz. ಮೂರು ವರ್ಷಗಳ ನಂತರ ಚಿಕಿತ್ಸೆ ಹೆಚ್ಚು ಪರಿಣಾಮಕಾರಿಯಾಗುವುದಿಲ್ಲ ಎಂದು ಹೇಳಿದರು.
ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗಳ ಸಂಯೋಜಕಿ ಡಾ. ಎಚ್. ಟಿ. ಲತಾದೇವಿ ಮಾತನಾಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಎಸ್. ಎನ್. ಬೆಂಟೂರ, ಆಸ್ಪತ್ರೆಯ ವೈದ್ಯಕೀಯ ಉಪಅಧೀಕ್ಷಕ, ಡಾ. ರವಿಕುಮಾರ ಬಿರಾದಾರ ಸೇರಿದಂತೆ ನಾನಾ ವೈದ್ಯರು ಮತ್ತು ಮಗುವಿನ ಪೋಷಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಐಟಿಐ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜಿಲ್ಲಾಧ್ಯಕ್ಷರಾಗಿ ಲಮಾಣಿ, ಪ್ರ.ಕಾರ್ಯದರ್ಶಿಯಾಗಿ ಕೊಣದಿ ಆಯ್ಕೆ

ವಿಜಯಪುರದಲ್ಲಿ ಅಬಕಾರಿ ದಾಳಿ: ಕಳ್ಳಭಟ್ಟಿ ಸರಾಯಿ ಜಪ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಐಟಿಐ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧ್ಯಕ್ಷರಾಗಿ ಲಮಾಣಿ, ಪ್ರ.ಕಾರ್ಯದರ್ಶಿಯಾಗಿ ಕೊಣದಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಅಬಕಾರಿ ದಾಳಿ: ಕಳ್ಳಭಟ್ಟಿ ಸರಾಯಿ ಜಪ್ತಿ
    In (ರಾಜ್ಯ ) ಜಿಲ್ಲೆ
  • ಅತ್ಯಾಧುನಿಕ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 31, 2026
    In ದಿನಪತ್ರಿಕೆ
  • ಶ್ವೇತ ರಕ್ತಕಣ ಪ್ರತಿಜನಕ ಹೊಂದಾಣಿಕೆ ಪರೀಕ್ಷೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವೈದ್ಯಕೀಯ ಅಧ್ಯಯನಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ
    In (ರಾಜ್ಯ ) ಜಿಲ್ಲೆ
  • ಕ್ಯಾಂಪಸ್ ಸಂದರ್ಶನದಲ್ಲಿ 81 ಜನ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.