Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೈಕ್‌ನಿಂದ ಬಿದ್ದು ಸ್ಥಳದಲ್ಲಿಯೆ ಮಹಿಳೆ ಸಾವು!
(ರಾಜ್ಯ ) ಜಿಲ್ಲೆ

ಬೈಕ್‌ನಿಂದ ಬಿದ್ದು ಸ್ಥಳದಲ್ಲಿಯೆ ಮಹಿಳೆ ಸಾವು!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅವೈಜ್ಞಾನಿಕ ವೇಗ ನಿಯಂತ್ರಕದಿಂದ ಅಪಘಾತ | ಸಾರ್ವಜನಿಕರ ಆಕ್ರೋಶ

ಉದಯರಶ್ಮಿ ದಿನಪತ್ರಿಕೆ

ಚಡಚಣ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಬರಡೋಲ ಗ್ರಾಮದ ಸಮೀಪ ಅವೈಜ್ಞಾನಿಕವಾಗಿ ನಿರ್ಮಿಸಲಾಗಿರುವ ರಸ್ತೆ ವೇಗ ನಿಯಂತ್ರಕ (ಹಂಪ್) ಕಾರಣದಿಂದ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಮಹಾರಾಷ್ಟ್ರ ರಾಜ್ಯದ ಇಸ್ಲಾಂಪುರ ನಿವಾಸಿ ಮುಮ್ತಾಜ್ ಅಬ್ದುಲ್ ಶೇಖ್ (55) ಮೃತಪಟ್ಟ ಮಹಿಳೆ. ಅವರು ತಮ್ಮ ಪತಿ ಅಬ್ದುಲ್ ಶೇಖ್ ಅವರೊಂದಿಗೆ ಮೈನಳ್ಳಿ ಗ್ರಾಮದಿಂದ ಬೈಕ್‌ನಲ್ಲಿ ಇಸ್ಲಾಂಪುರಕ್ಕೆ ತೆರಳುತ್ತಿದ್ದ ವೇಳೆ ಬರಡೋಲ ಗ್ರಾಮದ ಬಳಿ ರಸ್ತೆ ಮಧ್ಯೆ ನಿರ್ಮಿಸಲಾಗಿದ್ದ ಅವೈಜ್ಞಾನಿಕ ವೇಗ ನಿಯಂತ್ರಕದಿಂದಾಗಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ಪರಿಣಾಮ ಮುಮ್ತಾಜ್ ಅವರ ತಲೆಗೆ ಪೆಟ್ಟು ಬಿದ್ದ ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತೆಯ ಪತಿ ಅಬ್ದುಲ್ ಶೇಖ್ ಮಾತನಾಡಿ, “ರಸ್ತೆಯ ಮೇಲಿನ ವೇಗ ನಿಯಂತ್ರಕಕ್ಕೆ ಯಾವುದೇ ಮುನ್ನೆಚ್ಚರಿಕೆ ಫಲಕ, ಬಣ್ಣದ ಗುರುತು ಅಥವಾ ಸೂಚನಾ ಫಲಕದ ವ್ಯವಸ್ಥೆ ಕೂಡ ಮಾಡಿಲ್ಲ್ಲ. ಏಕಾಏಕಿ ಹಂಪ್ ಎದುರಾದ ಕಾರಣ ಬೈಕ್ ಸಮತೋಲನ ಕಳೆದುಕೊಂಡು ಅಪಘಾತ ಸಂಭವಿಸಿದೆ. ಈ ದುರಂತಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ರಸ್ತೆ ಕಾಮಗಾರಿ ಮಾಡಿದ ಕಾಂಟ್ರ್ಯಾಕ್ಟರ ನೇರ ಹೊಣೆ” ಎಂದು ಆರೋಪಿಸಿದರು.
ಸ್ಥಳೀಯರ ಪ್ರಕಾರ, ಕೆಲವು ತಿಂಗಳ ಹಿಂದೆ ನಿರ್ಮಿಸಲಾದ ಈ ವೇಗ ನಿಯಂತ್ರಕ ಅವೈಜ್ಞಾನಿಕವಾಗಿದ್ದು, ಈಗಾಗಲೇ ಇದೇ ಸ್ಥಳದಲ್ಲಿ 15ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಬರಡೋಲ ಗ್ರಾಮದ ಸುಮಾರು ಸ್ಥಳಗಳಲ್ಲಿ ದೊಡ್ಡ ದೊಡ್ಡ ರಸ್ತೆ ವೇಗ ನಿಯಂತ್ರಕ (ಹಂಪ್) ಅಳವಡಿಸಿದ್ದು ಅವನ್ನು ವೈಜ್ಞಾನಿಕವಾಗಿ ಅಳವಡಿಸುವಂತೆ ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಪರಿಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಪಘಾತದ ನಂತರ ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಮರಣೋತ್ತರ ಪರೀಕ್ಷೆಗೆ ಗಾಯಾಳುವನ್ನು ಸಮುದಾಯ ಆರೋಗ್ಯ ಕೇಂದ್ರ ಚಡಚಣಕ್ಕೆ ಸಾಗಿಸಲಾಯಿತು.
ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದೆ ನಿರ್ಮಿಸಿರುವ ವೇಗ ನಿಯಂತ್ರಕಗಳನ್ನು ತಕ್ಷಣ ತೆರವುಗೊಳಿಸಿ, ಮತ್ತು ಅವಶ್ಯಕತೆ ಇದ್ದಲ್ಲಿ ಮಾತ್ರ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಸುರಕ್ಷತಾ (ಹಂಪ)ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಘಟನೆ ರಸ್ತೆ ಕಾಮಗಾರಿಗಳಲ್ಲಿನ ನಿರ್ಲಕ್ಷ ಹಾಗೂ ಅವೈಜ್ಞಾನಿಕ ನಿರ್ಮಾಣಗಳು ಸಾರ್ವಜನಿಕರ ಜೀವಕ್ಕೆ ಹೇಗೆ ಅಪಾಯವಾಗುತ್ತವೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಇಂತಹ ದುರ್ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ
ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026
    In ದಿನಪತ್ರಿಕೆ
  • ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ
    In ವಿಶೇಷ ಲೇಖನ
  • ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ
    In ವಿಶೇಷ ಲೇಖನ
  • ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ
    In (ರಾಜ್ಯ ) ಜಿಲ್ಲೆ
  • ತಾಯಿ-ತಂದೆ ಋಣ ತೀರಿಸುವುದು ಅಸಾಧ್ಯ :ಪ್ರೊ.ಕಡ್ಡಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಸೇವನೆ ಜೀವಕ್ಕೆ ಆಪತ್ತು :ಡಾ.ತರನ್ನುಮ್
    In (ರಾಜ್ಯ ) ಜಿಲ್ಲೆ
  • ಯುವಕರು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಿ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೂತನ ಡಿಡಿಪಿಯು ಉಪ್ಪಾರ ರಿಗೆ ಸನ್ಮಾನ
    In Uncategorized
  • ೬೦ ದಿನಗಳ ಬೇಸಿಗೆ ತರಬೇತಿ ಶಿಬಿರ ಮುಕ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.