Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ
(ರಾಜ್ಯ ) ಜಿಲ್ಲೆ

ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಾದಗಿರಿಯಲ್ಲಿ ಮಹಿಳೆಯರೇ ನಿರ್ವಹಿಸುತ್ತಿರುವ ನಬಾರ್ಡ್ ನೆರವಿನ ಕಡಲೆಕಾಯಿ ಮೌಲ್ಯವರ್ಧನೆ ಘಟಕ ಉದ್ಘಾಟಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳವಳ

ಯಾದಗಿರಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಕರ್ನಾಟಕದ ಯಾದಗಿರಿ ಜಿಲ್ಲೆಯ ಕಳಪೆ ಸಾಮಾಜಿಕ-ಆರ್ಥಿಕ ಸೂಚ್ಯಂಕಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಮಹಿಳಾ ಸಾಕ್ಷರತಾ ಪ್ರಮಾಣ ಕಡಿಮೆಯಾಗಿರುವುದು, ಬಹು ಆಯಾಮದ ಬಡತನದ ಪ್ರಮಾಣ ಹೆಚ್ಚಿರುವುದು, ರಾಜ್ಯದ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕೊನೆಯ ಸ್ಥಾನದಲ್ಲಿರುವುದು ಹಾಗೂ ತಲಾ ಆದಾಯ ಅತಿ ಕಡಿಮೆ ಇರುವುದು ಆತಂಕಕಾರಿ ಸಂಗತಿಗಳಾಗಿವೆ ಎಂದು ಹೇಳಿದರು.
ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗಿರುವ ಸೀತಾರಾಮನ್, ಯಾದಗಿರಿಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತದಿಂದ ತುರ್ತು ಮತ್ತು ವಿಶೇಷ ಗಮನದ ಅಗತ್ಯವಿದೆ ಎಂದು ಒತ್ತಿ ಹೇಳಿದರು.
ಯಾದಗಿರಿಯಲ್ಲಿ ಸಂಪೂರ್ಣವಾಗಿ ಮಹಿಳೆಯರೇ ನಿರ್ವಹಿಸುತ್ತಿರುವ ನಬಾರ್ಡ್ ನೆರವಿನ ಕಡಲೆಕಾಯಿ ಮೌಲ್ಯವರ್ಧನೆ ಘಟಕವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ‘ಯಾದಗಿರಿ ಹಾಗೂ ಪಕ್ಕದ ರಾಯಚೂರು ಜಿಲ್ಲೆಗಳನ್ನು “ಆಕಾಂಕ್ಷಿ ಜಿಲ್ಲೆಗಳು” (Aspirational Districts) ಎಂದು ಗುರುತಿಸಲಾಗಿದೆ. ಏಕೆಂದರೆ ಅಭಿವೃದ್ಧಿಯ ಫಲಗಳು ರಾಜ್ಯದ ಇತರ ಭಾಗಗಳಷ್ಟು ವೇಗವಾಗಿ ಈ ಪ್ರದೇಶಗಳಿಗೆ ತಲುಪಿಲ್ಲ. ಈ ಅಂತರವನ್ನು ನಿವಾರಿಸಲು ಎಲ್ಲ ಹಂತದ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು.
ಕಡಲೆಕಾಯಿ ಸಂಸ್ಕರಣಾ ಘಟಕ ಸ್ಥಾಪನೆಯ ಉದ್ದೇಶವನ್ನು ವಿವರಿಸಿದ ಅವರು, ಯಾದಗಿರಿಯಲ್ಲಿ ವರ್ಷಕ್ಕೆ ಸುಮಾರು 22,500 ಮೆಟ್ರಿಕ್ ಟನ್ ಕಡಲೆಕಾಯಿ ಉತ್ಪಾದನೆಯಾಗುತ್ತಿದ್ದು, ಮೌಲ್ಯವರ್ಧನೆಗೆ ಉತ್ತಮ ಅವಕಾಶಗಳಿವೆ. ಈಗ ನಾವು ಕಡಲೆಕಾಯಿ ಹುರಿಯುವುದು, ಎಣ್ಣೆ ಉತ್ಪಾದಿಸುವುದು ಹಾಗೂ ಪೀನಟ್ ಬಟರ್ ಸೇರಿದಂತೆ ವಿವಿಧ ಉತ್ಪನ್ನಗಳನ್ನು ತಯಾರಿಸಬಲ್ಲ ಘಟಕವನ್ನು ಸ್ಥಾಪಿಸಿದ್ದೇವೆ. ಈ ಘಟಕವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ಪೆದ್ದಪಲ್ಲಿ ಮಹಿಳಾ ರೈತರ ಉತ್ಪಾದಕರ ಕಂಪನಿ ಲಿಮಿಟೆಡ್‌ನ್ನು ಅವರು ಶ್ಲಾಘಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸ್ಥಾಪಿಸಲಾದ ಏಳು ಮೌಲ್ಯವರ್ಧನೆ ಘಟಕಗಳಲ್ಲಿ, ಯಾದಗಿರಿ ಘಟಕವನ್ನು ಮಾತ್ರ ಸಂಪೂರ್ಣವಾಗಿ ಮಹಿಳೆಯರೇ ನಿರ್ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ಆದರೆ, ಘಟಕವನ್ನು ನಡೆಸುತ್ತಿರುವ ಮಹಿಳೆಯರು ರೈತರಿಂದ ನೇರವಾಗಿ ಕಡಲೆಕಾಯಿ ಖರೀದಿಸಲು ಸಮಸ್ಯೆ ಎದುರಿಸುತ್ತಿದ್ದಾರೆ ಎಂಬ ಮಾಹಿತಿ ತಮಗೆ ಲಭ್ಯವಾಗಿದೆ. ಮಾರುಕಟ್ಟೆ ಮತ್ತು ಮಂಡಿಗಳಿಂದ ಖರೀದಿಸಲು ಮಹಿಳೆಯರು ಪ್ರಯತ್ನಿಸುತ್ತಿದ್ದು, ಈ ಉದ್ದೇಶಕ್ಕಾಗಿ ನಬಾರ್ಡ್ ವಿಶೇಷ ಅಧಿಕಾರಿಯನ್ನೂ ನೇಮಿಸಿದೆ. ಆದರೂ ರೈತರಿಂದ ನೇರವಾಗಿ ಖರೀದಿಸುವಲ್ಲಿ ಮಧ್ಯವರ್ತಿಗಳ ಅಡ್ಡಿ ಎದುರಾಗುತ್ತಿದೆ. ಕಚ್ಚಾ ವಸ್ತುಗಳ ಖರೀದಿಯಲ್ಲಿ ಏಕೆ ಸಮಸ್ಯೆ ಎದುರಾಗುತ್ತಿದೆ ಎಂದು ಸ್ಥಳೀಯ ಆಡಳಿತವನ್ನು ಪ್ರಶ್ನಿಸಿದ ಅವರು, ಈ ಬಗ್ಗೆ ಹೊಣೆಗಾರಿಕೆ ನಿಭಾಯಿಸಬೇಕು ಎಂದು ಸೂಚಿಸಿದರು.

ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ

ಅಂತೆಯೇ ಮೂಲಸೌಕರ್ಯಗಳ ಕುರಿತು ಮಾತನಾಡಿದ ಕೇಂದ್ರ ವಿತ್ತ ಸಚಿವೆ ಅವರು, ಜಿಲ್ಲೆಯಲ್ಲಿ ಶಾಲೆಗಳಿದ್ದರೂ ಶಿಕ್ಷಕರಿಲ್ಲ, ಶೌಚಾಲಯಗಳ ಕೊರತೆ ಇದೆ ಮತ್ತು ಸಾಕಷ್ಟು ತರಗತಿ ಕೊಠಡಿಗಳೂ ಇಲ್ಲ. ಜಿಲ್ಲೆಯ ಬಡತನದ ಪರಿಸ್ಥಿತಿಯನ್ನೂ ಅವರು ಉಲ್ಲೇಖಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಬಡತನವನ್ನು ಬಹುಆಯಾಮದ ಮಾನದಂಡಗಳ ಆಧಾರದ ಮೇಲೆ ಜಿಲ್ಲಾವಾರು ಅಳೆಯಲು ಆರಂಭಿಸಲಾಯಿತು. ವಿವಿಧ ಯೋಜನೆಗಳ ಮೂಲಕ ದೇಶದಾದ್ಯಂತ ಸುಮಾರು 25 ಕೋಟಿ ಜನರನ್ನು ಬಹುಆಯಾಮದ ಬಡತನದಿಂದ ಹೊರತರಲಾಗಿದೆ. ಆದರೂ ಈ ಎಲ್ಲ ಪ್ರಯತ್ನಗಳ ನಡುವೆಯೂ ಯಾದಗಿರಿ ಇನ್ನೂ ದೇಶದ ಅತ್ಯಂತ ಬಡ ಜಿಲ್ಲೆಗಳಲ್ಲಿ ಒಂದಾಗಿ ಉಳಿದಿದೆ ಎಂದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.