ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ತಾಲೂಕಾ ಛಾಯಾಚಿತ್ರ ಗ್ರಾಹಕರ ಸಂಘ (ರಿ), ಜಮಖಂಡಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಹುಲ್ಯಾಳ ಗ್ರಾಮದ ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವು ರೇಣುಕಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು, ಯೋಗಾಶ್ರಮ ಹುಲ್ಯಾಳ ಅವರ ಸಾನಿಧ್ಯದಲ್ಲಿ ಹಾಗೂ ಹರ್ಷಾನಂದ ಮಹಾಸ್ವಾಮಿಗಳು, ಗುರು ದೇವಾಶ್ರಮ ಹುಲ್ಯಾಳ ಅವರ ಸಾನಿಧ್ಯದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ವಿಶ್ರಾಂತ ತಹಶೀಲ್ದಾರರಾದ ಬಿ.ಎಲ್. ಗೋಠೆ ಅವರು ಉದ್ಘಾಟಿಸಲಿದ್ದು, ಜಮಖಂಡಿ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷರಾದ ಹಾಸಿಮ್ ಅ. ಜಮಖಂಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಎಸ್.ಎಂ. ಆನಿ ಮುಖ್ಯೋಪಾಧ್ಯಾಯರು, ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆ, ಶಿವಪ್ಪ ಸೋರಗಾಂವಿ ಅಧ್ಯಕ್ಷರು, ಸುರೇಶ ಶಂ. ಕಡಪಳ್ಳಿ ಪಿ.ಡಿ.ಓ. ಹಾಗೂ ಉಪಾಧ್ಯಕ್ಷರಾದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶ್ರೀಶೈಲ ಭೂಮಾರ ಅಧ್ಯಕ್ಷರು, ತಾಲೂಕಾ ರೈತ ಸಂಘ, ಗುರುನಾಥ ಸುತಾರ ವಿಶ್ರಾಂತ ಶಿಕ್ಷಕರು ಹಾಗೂ ಸಾಹಿತಿಗಳು, ಪಂಡಿತಪ್ಪ ಮ. ಝುಲಪಿ ನ್ಯಾಯವಾದಿಗಳು, ರತ್ನಯ್ಯ ಅ. ಮಠಪತಿ ಹಾಗೂ ಅರುಣ ಬ. ಶಿವಶಿಂಪಿ ಹರ್ಷಾ ಎಂಟರ್ಪ್ರೈಸಸ್ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಗುವುದು.
ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸಸಿ ನೆಡುವ ಕಾರ್ಯಕ್ರಮವೂ ನಡೆಯಲಿದ್ದು, ಸಾರ್ವಜನಿಕರು, ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಮಖಂಡಿ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
