Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ

ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಂಗಾಧರ ಮುತ್ತಗಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್!
(ರಾಜ್ಯ ) ಜಿಲ್ಲೆ

ಗಂಗಾಧರ ಮುತ್ತಗಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯಕ್ಕೆ ಮೊದಲ ರ‍್ಯಾಂಕ್ ನೀಡುವ ಮೂಲಕ ಮತ್ತೊಂದು ಮೈಲುಗಲ್ಲು ನೆಟ್ಟ ಎಕ್ಸಲಂಟ್ ಕಾಲೇಜು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರತಿ ವರ್ಷವೂ ಒಂದಲ್ಲ ಒಂದು ರ‍್ಯಾಂಕ್ ಮೂಲಕ ಗುರುತಿಸಿಕೊಂಡಿರುವ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜು ಈ ಬಾರಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ನೀಡುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಜಿಲ್ಲೆಗೆ ಮತ್ತೊಂದು ಗರಿ ಮೂಡುವಂತೆ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ೨೦೨೫-೨೬ ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾ ಪರೀಕ್ಷೆಯಲ್ಲಿ ಗಂಗಾಧರ ಮುತ್ತಗಿ ವೆಟರ್‌ನರಿ ಸೈನ್ಸನಲ್ಲಿ(ಪ್ರಾ) ೦.೫ ರ‍್ಯಾಂಕ್ ಹಾಗೂ ಬಿಎಸ್‌ಸಿ ಅಗ್ರಿಯಲ್ಲಿ ೩.೫ ರ‍್ಯಾಂಕ್ ಪಡೆದುಕೊಂಡಿರುವುದು ಶ್ಲಾಘನೀಯವಾಗಿದೆ.
ಇತ್ತೀಚೆಗೆ ಪ್ರಕಟಗೊಂಡ ೨೦೨೫-೨೬ ನೇ ಕೆ-ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ತಾಂತ್ರಿಕ ದೋಷಗಳಿಂದಾಗಿ ಕೆಲವು ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲು ಸಾಧ್ಯವಾಗದೇ ಉಳಿದಿದ್ದವು. ಅಂಥಹ ಸಂದರ್ಭದಲ್ಲಿ ಸ್ಪಾಟ್ ರ‍್ಯಾಂಕಿಂಗ್‌ನ್ನು ನೀಡುವ ಪ್ರತೀತಿ ಕೆಇಎ ಅಳವಡಿಸಿಕೊಂಡಿದ್ದು ಅದರ ಆಧಾರದ ಮೇಲೆ ರ‍್ಯಾಂಕ್ ನೀಡಲಾಗಿದ್ದು ಗಂಗಾಧರ ಮುತ್ತಗಿ ೦.೫ ರ‍್ಯಾಂಕ್ ಪಡೆಯುವ ಮೂಲಕ ಜಿಲ್ಲೆಯ ಇತಿಹಾಸದಲ್ಲಿಯೇ ಮೊದಲನೇ ರ‍್ಯಾಂಕ್‌ಗಿಂತಲೂ ಹೆಚ್ಚಿನ ರ‍್ಯಾಂಕ್‌ನ್ನು ಪಡೆದುಕೊಂಡಿದ್ದು ಹೆಮ್ಮೆಯ ವಿಷಯವಾಗಿದೆ.
ಇದರ ಕುರಿತು ಸಂತೋಷವನ್ನು ಹಂಚಿಕೊಂಡ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಚೇರ್‌ಮನ್ ಬಸವರಾಜ್ ಕೌಲಗಿ; ಕಳೆದ ಬಾರಿಯೂ ಸಹ ಅತ್ಯುತ್ತಮ ಫಲಿತಾಂಶವನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜು ಇಂದು ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದ್ದು ಸಂತಸ ತಂದಿದೆ. ಕಾಲೇಜು ಪ್ರಾರಂಭಗೊಂಡ ಮರು ವರ್ಷದಲ್ಲಿಯೇ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ನೀಡಿದ್ದ ನಮ್ಮ ಸಂಸ್ಥೆ ಈ ಬಾರಿಯೂ ಸಹ ಅಂತಹದೇ ಸಾಧನೆಗೆ ಸಾಕ್ಷಿಯಾಗಿದ್ದು ನಿಜಕ್ಕೂ ಹೆಮ್ಮೆ ಎನಿಸುತ್ತದೆ. ಸ್ಪಾಟ್ ರ‍್ಯಾಂಕಿಂಗ್ ಮೂಲಕ ೦.೫ ರ‍್ಯಾಂಕ್ ಪಡೆದ ಈ ವಿದ್ಯಾರ್ಥಿಯು ವೆಟರ್‌ನರಿಯಲ್ಲಿ ರಾಜ್ಯಕ್ಕೆ ಮೊದಲ ಹಾಗೂ ೩.ರ‍್ಯಾಂಕ್ ಮೂಲಕ ಬಿಎಸ್‌ಸಿ ಅಗ್ರಿಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದುಕೊಳ್ಳುವ ಮೂಲಕ ಕೆಸರಿನಲ್ಲಿ ಕಮಲ ಅರಳುತ್ತದೆ ಬಡತನದಲ್ಲಿ ಪ್ರತಿಭೆ ಅರಳುತ್ತದೆ ಎನ್ನುವುದನ್ನು ಸಾಬೀತು ಮಾಡಿ ತೋರಿಸಿದ್ದಾನೆ ಎಂದು ಹೇಳಿದರು.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಮಂಜುನಾಥ ಮ. ಜುನಗೊಂಡ, ಶೈಕ್ಷಣಿಕ ಸಂಯೋಜಕ ಮಂಜುನಾಥ ತುಮ್ಮರ ಮಟ್ಟಿ ಸೇರಿದಂತೆ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.

“ಅಪ್ಪ ಗೋಡೆ ಕಟ್ಟುವವರ ಕೈಯಲ್ಲಿ ಕೆಲಸಕ್ಕೆ ಹೋಗುತ್ತಿದ್ದು ನನ್ನನ್ನು ಓದಿಸಬೇಕು ಎಂದು ಎಕ್ಸಲಂಟ್ ಗೆ ತಂದು ಸೇರಿಸಿದರು. ಅವರ ಕಷ್ಟದ ಬಗ್ಗೆ ಅರಿವಿದ್ದ ನಾನು ಇಷ್ಟ ಪಟ್ಟು ಓದುತ್ತಿದ್ದೆ. ಕಾಲೇಜಿನ ಸರ್ವರೂ ನನಗೆ ಸದಾ ಬೆಂಬಲಿಸುತ್ತಲಿದ್ದರು. ಈ ಕಾರಣದಿಂದಾಗಿಯೇ ನಾನು ಹೆಚ್ಚು ಹೆಚ್ಚು ಓದಲು ಅರಿತುಕೊಳ್ಳಲು ಸಾಧ್ಯವಾಯಿತು. ಎಲ್ಲ ಉಪನ್ಯಾಸಕರು ಸಹಾಕಾರ ನೀಡುತ್ತಲಿದ್ದರು. ಈ ಕಾರಣದಿಂದಾಗಿಯೇ ನಾನು ಇಷ್ಟು ಚನ್ನಾಗಿ ಪರೀಕ್ಷೆ ಬರೆಯುವುದಕ್ಕೆ ಸಾಧ್ಯವಾಯಿತು. ಅದರಲ್ಲೂ ಸ್ಪಾಟ್ ರ‍್ಯಾಂಕ್ ಮೂಲಕ ೦.೫ ರ‍್ಯಾಂಕ್ ಬಂದಿದ್ದು ಒಂದು ಕ್ಷಣ ನನಗೆ ಆಶ್ಚರ್ಯ ತಂದಿತು. ತದನಂತರದಲ್ಲಿ ಅದರ ಕುರಿತು ಉಪನ್ಯಾಸಕರು ಹೇಳಿದ ಮೇಲೆಯೇ ನನಗೆ ನಂಬಿಕೆ ಬಂದಿದ್ದು. ಈ ರ‍್ಯಾಂಕ್ ಮುಂದೆ ಬರುವಂತ ಪರೀಕ್ಷೆಯಲ್ಲಿ ಇನ್ನೂ ಹೆಚ್ಚಿನ ರ‍್ಯಾಂಕ್ ಪಡೆಯುವುದಕ್ಕೆ ಆತ್ಮ ವಿಶ್ವಾಸ ಮೂಡಿಸಿದೆ.”

– ಗಂಗಾಧರ ಮುತ್ತಗಿ
ಮೊದಲ ರ್‍ಯಾಂಕ್ ವಿದ್ಯಾರ್ಥಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ

ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ

ಕಳ್ಳಬಟ್ಟಿ ಸರಾಯಿ ಅಡ್ಡೆಗಳ ಮೇಲೆ ಪೊಲೀಸ್ ದಾಳಿ :ಮೂವರು ವಶಕ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ
    In (ರಾಜ್ಯ ) ಜಿಲ್ಲೆ
  • ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ
    In (ರಾಜ್ಯ ) ಜಿಲ್ಲೆ
  • ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕಳ್ಳಬಟ್ಟಿ ಸರಾಯಿ ಅಡ್ಡೆಗಳ ಮೇಲೆ ಪೊಲೀಸ್ ದಾಳಿ :ಮೂವರು ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಜೂ.೧೪ ರಂದು ಎಸ್.ಬಿ.ಐ ನಿವೃತ್ತ ಸ್ನೇಹಿತರ ಸಂತೋಷ ಕೂಟ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಗೆ ಕೂಡಲೆ ಏಜೆಂಟ್ ರನ್ನು ನೇಮಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ೫ ಸಾವಿರ ಪ್ರಕರಣಗಳಿಗೆ ಇಲ್ಲಿ ಒಬ್ಬರೇ ನ್ಯಾಯಾಧೀಶರು!
    In (ರಾಜ್ಯ ) ಜಿಲ್ಲೆ
  • ಗಂಗಾಧರ ಮುತ್ತಗಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್!
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಬಗ್ಗೆ ಅನಗತ್ಯ ಭಯ ಬೇಡ :ತಹಶೀಲ್ದಾರ ನಿಂಗಪ್ಪ
    In (ರಾಜ್ಯ ) ಜಿಲ್ಲೆ
  • ಝಮೀರ್ ಅಹ್ಮದ್ ಖಾನ್‌ ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.