Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ

ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ
(ರಾಜ್ಯ ) ಜಿಲ್ಲೆ

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಆಯ್ದ 20 ಜನ ರೈತರ ತಂಡವು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದೆ.
ಬುಧವಾರ ಸಂಜೆ ತಿಪಟೂರು ಅಕ್ಷಯಕಲ್ಪ ಕ್ಯಾಂಪಸ್ ಗೆ ತೆರಳುತ್ತಿರುವ ರೈತರಿಗೆ ಶುಭಕೋರಿದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅವರು, ವಿಜಯಪುರ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಮತ್ತು ತೋಟಗಾರಿಕೆಯನ್ನು ಉತ್ತೇಜಿಸಲು ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್‌ಗಳ ಜಂಟಿ ಆಶ್ರಯದಲ್ಲಿ ಸಚಿವ ಎಂ.ಬಿ.ಪಾಟೀಲರ ಮಾರ್ಗದರ್ಶನದಲ್ಲಿ ಈ ‘ಕ್ಷೀರ ಪೈಲಟ್’ ಯೋಜನೆಗೆ ಚಾಲನೆ ನೀಡಲಾಗಿತ್ತು. ಇದರನ್ವಯ ಬಬಲೇಶ್ವರ ತಾಲೂಕಿನ ನಿಡೋಣಿ, ಕುಮಠೆ ಹಾಗೂ ನಾಗರಾಳ ಮತ್ತು ತಿಕೋಟಾ ತಾಲೂಕಿನ ಜಾಲಗೇರಿ, ಡೋಕಳೆವಾಡಿ ಗ್ರಾಮಗಳ ಉತ್ಸಾಹಿ ರೈತರು ಈ ತರಬೇತಿಗಾಗಿ ತೆರಳಿದ್ದಾರೆ. ವೈಜ್ಞಾನಿಕ ಮತ್ತು ಸಾವಯವ ಹೈನುಗಾರಿಕೆಯಲ್ಲಿ ದೇಶದಲ್ಲೇ ಮಾದರಿ ಎನಿಸಿಕೊಂಡಿರುವ ಅಕ್ಷಯ ಕಲ್ಪ ಸಂಸ್ಥೆಯ ಆವರಣದಲ್ಲಿ ರೈತರು ಸುಧಾರಿತ ತಂತ್ರಜ್ಞಾನಗಳ ನೇರ ಪ್ರಾತ್ಯಕ್ಷಿಕೆ ಹಾಗೂ ತರಬೇತಿಯನ್ನು ಪಡೆಯಲಿದ್ದಾರೆ ಎಂದರು.
ಬಿ.ಎಲ್.ಡಿ.ಇ ಡೀಮ್ಡ್ ವಿವಿ ರಜಿಸ್ಟ್ರಾರ್ ಡಾ. ಆರ್.ವಿ.ಕುಲಕರ್ಣಿ ಮಾತನಾಡಿ, ರೈತರು ತರಬೇತಿಯಲ್ಲಿ ವೈಜ್ಞಾನಿಕ ಕೊಟ್ಟಿಗೆ ನಿರ್ವಹಣೆಯಲ್ಲಿ ಹಸುಗಳ ಆರೋಗ್ಯ, ಸ್ವಚ್ಛತೆ ಮತ್ತು ಆಧುನಿಕ ತಂತ್ರಜ್ಞಾನದ ಮೂಲಕ ಹೈನುಗಾರಿಕೆಯನ್ನು ಲಾಭದಾಯಕವಾಗಿಸುವುದು ಹೇಗೆ ಎಂಬುದನ್ನು ಮತ್ತು ಸಾವಯವ ಹಾಲು ಉತ್ಪಾದನೆಯಲ್ಲಿ ರಾಸಾಯನಿಕ ಮುಕ್ತ ಹಾಗೂ ಗುಣಮಟ್ಟದ ಹಾಲಿನ ಉತ್ಪಾದನೆಗೆ ಪೂರಕವಾದ ತರಬೇತಿ ಪಡೆದು, ತಿಪಟೂರು ಭಾಗದ ರೈತರು ಅಕ್ಷಯ ಕಲ್ಪ ಮಾದರಿಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾದಂತೆ, ವಿಜಯಪುರ ಜಿಲ್ಲೆಯಲ್ಲೂ ಶ್ವೇತ ಕ್ರಾಂತಿ ಸೃಷ್ಟಿಸುವುದು ಹೇಗೆ ಎಂಬುದನ್ನು ಮಾಹಿತಿ ಪಡೆಯಲಿದ್ದಾರೆ ಎಂದರು.
ಪ್ರಸ್ತುತ ತರಬೇತಿಗೆ ತೆರಳಿರುವ 20 ರೈತರು ಅಲ್ಲಿನ ತಂತ್ರಜ್ಞಾನ, ಶೆಡ್ ನಿರ್ಮಾಣ, ಹಸುಗಳ ಆಹಾರ ಕ್ರಮ ಮೇವು ನಿರ್ವಹಣೆ, ಕರು, ಕೋಳಿ ಸಾಕಾಣಿಕೆ ಮತ್ತು ಸಾವಯುವ ಪದ್ಧತಿಯಲ್ಲಿ ವಿವಿಧ ತರಕಾರಿ ಬೆಳೆ ಬೆಳೆಯುವ ಕುರಿತು ಅಧ್ಯಯನ ಮಾಡಿ ಬರಲಿದ್ದಾರೆ. ಈ ತರಬೇತಿಯು ಜಿಲ್ಲೆಯ ಹೈನುಗಾರಿಕಾ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ ನೀಡಲಿದ್ದು, ಮುಂಬರುವ ದಿನಗಳಲ್ಲಿ ಯುವಕರು ಸ್ವಾವಲಂಬಿ ಉದ್ಯೋಗ ಕೈಗೊಳ್ಳಲು ಪ್ರೇರಣೆಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಸಹಾಯಕರಜಿಸ್ಟ್ರಾರ್ ಸತೀಶ ಪಾಟೀಲ, ಕೃಷಿಕಲ್ಪ ಫೌಂಡೇಶನ್ ನ ಸಂತೋಷ ಬಿರಾದಾರ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ

ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ

ಕಳ್ಳಬಟ್ಟಿ ಸರಾಯಿ ಅಡ್ಡೆಗಳ ಮೇಲೆ ಪೊಲೀಸ್ ದಾಳಿ :ಮೂವರು ವಶಕ್ಕೆ

ಜೂ.೧೪ ರಂದು ಎಸ್.ಬಿ.ಐ ನಿವೃತ್ತ ಸ್ನೇಹಿತರ ಸಂತೋಷ ಕೂಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೂ.15ರಂದು ವಿಜಯಪುರದಲ್ಲಿ ಅಪ್ರೆಂಟಿಸ್ ಮೇಳ
    In (ರಾಜ್ಯ ) ಜಿಲ್ಲೆ
  • ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದ ರೈತರ ತಂಡ
    In (ರಾಜ್ಯ ) ಜಿಲ್ಲೆ
  • ನನ್ನ ಗಿಡ-ನನ್ನ ಭೂಮಿ ಸಂಸ್ಥೆಯಿಂದ ದಿ.ನಾವಲಗಿ ಸ್ಮರಣೆ & ಪರಿಸರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕಳ್ಳಬಟ್ಟಿ ಸರಾಯಿ ಅಡ್ಡೆಗಳ ಮೇಲೆ ಪೊಲೀಸ್ ದಾಳಿ :ಮೂವರು ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಜೂ.೧೪ ರಂದು ಎಸ್.ಬಿ.ಐ ನಿವೃತ್ತ ಸ್ನೇಹಿತರ ಸಂತೋಷ ಕೂಟ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಗೆ ಕೂಡಲೆ ಏಜೆಂಟ್ ರನ್ನು ನೇಮಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ೫ ಸಾವಿರ ಪ್ರಕರಣಗಳಿಗೆ ಇಲ್ಲಿ ಒಬ್ಬರೇ ನ್ಯಾಯಾಧೀಶರು!
    In (ರಾಜ್ಯ ) ಜಿಲ್ಲೆ
  • ಗಂಗಾಧರ ಮುತ್ತಗಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್!
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಬಗ್ಗೆ ಅನಗತ್ಯ ಭಯ ಬೇಡ :ತಹಶೀಲ್ದಾರ ನಿಂಗಪ್ಪ
    In (ರಾಜ್ಯ ) ಜಿಲ್ಲೆ
  • ಝಮೀರ್ ಅಹ್ಮದ್ ಖಾನ್‌ ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.