Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್

ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ

ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು
(ರಾಜ್ಯ ) ಜಿಲ್ಲೆ

ದೇಶದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದೇಶ ಸಮೃದ್ಧಿಯತ್ತ ಸಾಗಬೇಕಾದರೆ ರಾಮರಾಜ್ಯದ ಕನಸು ನನಸಾಗಬೇಕು ಎಂದು ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ಇಲ್ಲಿಯ ಶ್ರೀಕೃಷ್ಣ ವಾದಿರಾಜ ಮಠದ ಆವರಣದಲ್ಲಿ ಅಂದಾಜು ರೂ.೭ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿದ್ಯಾರ್ಥಿ ನಿಲಯದ ದಾನಿಗಳನ್ನು ಉದ್ಧೇಶಿಸಿ ಮಾತನಾಡುತ್ತಿದ್ದರು.
ಬಡ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ಅನಕೂಲ ಕಲ್ಪಿಸಲು ಹಿರಿಯ ಸ್ವಾಮಿಗಳು ಆರು ದಶಕದ ಹಿಂದೆ ನಿರ್ಮಿಸಿದ ವಿದ್ಯಾರ್ಥಿ ನಿಲಯ ಶಿಥಿಲಾವಸ್ಥೆಯಲ್ಲಿತ್ತು. ಅದನ್ನು ಆಧುನಿಕರಣಗೊಳಿಸಿ ಇಂದಿನ ತಂತ್ರಜ್ಞಾನಯುಗದಲ್ಲಿ ಸಮಸ್ತ ಬಡವರಿಗೂ ನೂತನ ಕಟ್ಟಡ ನಿರ್ಮಿಸಿಕೊಡುವ ಯೋಜನೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಅನುದಾನ ನೀಡಿದ್ದಾರೆ. ರೂ.ಒಂದು ಕೋಟಿಯಷ್ಟು ಹಣ ಸಂಗ್ರಹಿಸಿ ಕೊಡುವ ಭರವಸೆ ಕೊಟ್ಟಿದ್ದಾರೆಂದು ಪ್ರಶಂಸಿಸಿದ ಅವರು ಸಂಸದ ರಮೇಶ ಜಿಗಜಿಣಗಿ ಅವರೂ ಅನುದಾನ ಬಿಡುಗಡೆ ಮಾಡಿದ್ದಾರೆಂದು ಶ್ಲ್ಯಾಘಿಸಿದರು.
ಅನೇಕ ಜನ ಹಿರಿಯರು ಒಂದು ಕೋಣೆ ನಿರ್ಮಾಣಕ್ಕೆ ರೂ ೫ ಲಕ್ಷ ಕೊಡಲು ಬಂದಿದ್ದಾರೆಂದ ಅವರು, ಹಣ ಮಹತ್ವ ಅಲ್ಲ ಅವರ ಪ್ರೀತಿ ವಿಶ್ವಾಸ ಪ್ರಮುಖ ಎಂದರು.
ಶ್ರೀಮಠದ ಗೌರವಾಧ್ಯಕ್ಷ ಗೋಪಾಲ ನಾಯಕ ಮಾತನಾಡಿ, ಪೇಜಾವರ ಮಠಕ್ಕೂ ವಿಜಯಪುರ ಜಿಲ್ಲೆಯ ಜನರಿಗೂ ಅವಿನಾಭಾವ ಸಂಬಂಧ ಇದೆ ಎಂದರು.
ಹಿರಿಯ ಸ್ವಾಮಿಗಳು ೧೯೬೪ ರಲ್ಲಿ ಜಿಲ್ಲೆಯ ಬಡ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ನಿಲಯ ಕಟ್ಟಿದರು. ೧೯೭೨ ರಲ್ಲಿ ಬರಗಾಲ ಬಿದ್ದಾಗ ಸಿಂದಗಿ ತಾಲೂಕಿನ ಗ್ರಾಮಗಳಿಗೆ ಗಂಜಿ ಕೇಂದ್ರ ತೆರೆದರು. ಚಿಕ್ಕಪಡಸಲಾಗಿ ಬಾಂದಾರ ನಿರ್ಮಾಣಕ್ಕೆ ಶ್ರಮದಾನ ಮಾಡಿದ್ದು ವಿಶೇಷ. ಸದಾ ವಿಜಯಪುರ ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಐದು ವರ್ಷಗಳ ನಂತರ ಬರಲಿರುವ ಗುರುಗಳ ಜನ್ಮ ಶತಮಾನೋತ್ಸವ ಒಳಗಾಗಿ ಅವರ ಎಲ್ಲ ಕನಸುಗಳನ್ನು ನನಸು ಮಾಡುವ ಉದ್ದೇಶ ಪ್ರಸ್ತುತ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನತೀರ್ಥರು ಹೊಂದಿದ್ದಾರೆ. ಅವರೊಂದಿಗೆ ಭಕ್ತಾದಿಗಳು ಕೈಜೋಡಿಸೋಣ ಎಂದು ಕರೆ ನೀಡಿದರು.
ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಸ್ವಾಗತಿಸಿ ಶ್ರೀಗಳ ಸಮಸ್ತ ಯೋಜನೆಗಳ ವಿವರಣೆ ನೀಡಿದರು.
ರೂ.೫ ಲಕ್ಷ ದೇಣಿಗೆ ಸಂಕಲ್ಪ ಮಾಡಿದ ಗಿರೀಶ ಕುಲಕರ್ಣಿ ಹಾಗು ಹೆಚ್ಚಿನ ದಾನ ಕೊಡಲು ಮುಂದಾದ ಡಾ ಢಾಣಕ ಶಿರೂರ, ಗುರುರಾಜ ಸೊಂಡೂರ ಅವರನ್ನು ಶ್ರೀಗಳು ಫಲ ಮಂತ್ರಾಕ್ಷತೆ ನೀಡಿ ಗೌರವಿಸಿದರು.
ಶ್ರೀ ಮಠದ ಸದಸ್ಯರಾದ ಡಾ ಮಂಗಲಗಿ, ಡಾ. ಮಲಘಾಣ, ಅಶೋಕರಾವ್‌ ವಿಕಾಸ ಪದಕಿ, ವ್ಹಿ ಬಿ ಕುಲಕರ್ಣಿ, ಗೋವಿಂದ ಜೋಶಿ ಮತ್ತು ವಿಕಾಸ ಪದಕಿ ವಿಜಯ ಜೋಶಿ ಡಾ ಪ್ರಾಣೇಶ ಜಹಾಗೀರದಾರ ಅನೇಕ ಗಣ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್

ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ

ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ

ನಮ್ಮ ಮಕ್ಕಳ ಆಹಾರ ಹೀಗಿರಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್
    In ವಿಶೇಷ ಲೇಖನ
  • ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ
    In (ರಾಜ್ಯ ) ಜಿಲ್ಲೆ
  • ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ನಮ್ಮ ಮಕ್ಕಳ ಆಹಾರ ಹೀಗಿರಲಿ
    In ವಿಶೇಷ ಲೇಖನ
  • ದೇಶದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು
    In (ರಾಜ್ಯ ) ಜಿಲ್ಲೆ
  • ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದಿಂದ ವಂಚಿತರಾಗುವ ಅವಕಾಶ ಕಳೆದುಕೊಳ್ಳದಿರಿ :ಉಟಗಿ
    In (ರಾಜ್ಯ ) ಜಿಲ್ಲೆ
  • ಡಾ.ಆನಂದ ಅಂಬಲಿ ಅವರ ಆರೋಗ್ಯ ಸಂಬಂಧಿ ಕೃತಿ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಬಾಲ ಕಾರ್ಮಿಕ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ವಸತಿ ನಿಲಯ: ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.