Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್

ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ

ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್
ವಿಶೇಷ ಲೇಖನ

ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜೂನ್ ೧೭ ರಿಂದ ೧೯ ರವರೆಗೆ ವಿಜಯಪುರ ಜಿಲ್ಲೆಯ ಕೋಟಾದಲ್ಲಿ ಹಜರತ ಹಾಜಿಮಸ್ತಾನ ಜಾತ್ರೆ ಪ್ರಯುಕ್ತ ಈ ವಿಶೇಷ ಲೇಖನ

ಲೇಖನ
– ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)
ವಿಜಯಪುರ

ಉದಯರಶ್ಮಿ ದಿನಪತ್ರಿಕೆ

ಇಡೀ ಜಗತ್ತಿಗೆ ಅನೇಕತೆಯಲ್ಲಿ ಏಕತೆಯನ್ನು ಎತ್ತಿ ತೋರಿಸಿದ ರಾಷ್ಟ್ರ ನಮ್ಮದು. ಹಿಂದೂ, ಮುಸ್ಲಿಂ, ಬೌದ್ಧ, ಜೈನ್, ಪಾರಸಿ ಹೀಗೆ ವಿವಿಧ ಧರ್ಮೀಯರು ಭಾವೈಕ್ಯತೆಯಿಂದ ನೆಲೆಸಿರುವ ಭರತ ಭೂಮಿ ನಮ್ಮದು. ವಿಜಯಪುರ ಜಿಲ್ಲಾ ಕೇಂದ್ರ ಸ್ಥಾನದಿಂದ ೨೦ ಕಿ.ಮೀ. ಪಶ್ಚಿಮಕ್ಕೆ ಇರುವ ತಿಕೋಟಾ ಪಟ್ಟಣವಿದೆ. ಆಗಿನ ಮಹಾರಾಷ್ಟ್ರದ ಕುರುಂದವಾಡ ಸಂಸ್ಥಾನದಲ್ಲಿ ಕೇಂದ್ರ ಸ್ಥಾನವಾಗಿದ್ದ ಈ ಪಟ್ಟಣವು ಈಗ ತಾಲೂಕ ಕೇಂದ್ರವಾಗಿದೆ. ೧೬ ನೇಯ ಶತಮಾನದಲ್ಲಿ ನಿರ್ಮಾಣಗೊಂಡ ಎರಡನೇಯ ತಾಜಮಹಲ್ ಎಂದೇ ಕರೆಯಲಾಗುವ ಇಬ್ರಾಹಿಂ ರೋಜಾ ವಾಸ್ತುಶಿಲ್ಪಿ ಸಂದಲ್ ಮಲೀಕನ ಸಮಾಧಿ ಈ ನಗರದಲ್ಲಿರುವದು ಒಂದು ವಿಶೇಷ. ದೇಶದಲ್ಲಿಯೇ ಮೊಟ್ಟಮೊದಲ ಸರ್ಕಸ್ ಕಂಪನಿ ಪ್ರಾರಂಭಿಸಿದ ಗಣಪತರಾವ್ ಛತ್ರೆ, ಖ್ಯಾತ್ ಪ್ರವಚನಕಾರ ದಾನಪ್ಪ ಜತ್ತಿ ಹಾಗೂ ಜಾನಪದ ಕಲೆಗಳಲ್ಲೊಂದಾದ ಚೌಡಕಿ ಪದ ಗಾಯಕಿ ಗೌರವ್ವ ಮಾದರ ಅವರು ಈ ತಿಕೋಟಾ ಪಟ್ಟಣದವರಾಗಿರುವುದು ಇನ್ನೊಂದು ವೈಶಿಷ್ಯವಾಗಿದೆ.
ಈ ಪಟ್ಟಣದಲ್ಲಿರುವ ಹಜರತ ಹಾಜಿಮಸ್ತಾನ ದರ್ಗಾ ರಾಜ್ಯದಲ್ಲಿರುವ ಭಾವೈಕ್ಯತೆ, ಸೌಹಾರ್ಧತೆ ಮತ್ತು ಸಾಮರಸ್ಯಕ್ಕೆ ಹೆಸರಾದ ಪವಿತ್ರ ಮತ್ತು ದೈವಿ ತಾಣವಾಗಿದೆ. ಇಲ್ಲಿ ಬ್ರಾಹ್ಮಣ, ಲಿಂಗಾಯತರು, ಮುಸ್ಸಿಮರು ಸೇರಿದಂತೆ ಎಲ್ಲ ಧರ್ಮೀಯರು ಭಾವ-ಭಕ್ತಿಯಿಂದ ಆರಾಧಿಸುವ ಸೂಫಿ-ಸಂತ ಹಜರತ ಹಾಜಿಮಸ್ತಾನ ದರ್ಗಾದ ಉರುಸ್ ವಿಜೃಂಭಣೆಯಿಂದ ಆಚರಿಸುತ್ತಾರೆ. ಈ ಉರುಸ್‌ನಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ಭಕ್ತರು ಆಗಮಿಸುತ್ತಾರೆ.
ಹಲವು ವಿಶೇಷತೆಗಳ ಹೆಸರುವಾಸಿಯಾದ ಈ ಪಟ್ಟಣವು ಭಾವೈಕ್ಯತೆ ಸಂದೇಶ ಸಾರುವ ಈ ದರ್ಗಾದ ಉರುಸ್ ಅಂಗವಾಗಿ ಯಾವುದೇ ಜಾತಿ, ಮತ-ಪಂಥ, ಜನಾಂಗ, ಧರ್ಮದವರೆಂಬ ಭೇದ-ಭಾವವಿಲ್ಲದೇ ಎಲ್ಲರೂ ೨೦ ದಿನಗಳ ರೋಜಾ (ಹಗಲು ಉಪವಾಸ) ವ್ರತ ಮಾಡುತ್ತಾರೆ. ಈ ದರ್ಗಾ ಉರುಸ್ ಮೂರು ದಿನಗಳವರೆಗೆ ಜರುತ್ತದೆ. ದಿನಾಂಕ:೧೭-೦೬-೨೦೨೬ ರಂದು ಮೊದಲ ದಿನ ಊರಿನ ಬ್ರಾಹ್ಮಣ ಸಮಾಜದ ಶ್ರೀ ರಾಮರಾವ್ ದೇಸಾಯಿ ಇವರ ಮನೆಯಿಂದ ವಿಜೃಂಭಣೆಯಿಂದ ಸಂದಲ್ (ಗಂಧ) ಬರುವುದು. ದಿನಾಂಕ: ೧೮-೦೬-೨೦೨೬ ರಂದು ಪಟ್ಟಣದ ಪೋಲೀಸ್ ಪಾಟೀಲರ ಮನೆತನದವರಾದ ಡಾ. ಮಲ್ಲನಗೌಡ. ಮಾದಪ್ಪಗೌಡ. ಪಾಟೀಲ (ಚಿಕ್ಕ ಮಕ್ಕಳ ತಜ್ಞರು, ಬಿ.ಎಲ್.ಡಿ.ಇ ಆಸ್ಪತ್ರೆ) ಇವರ ಮನೆಯಿಂದ ನೈವೇದ್ಯದೊಂದಿಗೆ ಗಲೀಫ್ (ವಸ್ತ್ರ) ಬರುವುದು.
ಸುಮಾರು ೨೦೦ ರಿಂದ ೨೫೦ ವರ್ಷಗಳ ಹಿಂದೆ ತಿಕೋಟಾಕ್ಕೆ ಬಂದು ಇಸ್ಲಾಂ ಧರ್ಮದ ಪ್ರೀತಿಯ ಜೊತೆಗೆ ಪರಧರ್ಮಗಳನ್ನು ಗೌರವದಿಂದ ಕಾಣುತ್ತಾ ತಮ್ಮ ಸಾಧನೆಯ ಬಲದಿಂದ ಸಿದ್ಧಿ ಪುರುಷನಾಗಿದ್ದ ಸೂಫಿ-ಸಂತ ಹಜರತ ಹಾಜಿಮಸ್ತಾನ ಅವರು ‘ವಸುದೈವ ಕುಟುಂಬಕಂ’ ಎಂಬ ವಿಶಾಲತೆ ಧರ್ಮ ಸಹಿಷ್ಣುತೆಯಿಂದ ಸರ್ವ ಜನಾಂಗದ ಕಲ್ಯಾಣಕ್ಕಾಗಿ ತಪಸ್ಸು ಮಾಡಿದ ಶ್ರೇಷ್ಠ ಸಂತನಾಗಿದ್ದನೆಂಬ ಪ್ರತೀತಿಯಿದೆ.
ಆಗಿನ ಕಾಲದಲ್ಲಿ ವ್ಯಾಪಾರಿಗಳಾಗಿದ್ದ ಲಿಂಗಾಯತ ಸಮಾಜದ ಪೀರಶೆಟ್ಟಿ ಮನೆತನದವರು ಹಾಜಿಮಸ್ತಾನ ದರ್ಗಾ ಕಟ್ಟಿಸಿದ್ದಾರೆ. ಹೀಗಾಗಿ ಉರುಸ್‌ನ ಮೊದಲ ದಿನದ ಗಂಧ ಅರ್ಪಿಸುವ ಗೌರವ ಅವರ ಮನೆತನಕ್ಕಿದೆ. ಈ ದರ್ಗಾದ ಸಮೀಪವೇ ನೂರಜಿಸಾಬ ಬಡಕಲ್ ಎಂಬ ಹೆಸರಿನ ಶಿಷ್ಯನಾಗಿದ್ದ ಬಡಕಲ್ ಸಾಹೇಬ ಎಂಬ ಇನ್ನೊಂದು ದರ್ಗಾ ಇದೆ. ಈ ಬಡಕಲ್ ಸಾಹೇಬ ದರ್ಗಾದ ಮೇಲ್ಛಾವಣೆಯನ್ನು ಕಟ್ಟಬೇಕೆಂದರೆ ಸುತ್ತಲಿನ ಏಳು ನದಿಗಳ ನೀರು ತಂದು ಒಂದೇ ದಿನದಲ್ಲಿ ಕಟ್ಟಬೇಕೆಂಬ ಇತಿಹಾಸವಿದೆ. ಈ ಕಾರ್ಯವು ಇನ್ನೂ ಕೈಗೂಡಿಲ್ಲವೆನ್ನುವುದು ಈ ಪಟ್ಟಣದ ಜನರ ಅಭಿಪ್ರಾಯವಾಗಿದೆ,
ಸರ್ವ ಧರ್ಮಿಯರ ಪವಿತ್ರ ತಾಣವಾದ ಈ ದರ್ಗಾಕ್ಕೆ ಗುರುವಾರ ಮತ್ತು ಅಮವಾಸ್ಯೆಯ ದಿನದಂದು ಜನರು ಭಕ್ತಿಯಿಂದ ನಡೆದುಕೊಳ್ಳುತ್ತಾರೆ ಮತ್ತು ಆರಾಧಿಸುತ್ತಾರೆ. ಈ ಮೂರು ದಿನಗಳವರೆಗೆ ನಡೆಯುವ ಈ ಉರುಸ್‌ನಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಹಿಂದೂ, ಮುಸಿಂ, ಸೇರಿದಂತೆ ಎಲ್ಲ ಧರ್ಮದ ಲಕ್ಷಾಂತರ ಜನರ ಭಕ್ತಸಾಗರ ಸೇರುತ್ತದೆ. ಈ ವರ್ಷದ ಉರುಸ್ ಅಂಗವಾಗಿ ಆಟ, ನಾಟಕ, ಜೋಡು ಎತ್ತಿನ ರೇಸ್, ಕುದುರೆ ಗಾಡಿ ರೇಸ್, ಟ್ರ್ಯಾಕ್ಟರ್ ಇಂಜೀನ್ ಜಗ್ಗುವ ರೇಸ್, ಜಂಗಿ ಕುಸ್ತಿಗಳು ಹೀಗೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಲಿವೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ

ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ

ನಮ್ಮ ಮಕ್ಕಳ ಆಹಾರ ಹೀಗಿರಲಿ

ದೇಶದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್
    In ವಿಶೇಷ ಲೇಖನ
  • ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ
    In (ರಾಜ್ಯ ) ಜಿಲ್ಲೆ
  • ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ನಮ್ಮ ಮಕ್ಕಳ ಆಹಾರ ಹೀಗಿರಲಿ
    In ವಿಶೇಷ ಲೇಖನ
  • ದೇಶದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು
    In (ರಾಜ್ಯ ) ಜಿಲ್ಲೆ
  • ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದಿಂದ ವಂಚಿತರಾಗುವ ಅವಕಾಶ ಕಳೆದುಕೊಳ್ಳದಿರಿ :ಉಟಗಿ
    In (ರಾಜ್ಯ ) ಜಿಲ್ಲೆ
  • ಡಾ.ಆನಂದ ಅಂಬಲಿ ಅವರ ಆರೋಗ್ಯ ಸಂಬಂಧಿ ಕೃತಿ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಬಾಲ ಕಾರ್ಮಿಕ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ವಸತಿ ನಿಲಯ: ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.