Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು :ನಾರ್ವೇಕರ

ಜೂ.16-17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ

ಬಿಜೆಪಿ ಅಧ್ಯಕ್ಷ ನಿತಿನ್ ನಬೀನ್ ಹೇಳಿಕೆಯೇ ಎಸ್‌ಐಆರ್ ಕರಾಳತೆಗೆ ನಿದರ್ಶನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಅಧ್ಯಕ್ಷ ನಿತಿನ್ ನಬೀನ್ ಹೇಳಿಕೆಯೇ ಎಸ್‌ಐಆರ್ ಕರಾಳತೆಗೆ ನಿದರ್ಶನ
(ರಾಜ್ಯ ) ಜಿಲ್ಲೆ

ಬಿಜೆಪಿ ಅಧ್ಯಕ್ಷ ನಿತಿನ್ ನಬೀನ್ ಹೇಳಿಕೆಯೇ ಎಸ್‌ಐಆರ್ ಕರಾಳತೆಗೆ ನಿದರ್ಶನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಅಹಿಂದ ಮುಖಂಡ ಸೋಮನಾಥ ಕಳ್ಳೀಮನಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕದಲ್ಲಿ ಎಸ್.ಐ.ಆರ್. ಪ್ರಕ್ರಿಯೆ ನಡೆದರೆ ೫೦ ವರ್ಷಗಳ ಕಾಲ ಬಿಜೆಪಿಯೇ ಅಧಿಕಾರದಲ್ಲಿರುತ್ತದೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನೀತಿನ್ ನಬೀನ್ ಹೇಳಿಕೆಯೇ ಎಸ್‌ಐಆರ್ ಕರಾಳತೆಗೆ ಒಂದು ದೊಡ್ಡ ನಿದರ್ಶನವಾಗಿದೆ ಎಂದು ಅಹಿಂದ ಮುಖಂಡ ಸೋಮನಾಥ ಕಳ್ಳೀಮನಿ ಹೇಳಿದರು.
ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಶನಿವಾರ ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ನಿಲುವು ವ್ಯಕ್ತಪಡಿಸಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈ ರೀತಿ ಹೇಳಿಕೆ ನೀಡಿದ್ದಾರೆ, ಆ ಮೂಲಕ ಎಸ್‌ಐಆರ್ ಎನ್ನುವುದು ಬಿಜೆಪಿ ಅನುಕೂಲಕರ ಎಂದು ಅವರೇ ಹೇಳಿದ್ದಾರೆ, ಈಗಲಾದರೂ ವಾಸ್ತವಿಕತೆಯನ್ನು ಚುನಾವಣಾ ಆಯೋಗ ಅರಿಯಬೇಕಿದೆ, ಈ ಬಗ್ಗೆ ಬಹಿರಂಗ ಸವಾಲಿಗೆ ಅನೇಕ ಬಾರಿ ಆಹ್ವಾನಿಸಿದರೂ ಸಹ ಚುನಾವಣಾ ಆಯೋಗ ಸವಾಲು ಏಕೆ ಸ್ವೀಕರಿಸುತ್ತಿಲ್ಲ ಎಂದರು.
ಅಲ್ಪಸಂಖ್ಯಾತ ಮುಖಂಡ ಮೊಹ್ಮದ್‌ರಫೀಕ್ ಟಪಾಲ್ ಮಾತನಾಡಿ, ಪಶ್ಚಿಮ ಬಂಗಾಳದ ನಿಕಟಪೂರ್ವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕ್ಷೇತ್ರದಲ್ಲಿಯೇ ಲಕ್ಷಾಂತರ ಮತಗಳನ್ನು ಡಿಲೀಟ್ ಮಾಡಿರುವುದು ಒಂದು ವ್ಯವಸ್ಥಿತ ಹುನ್ನಾರವಲ್ಲದೇ ಮತ್ತೇನು? ಈ ಅಪಾಯ ರಾಜ್ಯದಲ್ಲಿಯೂ ಇದೆ, ಲಕ್ಷಾಂತರ ಮತಗಳನ್ನೇ ಕಡಿತಗೊಳಿಸುವ ನಿಟ್ಟಿನಲ್ಲಿ ದೊಡ್ಡ ಹುನ್ನಾರವಿದ್ದು ಇದನ್ನು ಪ್ರಬಲವಾಗಿ ಪ್ರತಿಭಟಿಸಬೇಕಿದೆ ಎಂದರು.
ಎಸ್‌ಐಆರ್ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿದೆ, ಚುನಾವಣೆಯ ಫಲಿತಾಂಶ ೧೦ ರಿಂದ ೧೫ ಸಾವಿರಗಳ ಅಂತರದಲ್ಲಿಯೇ ಇರುತ್ತದೆ, ಅಂತಹ ಸಂದರ್ಭದಲ್ಲಿ ಸಾವಿರಾರು ಮತಗಳನ್ನು ಡಿಲೀಟ್ ಮಾಡಿದರೆ ಹೇಗೆ? ಇದು ಅವೈಜ್ಞಾನಿಕವಲ್ಲದೇ ಮತ್ತೇನು ಎಂದು ಪ್ರಶ್ನಿಸಿದರು.
ಧುರೀಣ ಯೂಸೂಫ್ ಖಾಜಿ ಮಾತನಾಡಿ, ೧೩ ರಾಜ್ಯಗಳಲ್ಲಿ ಎಸ್‌ಐಆರ್ ಮುಗಿದ್ದು, ೬.೫೦ ಕೋಟಿ ಜನರ ಹೆಸರು ತೆಗೆದು ಹಾಕಲಾಗಿದೆ. ಇದರಲ್ಲಿ ೩೭೨ ಜನ ಮಾತ್ರ ನುಸುಳಿಕೋರರು ಪತ್ತೆಯಾಗಿದ್ದಾರೆ. ಇದರಲ್ಲಿ ಕೇವಲ ೭ ಜನ ಮಾತ್ರ ಮುಸ್ಲಿಂರೇ ಇದ್ದಾರೆ, ಈಗ ರಾಜ್ಯಕ್ಕೂ ಇದು ಕಾಲಿಟ್ಟಿದೆ. ಹೀಗಾಗಿ ಮುಸ್ಲಿಂ, ದಲಿತ, ಪ್ರಗತಿಪರ ಸಂಘಟನೆಗಳ ಸೇರಿ ೧೫೦ ಸಂಘಟನೆಗಳು ಒಂದಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಪ್ರಮುಖರಾದ ಆರೀಫ್ ಮುಲ್ಲಾ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಸ್ವಾಗತವಿದೆ, ವಿಶೇಷ ಪರಿಷ್ಕರಣೆಗೆ ಸರ್ಕಾರದ ಯಾವುದೇ ಇಲಾಖೆಯಿಂದ ಅನುಮೋದನೆ ಆಗಿಲ್ಲ. ಒಂದೇ ರೀತಿಯ ಅರ್ಜಿ ನಮೂನೆ ಇಲ್ಲ. ಮತದಾರರು ತಮ್ಮನ್ನು ತಾವೇ ಗುರುತಿಸಿಕೊಳ್ಳಬೇಕಿದೆ. ಇದು ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಬಹುಮುಖ್ಯವಾಗಿ ಅವೈಜ್ಞಾನಿಕವಾದ ಲಾಜಿಕಲ್ ಪದ್ಧತಿ ಕೈಬಿಡಬೇಕು, ಮೇಲ್ಮನವಿಗೆ ೬ ತಿಂಗಳು ಅವಕಾಶ ಕೊಡಿ ಎಂದು ಒತ್ತಾಯಿಸಿದರು.
ಪ್ರಮುಖರಾದ ಶ್ರೀನಾಥ ಪೂಜಾರಿ, ಭಿ. ಭಗವಾನ ರೆಡ್ಡಿ, ಅಕ್ರಂ ಮಾಶ್ಯಾಳಕರ, ಪ್ರಭುಗೌಡ ಬಿರಾದಾರ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು :ನಾರ್ವೇಕರ

ಜೂ.16-17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ

ಬಸವಾದಿ ಶರಣರ ಹಿಂದೂ ಸಮಾವೇಶ ಬಸವಣ್ಣನಿಗೆ ವಿರೋಧಿ ನಡೆ

ರಂಗಮಂಟಪ ನಿರ್ಮಾಣಕ್ಕೆ ಆಗ್ರಹಿಸಿ ಸಂಸದರಿಗೆ ಗ್ರಾಮಸ್ಥರ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು :ನಾರ್ವೇಕರ
    In (ರಾಜ್ಯ ) ಜಿಲ್ಲೆ
  • ಜೂ.16-17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಅಧ್ಯಕ್ಷ ನಿತಿನ್ ನಬೀನ್ ಹೇಳಿಕೆಯೇ ಎಸ್‌ಐಆರ್ ಕರಾಳತೆಗೆ ನಿದರ್ಶನ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರ ಹಿಂದೂ ಸಮಾವೇಶ ಬಸವಣ್ಣನಿಗೆ ವಿರೋಧಿ ನಡೆ
    In (ರಾಜ್ಯ ) ಜಿಲ್ಲೆ
  • ರಂಗಮಂಟಪ ನಿರ್ಮಾಣಕ್ಕೆ ಆಗ್ರಹಿಸಿ ಸಂಸದರಿಗೆ ಗ್ರಾಮಸ್ಥರ ಮನವಿ
    In (ರಾಜ್ಯ ) ಜಿಲ್ಲೆ
  • ರಕ್ತದಾನ ಇನ್ನೊಂದು ಜೀವಿಯ ಬದುಕಿಗೆ ವರದಾನ
    In ವಿಶೇಷ ಲೇಖನ
  • ಜೋಡಿ ಚುಕ್ಕಿಗಳಂತೆ ಜೋಡಿ ಹಕ್ಕಿಗಳಾಗುವಾ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 13, 2026
    In ದಿನಪತ್ರಿಕೆ
  • ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್
    In ವಿಶೇಷ ಲೇಖನ
  • ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.