Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ

ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ

ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿದ ಶಿಕ್ಷಣ ಸಂಸ್ಥೆಗಳು
(ರಾಜ್ಯ ) ಜಿಲ್ಲೆ

ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿದ ಶಿಕ್ಷಣ ಸಂಸ್ಥೆಗಳು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಪಶ್ಚಿಮ ಬಂಗಾಳ ಆದಾಯ ತೆರಿಗೆ ಇಲಾಖೆ ಮುಖ್ಯ ಪ್ರಧಾನ ಆಯುಕ್ತ ಶ್ರೀನಿವಾಸ ಬಿದರಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಲೆತಲಾಂತರದಿಂದ ಬಂದ ಆಸ್ತಿಗಳನ್ನು ನಮ್ಮ ಹಿರಿಯರು ದಾನ ನೀಡಿದ್ದರ ಫಲವಾಗಿ ಆರಂಭಗೊಂಡ ಶಿಕ್ಷಣ ಸಂಸ್ಥೆಗಳು ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿವೆ ಎಂದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಮುಖ್ಯ ಪ್ರಧಾನ ಆಯುಕ್ತರಾಗಿರುವ ವಿಜಯಪುರದ ಶ್ರೀನಿವಾಸ ಬಿದರಿ ಹೇಳಿದರು.
ಆದಾಯ ತೆರಿಗೆ ಇಲಾಖೆಯಲ್ಲಿ ಪ್ರಧಾನ ಆಯುಕ್ತರಿಂದ ಮುಖ್ಯ ಪ್ರಧಾನ ಆಯುಕ್ತರೆಂದು ಬಡ್ತಿ ಪಡೆದಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಅವರ ಸ್ನೇಹಿತರು, ಶಾಲಾ-ಕಾಲೇಜು ಸಹಪಾಠಿಗಳು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಜಯಪುರದ ದರ್ಬಾರ್, ಪಿಡಿಜೆ, ಬಿಡಿಇ, ಶ್ರೀ ಸಿದ್ದೇಶ್ವರ ಹೈಸ್ಕೂಲ್ ಎಲ್ಲವೂಗಳು ಸಹ 70-100 ವರ್ಷದ ಹಿಂದೆ ಅಂದಿನ ಹಿರಿಯರು ತಮ್ಮ ತಲೆ ತಲಾಂತರದ ಆಸ್ತಿಯನ್ನು ಈ ನಾಡಿನ ಮಕ್ಕಳ ಭವಿಷ್ಯ ಒಳಿತಾಗಲಿ ಎಂದು ದಾನವಾಗಿ ನೀಡಿದ್ದರು. ಅದರ ಫಲವಾಗಿ ಅಂತಹ ಸಂಸ್ಥೆಗಳಲ್ಲಿ ಕಲಿತ ನಮ್ಮಂಥವರು ಉನ್ನತ ಹುದ್ದೆಗೆ ಹೋಗಲು ಸಾಧ್ಯವಾಯಿತು. ಇದಕ್ಕೆ ಕಾರಣರಾದ ಆ ಹಿರಿಯ ಚೇತನಗಳನ್ನು ಸದಾ ಸ್ಮರಿಸಬೇಕು ಎಂದರು.
ಡಾ.ಮಹಾಂತೇಶ ಬಿರಾದಾರ ಮಾತನಾಡಿ, 1992-93 ರಲ್ಲಿ ವಿಜಯಪುರ ಜಿಲ್ಲೆಯಿಂದ ಐ.ಆರ್.ಎಸ್ ಪಾಸಾದ ಮೊದಲ ವ್ಯಕ್ತಿ ಶ್ರೀನಿವಾಸ ಬಿದರಿ ಆಗಿದ್ದಾರೆ. 34 ವರ್ಷಗಳ ಸುಧೀರ್ಘ ಸೇವೆಯಿಂದ ಇಂದು ಪ್ರಧಾನಮಂತ್ರಿ, ವಿತ್ತ ಮಂತ್ರಿಗಳ ಕಾರ್ಯಪಡೆಯಲ್ಲಿ ದೇಶದ ಆರ್ಥಿಕ ನೀತಿ ನಿರೂಪಣೆಗಳನ್ನು ನಿರ್ವಹಿಸುವ ಪ್ರಮುಖ ವ್ಯಕ್ತಿಯಾಗಿದ್ದರೆ. ಇನ್ನೂ ಅವರು ಉನ್ನತ ಸ್ಥಾನಕ್ಕೆ ಹೋಗಲಿದ್ದಾರೆ. ಇದು ವಿಜಯಪುರದವರೆಲ್ಲರಿಗೂ ಹೆಮ್ಮೆಯ, ಅಭಿಮಾನದ ಸಂಗತಿ. ದೇವರಗೆಣ್ಣೂರು ಎಂಬ ಪುಟ್ಟ ಹಳ್ಳಿಯಿಂದ ಬಂದಿರುವ ಇವರು ಇಂದಿಗೂ ವಿಜಯಪುರಕ್ಕೆ ಬಂದರೆ, ಹಳ್ಳಿಯಲ್ಲಿಯೇ ಇರುತ್ತಾರೆ ಮತ್ತು ಹಳೆಯ ಗೆಳೆಯರೊಂದಿಗೆ ಸ್ಪೂರ್ತಿ ಫೌಂಡೇಶನ್ ಮುಖಾಂತರ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾರೆ. ಇದು ಇವರ ಮಣ್ಣಿನ ಗುಣ ತೋರಿಸುತ್ತದೆ ಎಂದರು.
ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಅಧ್ಯಕ್ಷ ರವಿಂದ್ರ ಬಿಜ್ಜರಗಿ ಮಾತನಾಡಿ, ವಿಜಯಪುರದ ವರ್ತಕರ ಮತ್ತು ಎಪಿಎಂಸಿ ಗೆ ಸಂಬಂಧಿಸಿದ ಹಲವಾರು ವ್ಯಾಜ್ಯಗಳನ್ನು ಬಿದರಿ ಅವರ ಗಮನಕ್ಕೆ ತಂದಾಗ ಅವುಗಳಿಗೆ ನ್ಯಾಯಯುತ ಪರಿಹಾರ ದೊರಕಿಸಿದ್ದಾರೆ. ಬಿದರಿ ಮನೆತನ ವಿಜಯಪುರಕ್ಕೆ ಉತ್ತಮ ಕೊಡುಗೆ ನೀಡಿದೆ. ರಾಮಪ್ಪ ಬಿದರಿ ಅವರು ಸಂಸದರಾಗಿ, ಡಾ.ಸಿ.ಆರ್.ಬಿದರಿ, ಡಾ.ಎಲ್.ಎಚ್.ಬಿದರಿ ವೈದ್ಯರಾಗಿ, ಆಶಾ ಬಿದರಿ ಸಾಮಾಜಿಕವಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.
ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಮಾಜಿ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ, ಮಾಜಿ ಶಾಸಕ ಪ್ರೊ.ರಾಜು ಆಲಗೂರ, ಅರುಣ ಹುಂಡೇಕಾರ, ಬಸವರಾಜ ಪಾಟೀಲ, ಡಾ.ವಿಜಯ ಪಾಟೀಲ, ವಿಜಯ ಡೋಣಿ, ಪ್ರಕಾಶ ಹಕ್ಕಪಕ್ಕಿ, ಜಯಾನಂದ ತಾಳಿಕೋಟಿ, ಪ್ರವೀಣ ವಾರದ, ವೀರಣ್ಣ ಹುಂಡೇಕಾರ, ಆನಂದ ಮಂಗಳವೇಡೆ, ದಾದು ತಿವಾರಿ, ಸುಭಾಸ ಬಗಲಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ

ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ

ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ

ಶೇ.೫೦ ದಂಡ ರಿಯಾಯಿತಿಸದುಪಯೋಗಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶೇ.೫೦ ದಂಡ ರಿಯಾಯಿತಿಸದುಪಯೋಗಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನವಿ
    In (ರಾಜ್ಯ ) ಜಿಲ್ಲೆ
  • ಪಡಿತರ ಅಕ್ಕಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಜೂ.೨೩ ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿದ ಶಿಕ್ಷಣ ಸಂಸ್ಥೆಗಳು
    In (ರಾಜ್ಯ ) ಜಿಲ್ಲೆ
  • ನಿಮ್ಮ ದುರಾಡಳಿತ ಮುಚ್ಚಿಕೊಳ್ಳಲು ಆರೆಸ್ಸೆಸ್ ಟೀಕಿಸಬೇಡಿ
    In (ರಾಜ್ಯ ) ಜಿಲ್ಲೆ
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.