Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ ಐಆರ್ ಯಶಸ್ವಿಗೊಳಿಸಲು ಎಡಿಸಿ ಡಾ.ಔದ್ರಾಮ ಸೂಚನೆ
(ರಾಜ್ಯ ) ಜಿಲ್ಲೆ

ಎಸ್ ಐಆರ್ ಯಶಸ್ವಿಗೊಳಿಸಲು ಎಡಿಸಿ ಡಾ.ಔದ್ರಾಮ ಸೂಚನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಇದೇ ಜೂ. ೨೦ರಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಗಳು ವಾಸ್ತವದಲ್ಲಿ ಪ್ರಾರಂಭವಾಗಲಿದ್ದು, ಜಿಲ್ಲೆಯ ಎಲ್ಲ ೨೦೯೨ ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿಗಳು ಮತ್ತು ಪ್ರತಿ ೧೦ ಮತಗಟ್ಟೆಗೆ ಒಬ್ಬರಂತೆ ಮತಗಟ್ಟೆ ಅಧಿಕಾರಿಗಳ ಮೇಲ್ವಿಚಾರಕರು ಇರುವಂತೆ ನೋಡಿಕೊಂಡು ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳವರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಯೋವೃದ್ಧರು ಅನಾರೋಗ್ಯದಿಂದ ಬಳಲುತ್ತಿರುವವರು, ವಿಶೇಷಚೇತನರು, ಬಡವರು ಹಾಗೂ ದುರ್ಬಲರಿಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ವಯೋವೃದ್ಧರು, ಅನಾರೋಗ್ಯದಿಂದ ಬಳಲುತ್ತಿರುವವರು, ವಿಶೇಷಚೇತನರು, ಬಡವರು ಹಾಗೂ ದುರ್ಬಲರು ಸಕ್ರಿಯವಾಗಿ ಭಾಗವಹಿಸಲು ಸುಲಭವಾಗುವಂತೆ ಸ್ವಯಂ ಸೇವಕರನ್ನು ನಿಯೋಜಿಸಿಕೊಳ್ಳಬೇಕು ಎಂದರು.
ತಾಲೂಕಾ ಮಟ್ಟದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಜರುಗಿಸಿ, ಅವರಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ತಿಳುವಳಿಕೆ ನೀಡಿ, ಜಿಲ್ಲಾಧಿಕಾರಿ ಕಚೇರಿಗೆ ವರದಿ ಸಲ್ಲಿಸಬೇಕು ಎಂದ ಅವರು, ಎಸ್ ಐಆರ್ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ-೧೯೫೦ ರಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
೨೦೦೨ ರ ಮತದಾರರ ಪಟ್ಟಿಯನ್ನು ೨೦೨೫ ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡಲು ಇನ್ನು ಅವಕಾಶವಿದ್ದು, ಬಾಕಿ ಮತದಾರರ ಮ್ಯಾಪಿಂಗ್ ಕಾರ್ಯವನ್ನು ಕೈಗೊಳ್ಳಬೇಕು ಎಂದು ಸೂಚಿಸಿದ ಅಪರ ಜಿಲ್ಲಾಧಿಕಾರಿ ಅವರು, ಎಲ್ಲ ವಿಧಾನಸಭಾ ಮತಕ್ಷೇತ್ರದ ಎಲ್ಲ ಮತಗಟ್ಟೆ ಅಧಿಕಾರಿಗಳಿಗೆ ಇನ್ನೊಂದು ತರಬೇತಿ ನೀಡಬೇಕು ಎಂದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಮತಗಟ್ಟೆ ಏಜೆಂಟುರುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜಿಲ್ಲೆಯ ಎಲ್ಲ ವಿಧಾನಸಭಾ ಮತಕ್ಷೇತ್ರದ ಎಲ್ಲ ಮತಗಟ್ಟೆಗಳಿಗೆ ನೇಮಕಾತಿ ಕುರಿತು ಕ್ರಮ ವಹಿಸಬೇಕು ಎಂದರು.
ಗಣತಿ ಫಾರ್ಮಗಳನ್ನು ಮತಗಟ್ಟೆ ಅಧಿಕಾರಿಗಳು, ಕಡ್ಡಾಯವಾಗಿ ಮತದಾರರಿಗೆ ಅಥವಾ ಸಂಬಂಧಿಕರಿಗೆ ಮಾತ್ರ ನೀಡಲು ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನಾಗಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳವರನ್ನು ಆಯಾ ತಾಲೂಕುಗಳ ತಾಲೂಕಾ ಮಟ್ಟದ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದರು.
ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ವ್ಯಾಪಕ ಪ್ರಚಾರಕ್ಕಾಗಿ ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೊರಗುಳಿಯದಂತೆ, ಅನರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸದಿರುವುದನ್ನು ಮತದಾರರ ಸೇರ್ಪಡೆ ಅಥವಾ ಹೆಸರನ್ನು ಅಳಿಸುವ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಪ್ರೇರೇಪಿಸಲು ಮತದಾರರು, ರಾಜಕೀಯ ಪಕ್ಷಗಳು, ನಾಗರಿಕ ಸಮಾಜ ಸಂಸ್ಥೆಗಳು, ಮೂಲ ನಿವಾಸಿಗಳ ಕಲ್ಯಾಣ ಸಂಘಗಳು, ಮಾಧ್ಯಮ ಸಂಸ್ಥೆಗಳು ವ್ಯಾಪಕವಾಗಿ ತಲುಪುವ ಉದ್ದೇಶದಿಂದ ಸಮಗ್ರ ಜಾಗೃತಿ ಅಭಿಯಾನಗಳ ಮೂಲಕ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಇದೇ ವೇಳೆ ವಿನಂತಿಸಲಾಯಿತು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ತೆಗೆದುಕೊಂಡ ಕ್ರಮಗಳ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ಜನರಿಗೆ ತಿಳುವಳಿಕೆ ನೀಡಬೇಕು ಎಂದು ಡಾ. ಔದ್ರಾಮ ತಿಳಿಸಿದರು.
ಬಿಎಲ್ ಒ ಫೆಸಿಲಿಟೇಶನ್ ಸೆಂಟರ್ ಗಳನ್ನು ತಾಂತ್ರಿಕ ಸಹಾಯ ಬಯಸುವ ಬಿಎಲ್ ಒಗಳಿಗೆ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಲು ತಾಂತ್ರಿಕ ನೆರವನ್ನು ಒದಗಿಸುವ ಕುರಿತು, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಗ್ರಾಮ ಆಡಳಿತಾಧಿಕಾರಿ ಕಚೇರಿ, ಪಂಚಾಯತ್ ಕಟ್ಟಡಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಡಿ ಅನುದಾನ ಪಡೆದು ನಿರ್ಮಿಸಿರುವ ಸಮುದಾಯ ಭವನಗಳು, ನಗರ ಪ್ರದೇಶಗಳಲ್ಲಿ ವಾರ್ಡ್ ಕಚೇರಿಗಳು, ಮುಖ್ಯ ಪೌರಾಯುಕ್ತರ ಕಚೇರಿಗಳು, ತಾಲ್ಲೂಕು ಕೇಂದ್ರದಲ್ಲಿ ತಾಲ್ಲೂಕು ಕಚೇರಿ (ತಹಶೀಲ್ದಾರರ ಕಚೇರಿ), ಗ್ರಾಮಒನ್, ನಾಡ ಕಚೇರಿಗಳಲ್ಲಿ ಬಿಎಲ್ ಒ
ಸೆಂಟರ್ ಗಳನ್ನು ಸ್ಥಾಪಿಸಿಕೊಳ್ಳಲು ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳವರಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.
ವೋಟರ್ ಫೆಸಿಲಿಟೇಶನ್ ಸೆಂಟರ್ ಗಳನ್ನು ಮತದಾರರಿಗೆ ಸುಲಭವಾಗಿ ಹಾಗೂ ಸಾಧ್ಯವಾಗಿರುವಂತಹ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಸ್ಥಾಪಿಸಿ, ಮತದಾರರಿಗೆ ಸಹಾಯವಾಗುವಂತೆ ವ್ಯವಸ್ಥೆ ಮಾಡುವುದು ಬಿಎಲ್ ಒಗಳಿಗೆ ವಹಿಸಿಕೊಟ್ಟು, ಮೇಲುಸ್ತುವಾರಿ ನೋಡಿಕೊಳ್ಳಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲೆಯ ನೋಂದಣಾಧಿಕಾರಿಗಳಾದ ವಿಜಯ ಮೆಕ್ಕಳಕಿ, ರಾಜಶೇಖರ ಡಂಬಳ, ವಿನಯ ಪಾಟೀಲ, ಗುರುನಾಥ ದಡ್ಡೆ, ಚಿದಾನಂದ ಗುರುಸ್ವಾಮಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲದಾರರು ಮತ್ತು ಮತಕ್ಷೇತ್ರದ ತರಬೇತುದಾರರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.