Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂಗಮೇಶ್ವರ ಜಾತ್ರೆ: ಮೈನವಿರೇಳಿಸಿದ ಭಾರ ಎತ್ತುವ & ಕುಸ್ತಿ ಸ್ಪರ್ಧೆ

ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್-ಪ್ರತಿಪಕ್ಷಗಳು ಸಿದ್ಧತೆ

ಜಾಗತೀಕರಣ ಪ್ರಭಾವದಿಂದ ದೂರಾದ ನಾಟಕ ಸಂಸ್ಕೃತಿ :ಡಾ.ಚನ್ನವೀರ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಿತ್ತೂರು ಚೆನ್ನಮ್ಮಳ ಆದರ್ಶ-ವಿಚಾರಗಳು ನಮಗೆ ದಾರಿದೀಪ
(ರಾಜ್ಯ ) ಜಿಲ್ಲೆ

ಕಿತ್ತೂರು ಚೆನ್ನಮ್ಮಳ ಆದರ್ಶ-ವಿಚಾರಗಳು ನಮಗೆ ದಾರಿದೀಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಗೆ ಚಾಲನೆ ನೀಡಿ ಎಡಿಸಿ ಮಹಾದೇವ ಮುರಗಿ ಅಭಿಮತ

ವಿಜಯಪುರ: ನಾಡು-ನುಡಿಗಾಗಿ, ಈ ದೇಶಕ್ಕಾಗಿ ಸಮಾಜದ ಸುಧಾರಣೆಗಾಗಿ, ಸ್ವಾಭಿಮಾನಕ್ಕಾಗಿ ಧೀರೋದಾತ್ತೆತೆಯಿಂದ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮರಂತಹ ಮಹನೀಯರ ಆದರ್ಶ ವಿಚಾರಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಈ ದೇಶದ ಇತಿಹಾಸ, ಸಮಾಜದ ಸುಧಾರಣೆಗಾಗಿ ಹೋರಾಡಿದ ಮಹನೀಯರ ಬಗ್ಗೆ ಇಂದಿನ ಯುವ ಪೀಳಿಗೆ ಅರಿತುಕೊಳ್ಳುವ ಉದ್ದೇಶದಿಂದ ಜಯಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕಿತ್ತೂರು ಚೆನ್ನಮ್ಮ ಅವರು ಮಾಡಿದ ಕಾರ್ಯಗಳಿಂದ ಇತಿಹಾಸದ ಪುಟದಲ್ಲಿ ಅವರು ಅಜರಾಮರವಾಗಿದ್ದಾರೆ. ಇಂತಹ ಮಹನೀಯರ ಕುರಿತಾಗಿ ಅಧ್ಯಯನ ಮಾಡುವ ಮೂಲಕ ಮತ್ತಷ್ಟು ತಿಳಿದುಕೊಳ್ಳಬೇಕು.ಧೈರ್ಯ ಶೌರ್ಯ ಕೆಚ್ಚೆದೆಯ ಹೋರಾಟದ ಕಿತ್ತೂರು ಚೆನ್ನಮ್ಮ ಗುಣಗಳನ್ನು ಅಳವಡಿಸಿಕೊಂಡು ಬೆಳೆಸಿಕೊಂಡಾಗ ಮಾತ್ರ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ. ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಮಹನೀಯರ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಉಪನ್ಯಾಸಕರಾಗಿ ಭಾಗವಹಿಸಿದ್ದ ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ ಅವರು ಮಾತನಾಡಿ,
ಈ ನೆಲದ ಮಣ್ಣಿನಲ್ಲಿ, ಗಾಳಿಯ ಪರಿಮಳದಲ್ಲಿ, ಅರಿವಿನ ಬೆಳಕಿನಲ್ಲಿ ಇಂದಿಗೂ ಜೀವಕಳೆಯಾಗಿ ಚೆನ್ನಮ್ಮ ಅವರ ಕ್ಷಾತ್ರ ತೇಜಸ್ಸು ತ್ಯಾಗಕ್ಕೆ ಸ್ವಾವಲಂಬನೆಗೆ ಗರುರುತಿಸಿಕೊಂಡಿದ್ದನ್ನು ಗಮನಿಸಬಹುದಾಗಿದೆ. ಹೆಣ್ಣು ಮಕ್ಕಳು ಎಲ್ಲಾ ರಂಗಗಳಲ್ಲೂ ಮುಂದೆ ಬಂದು ತಮ್ಮ ಜೀವನವನ್ನು ಉಜ್ವಲಗೊಳಿಸಿಕೊಳ್ಳಬೇಕು. ಇತಿಹಾಸ ಮುಂಬರುವ ತಲೆಮಾರಿಗೆ ತಲುಪಿಸಬೇಕು. ಅವರ ಗುಣ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಜಯಂತಿ ಕಾರ್ಯಕ್ರಮದಲ್ಲಿ ವಿರೇಶ ವಾಲಿ ತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್ ಎಚ್ ನಾಗೂರ, ಮುಖಂಡರಾದ ಬಿ.ಎಂ.ಪಾಟೀಲ, ಶ್ರೀಶೈಲ ಬುಕ್ಕಣಿ, ಸಿದ್ದು ಅವಟಿ, ದಾನೇಶ ಅವಟಿ,ವಿಜಯ ಹಿರೋಳಿ, ನಿಂಗಪ್ಪ ಸಂಗಾಪೂರ, ನಿವೃತ್ತ ಶಿಕ್ಷಕ ಎಚ್.ಮಮದಾಪುರ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂಗಮೇಶ್ವರ ಜಾತ್ರೆ: ಮೈನವಿರೇಳಿಸಿದ ಭಾರ ಎತ್ತುವ & ಕುಸ್ತಿ ಸ್ಪರ್ಧೆ

ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್-ಪ್ರತಿಪಕ್ಷಗಳು ಸಿದ್ಧತೆ

ಜಾಗತೀಕರಣ ಪ್ರಭಾವದಿಂದ ದೂರಾದ ನಾಟಕ ಸಂಸ್ಕೃತಿ :ಡಾ.ಚನ್ನವೀರ ಶ್ರೀ

ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಹಳ್ಳಿ ಹಬ್ಬ :ಬಿರಾದಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂಗಮೇಶ್ವರ ಜಾತ್ರೆ: ಮೈನವಿರೇಳಿಸಿದ ಭಾರ ಎತ್ತುವ & ಕುಸ್ತಿ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್-ಪ್ರತಿಪಕ್ಷಗಳು ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಜಾಗತೀಕರಣ ಪ್ರಭಾವದಿಂದ ದೂರಾದ ನಾಟಕ ಸಂಸ್ಕೃತಿ :ಡಾ.ಚನ್ನವೀರ ಶ್ರೀ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಹಳ್ಳಿ ಹಬ್ಬ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಪದ್ಮರಾಜ ಕಾಲೇಜ್ ವಿದ್ಯಾರ್ಥಿಗಳು ವಿವಿ ಬ್ಲೂ ಆಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ಲಾಘನೀಯ :ನಾಗರತ್ನ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ ಲೋಕ ವಿಸ್ಮಯಗೊಳಿಸುವ ಕಬಿನಿ ಜಲಾಶಯದೊಡಲು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಆಹಾರ ಪದಾರ್ಥಗಳ ಪ್ರದರ್ಶನ :ಸಾಮೂಹಿಕ ಭೋಜನ
    In (ರಾಜ್ಯ ) ಜಿಲ್ಲೆ
  • ೬ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.