ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ,ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್: hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜೂನ್.೩೦ ಕೊನೆಯ ದಿನವಾಗಿದೆ.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ಸೇರಿ ರೂ.೨.೫೦ ಲಕ್ಷಗಳನ್ನು ಮೀರಿರಬಾರದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಕಚೇರಿ, ವಿಜಯಪುರ ದೂರವಾಣಿ ಸಂಖ್ಯೆ.೦೮೩೫೨-೨೯೫೫೨೩ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ವಿಜಯಪುರ ಮೊ.೮೧೨೩೭೧೦೭೬೬, ಬಸವನಬಾಗೇವಾಡಿ ಮೊ.೯೯೭೨೩೪೦೭೨೧, ಮುದ್ದೇಬಿಹಾಳ ಮೊ.೮೭೨೨೪೪೫೫೫೨, ಇಂಡಿ ಮೊ.೯೯೦೦೧೦೯೭೫೯ ಹಾಗೂ ಸಿಂದಗಿ ಮೊ.೯೦೩೫೫೫೮೬೦೯ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
