Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
(ರಾಜ್ಯ ) ಜಿಲ್ಲೆ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನೈಡೆಕ್ ಕಂಪನಿ ಕ್ಯಾಂಪಸ್ ಸಂದರ್ಶನ | ಸಚಿವ ಎಂ ಬಿ ಪಾಟೀಲ ಸಂತಸ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹುಬ್ಬಳ್ಳಿಯಲ್ಲಿ ನೆಲೆಯೂರಿರುವ ಜಪಾನ್ ಮೂಲದ ಪ್ರತಿಷ್ಠಿತ ನೈಡೆಕ್ ಕಂಪನಿಯು ನಡೆಸಿದ ಎರಡು ದಿನಗಳ ಕ್ಯಾಂಪಸ್ ಸಂದರ್ಶನದಲ್ಲಿ ತಮ್ಮ ನೇತೃತ್ವದ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನ ಒಟ್ಟು 94 ವಿದ್ಯಾರ್ಥಿಗಳಿಗೆ ಉದ್ಯೋಗ ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕೈಗಾರಿಕಾ ಬೆಳವಣಿಗೆಯ ಮೂಲಕ ಉತ್ತರ ಕರ್ನಾಟಕದ ಪ್ರಗತಿಗೆ ಶ್ರಮಿಸಲಾಗುತ್ತಿದೆ. ಇದರ ಲಾಭವು ವಿಜಯಪುರ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ ಹೀಗೆ ಈ ಭಾಗದ ಹಲವು ಜಿಲ್ಲೆಗಳ ಯುವಜನರಿಗೆ ಸಿಕ್ಕುತ್ತಿದೆ. ನೈಡೆಕ್ ಕಂಪನಿ ನಡೆಸಿರುವ ಕ್ಯಾಂಪಸ್ ಸಂದರ್ಶನ ಇದಕ್ಕೊಂದು ನಿದರ್ಶನವಾಗಿದೆ ಎಂದಿದ್ದಾರೆ.
ತಾವು ಕೈಗಾರಿಕಾ ಸಚಿವರಾದ ಬಳಿಕ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಇಲಾಖೆಯ ಮೂಲಕವೂ ಹಲವು ಉಪಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನೈಡೆಕ್ ಸಂಸ್ಥೆಗೆ ತಾವು ಕೈಗಾರಿಕಾ ಸಚಿವನಾದ ಮೇಲೆ ಧಾರವಾಡ ಸಮೀಪ ಭೂಮಿ‌ ಒದಗಿಸಿ, ಅಲ್ಲಿ ವಿದ್ಯುಚ್ಚಾಲಿತ ವಾಹನಗಳ ಮೋಟಾರು ತಯಾರಿಕೆಗೆ ಚಾಲನೆ ನೀಡಲಾಗಿದೆ. ಆ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಮಕ್ಕಳಿಗೆ ಹೆಚ್ಚಿನ ಉದ್ಯೋಗ ನೀಡಬೇಕು ಎಂದು ಸಲಹೆ ನೀಡಿದ್ದೆ. ಆ ಪ್ರಕಾರ ಸಂಸ್ಥೆಯವರು ಮಾಡಿ ತೋರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನೈಡೆಕ್ ಸಂಸ್ಥೆಯ ಉನ್ನತಾಧಿಕಾರಿಗಳ ತಂಡವು ಜೂನ್ 16 ಮತ್ತು 17ರಂದು ಎರಡು ದಿನಗಳ ಕಾಲ ಕ್ಯಾಂಪಸ್ ಸಂದರ್ಶನ ನಡೆಸಿತು. ಇದರಲ್ಲಿ ಒಟ್ಟು 110 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಂತಿಮವಾಗಿ 46 ಡಿಪ್ಲೊಮಾ ಮತ್ತು 48 ಐಟಿಐ ಪದವೀಧರರು ಆಯ್ಕೆಯಾದರು. ಇವರೆಲ್ಲರಿಗೂ ನೈಡೆಕ್ ಕಂಪನಿ ಆಕರ್ಷಕ ವೇತನದ ಉದ್ಯೋಗಗಳನ್ನು ನೀಡಿದೆ. ಇದಕ್ಕಾಗಿ ಕಂಪನಿಗೂ ಅಭಿನಂದನೆಗಳು ಸಲ್ಲುತ್ತವೆ ಎಂದು ಅವರು ಹೇಳಿದ್ದಾರೆ.
ಎಲೆಕ್ಟ್ರಿಕಲ್, ಎಂಜಿನಿಯರಿಂಗ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಾನಿಕ್ ವಿಭಾಗಗಳ ಅರ್ಹ ವಿದ್ಯಾರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಂಡಿದ್ದರು. ತಮ್ಮ ಊರಿನ ಹತ್ತಿರದಲ್ಲೇ ಈಗ ಉದ್ಯೋಗಾವಕಾಶ ದೊರೆಯುತ್ತಿರುವುದು ಸಂತಸಕ್ಕೆ ಕಾರಣಾವಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ನೈಡೆಕ್ ಕಂಪನಿಯ ಅಧಿಕಾರಿಗಳಾದ ಸೋಮಶೇಖರ್, ಮಂಜುನಾಥ್, ಚಂದನಾ ಮತ್ತು ನಿಶ್ಮಿಕಾ ಅವರು ಕ್ಯಾಂಪಸ್ ಸಂದರ್ಶನ ನಡೆಸಿದರು. ಕಾಲೇಜಿನ ಪ್ರಾಂಶುಪಾಲ ಪ್ರಭುದೇವ ಕಳಸಗೊಂಡ, ಉದ್ಯೋಗಾಧಿಕಾರಿ ಸುಧನ್ವ ಕುಲಕರ್ಣಿ, ಐಟಿಐ ಉದ್ಯೋಗಾಧಿಕಾರಿ ವಾಗೀಶ ಮರೀಮಠ ಕೂಡ ಸಮನ್ವಯಾಧಿಕಾರಿಗಳಾಗಿ ಇದ್ದರು ಎಂದು ಅವರು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
  • ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆ ಲೈಸನ್ಸ್ ನೀಡದಿರಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.